ಮಾಜಿ ಸಿಎಂ ಎಸ್ಎಂಕೆ ಮನೆಯಲ್ಲಿ ತಾಂಬೂಲ ಶಾಸ್ತ್ರ ಮುಗಿಸಿದ ಡಿಕೆಶಿ ಕುಟುಂಬ
ಬೆಂಗಳೂರು, ಜೂ. 14: ರಾಜಕೀಯ ಗುರು-ಶಿಷ್ಯರು ಎಂದೇ ಕರೆಯಲ್ಪಡುವ ಮಾಜಿ ಸಿಎಂ ಎಸ್.ಎಂ. ಕೃಷ್ಣಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದೀಗ ಬೀಗರಾಗುತ್ತಿದ್ದಾರೆ. ಎಸ್ಎಂಕೆ ಮೊಮ್ಮಗ (ದಿ. ಸಿದ್ದಾರ್ಥ್ ಪುತ್ರ) ಅಮಾತ್ಯ ಹಾಗೂ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಮದುವೆ ಮಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಈ ಹಿಂದೆಯೆ ಬಂದಿತ್ತು.
ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಎಸ್ಎಂಕೆ ಅಳಿಯ ದಿ. ಸಿದ್ದಾರ್ಥ ಅವರ ಪುತ್ರ ಅಮಾತ್ಯ ವಿವಾಹಕ್ಕೆ ಮುನ್ನುಡಿಯಾಗಿ ಹುಡುಗನನ್ನು ನೋಡುವ (ತಾಂಬೂಲ) ಶಾಸ್ತ್ರವನ್ನು ಡಿಕೆಶಿ ಕುಟುಂಬ ಮಾಡಿದೆ. ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಕುಟುಂಬ ಭೇಟಿ ನೀಡಿತ್ತು. ಬಾಗಿಲಿಗೆ ಬಂದು ನೆಂಟರನ್ನು ಎಸ್ಎಂಕೆ ದಂಪತಿ ಸ್ವಾಗತಿಸಿದ್ದಾರೆ. ಬೀಗತನದಿಂದ ಮಾಜಿ ಸಿಎಂ ಎಸ್ಎಂಕೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಸಂಭ್ರಮ ಮೂಡಿದೆ. ಬೆಳಗ್ಗೆಯಷ್ಟೆ ಕೆಪಿಸಿಸಿ ಕಚೇರಿಯಲ್ಲಿ ಹೋಮ ಹವನದಲ್ಲಿ ಡಿಕೆಶಿ ಭಾಗವಹಿಸಿದ್ದರು.

ಈ ಹಿಂದೆಯೂ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಆಪ್ತ ಬಳಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುರತಿಸಿಕೊಂಡಿದ್ದರು. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿಯನ್ನು ಹಿಡಿದಿದ್ದಾಗ ಡಿ.ಕೆ. ಶಿವಕುಮಾರ್ ಅವರನ್ನು ಶಾಡೊ ಸಿಎಂ ಎಂದೇ ಕರೆಯಲಾಗುತ್ತಿತ್ತು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ ಹೈಕಮಾಂಡ್ ಜೊತೆಗಿನ ವೈಮನಸ್ಸಿನಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಎಸ್ಎಂಕೆ ಬಿಜೆಪಿ ಸೇರಿದ್ದರು.

ಕಾಂಗ್ರೆಸ್ ಪಕ್ಷವನ್ನು ಎಸ್.ಎಂ. ಕೃಷ್ಣ ಅವರು ತೊರೆದ ಮೇಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಸ್ಎಂಕೆ ಸಂಪರ್ಕ ಕಡಿದುಕೊಂಡಿರಲಿಲ್ಲ. ಎಸ್ಎಂಕೆ ಅಳಿಯ ಸಿದ್ಧಾರ್ಥ ಅವರು ಆತ್ಮಹತ್ಯೆ ಮಾಡಿಕೊಂಡಾಗಲೂ ಎಸ್ಎಂಕೆ ಅವರಿಗೆ ಧೈರ್ಯ ತುಂಬಿದ್ದು ಇದೇ ಡಿಕೆಶಿ. ಇದೀಗ ರಾಜಕೀಯ ಗುರುವಿನ ಮೊಮ್ಮಗನಿಗೆ ಪುತ್ರಿಯನ್ನು ವಿವಾಹ ಮಾಡಿಕೊಡುವ ಮೂಲಕ ಎರಡು ರಾಜಕೀಯ ಕುಟುಂಬಗಳು ನೆಂಟಸ್ತನ ಬೆಳೆಸಿವೆ.

-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications