ಸಿಲ್ಲಿ ಪಾಲಿಟಿಕ್ಸ್: ಟೇಪ್ ಕಟ್ ಮಾಡುವ ವಿಚಾರದಲ್ಲಿ ಎಂಟಿಬಿ-ಶರತ್ ಬಚ್ಚೇಗೌಡ ಗಲಾಟೆ
ಬೆಂಗಳೂರು, ಫೆ 10: ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಗೆ ಟೇಪ್ ಕಟ್ ಮಾಡುವ ವಿಚಾರದಲ್ಲಿ ಇಬ್ಬರು ಜನ ಪ್ರತಿನಿಧಿಗಳು ಸಾರ್ವಜನಿಕರ ಮುಂದೆಯೇ ಕಿತ್ತಾಡಿಕೊಂಡಿದ್ದಾರೆ. ಏಕವಚನದಲ್ಲೇ ಬೈದಾಡಿಕೊಂಡ ಈ ಇಬ್ಬರು ನಾಯಕರಿಗೆ ಲೋಕಲ್ ಪಾಲಿಟಿಕ್ಸ್ ನಲ್ಲಿ ಇದು ಹೊಸದೇನಲ್ಲ.
ಬೆಂಗಳೂರು ಗ್ರಾಮಾಂತರ, ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮ ಪಂಚಾಯತಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ಥಳೀಯ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಮತ್ತು ಸಚಿವ ಎಂ.ಟಿ.ಬಿ ನಾಗರಾಜ್ ಆಗಮಿಸಿದ್ದರು.
ಟೇಪ್ ಕಟ್ ಮಾಡಲು ತಂದಿದ್ದ ಕತ್ತರಿಯನ್ನು ಮೊದಲು ಎತ್ತಿಕೊಂಡು ಶರತ್ ಟೇಪ್ ಕಟ್ ಮಾಡಲು ಮುಂದಾಗಿದ್ದಾರೆ. "ಸಚಿವರು ಅನ್ನುವ ಮರ್ಯಾದೆ ಬೇಡ್ವೇನಯ್ಯಾ, ಇದೇ ಆಗೋಯಿತು ನಿಂದು"ಎಂದು ಸಾರ್ವಜನಿಕರ ಸಮ್ಮುಖದಲ್ಲೇ ಎಂ.ಟಿ.ಬಿ ನಾಗರಾಜ್ ಬೇಸರ ವ್ಯಕ್ತ ಪಡಿಸಿದ್ದಾರೆ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಶರತ್ ಬಚ್ಚೇಗೌಡ ಟೇಪ್ ಕಟ್ ಮಾಡಿ, ಕಟ್ಟಡದ ಒಳಗೆ ಹೋಗಿದ್ದಾರೆ.

ಇಬ್ಬರೂ ವೇದಿಕೆಗೆ ಹೋಗುವ ಜಾಗದಲ್ಲಿ, "ಅಪ್ಪಮಕ್ಕಳದ್ದು ಇದೇ ಆಗೋಯಿತು, ಬಚ್ಚೇಗೌಡ್ರ ಹಸ್ತಕ್ಷೇಪ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ"ಎಂದು ಎಂಟಿಬಿಯವರು, ಶರತ್ ಅವರಿಗೆ ಕೈತೋರಿಸಿ ಮಾತನಾಡಿದ್ದಾರೆ. ಇದಕ್ಕೆ ಶರತ್ ಬಚ್ಚೇಗೌಡ ಏರುಧ್ವನಿಯಲ್ಲಿ ತಿರುಗೇಟು ನೀಡಿದ್ದಾರೆ.
"ಕೈತೋರಿಸಿ ಮಾತನಾಡಬೇಡಿ, ಮರ್ಯಾದೆ ಕೊಟ್ಟು ಮಾತನಾಡಿ, ನನ್ನ ಬಗ್ಗೆ ಬೇಕಾದರೆ ಮಾತನಾಡಿ, ನನ್ನ ತಂದೆ ಬಚ್ಚೇಗೌಡ್ರ ವಿಚಾರವನ್ನು ಯಾಕೆ ಪ್ರಸ್ತಾವಿಸುತ್ತೀರಾ, ಅವರೇನು ಮಾಡಿದ್ದಾರೆ"ಎಂದು ಶರತ್ ಬಚ್ಚೇಗೌಡ ಆಕ್ರೋಶ ಹೊರಹಾಕಿದ್ದಾರೆ. ಆಗ ಅಲ್ಲಿದ್ದ ಎರಡೂ ನಾಯಕರ ಹಿಂಬಾಲಕರು ಇಬ್ಬರನ್ನೂ ಸಮಾಧಾನ ಪಡಿಸಿದ್ದಾರೆ. ಅಲ್ಲಿಗೂ ಮುಗಿಯಲಿಲ್ಲ..
ಕಾರ್ಯಕ್ರಮದ ಸಭಾ ವೇದಿಕೆಯಲ್ಲೂ ಇಬ್ಬರು ನಾಯಕರು ಕಿತ್ತಾಟ ಮುಂದುವರಿದಿತ್ತು. ಆಯೋಜಕರು ಇದೊಂದು ಸರಕಾರೀ ಕಾರ್ಯಕ್ರಮ ಇಬ್ಬರೂ ಜನಪ್ರತಿನಿಧಿಗಳು ಮಾತನಾಡಬೇಕು, ರಾಜಕೀಯ ವೇದಿಕೆಯಲ್ಲಿ ಬಿಡಿ, ಬಂದ ಸಾರ್ವಜನಿಕರಿಗೆ ಸರಕಾರೀ ಕಾರ್ಯಕ್ರಮದ ಬಗ್ಗೆ ವಿವರಣೆಯನ್ನು ನೀಡಿ ಎಂದು ಪರಿಪರಿಯಾಗಿ ಒತ್ತಾಯಿಸಿದರು. ಆದರೂ, ಇಬ್ಬರ ಜಗಳ ಮುಂದುವರಿಯುತ್ತಲೇ ಇತ್ತು. ಕೊನೆಗೆ, ಪೊಲೀಸರು ಮಧ್ಯಪ್ರವೇಶಿಸಿ ಇಬ್ಬರು ನಾಯಕರನ್ನು ಸಮಾಧಾನ ಪಡಿಸಿ ಉಸ್ಸಪ್ಪಾ.. ಎಂದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications