Second International Airport: 2ನೇ ಏರ್ಪೋರ್ಟ್ ಯೋಜನೆಗೆ BIAL ಭೇಟಿ, ಮಹತ್ವದ ಚರ್ಚೆ
ಬೆಂಗಳೂರು, ಏಪ್ರಿಲ್ 29: ಬೆಂಗಳೂರು ಎರಡನೇ ವಿಮಾನ ನಿಲ್ದಾಣ (Bengaluru Second Airport) ನಿರ್ಮಾಣದ ಸ್ಥಳ ಪರಿಶೀಲನೆ ಪೂರ್ಣಗೊಂಡಿದೆ. ಬೆಂಗಳೂರಿಗೆ ಟಕ್ಕರ್ ನೀಡುವಂತೆ ತಮಿಳುನಾಡು ಸಹ ಹೊಸೂರಿನಲ್ಲಿ ವಿಶಾಲ 2000 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಏರ್ಪೋರ್ಟ್ ನಿರ್ಮಿಸುವ ಯೋಜನೆಗೆ ಘೋಚಿಸಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ತಮಿಳುನಾಡಿನ ಸರ್ಕಾರ ಏರ್ಪೋರ್ಟ್ ಯೋಜನೆಗಾಗಿ BIAL ಬೆಂಬಲಿತ ಸಂಸ್ಥೆಯನ್ನು ಸಂಪರ್ಕಿಸಿದೆ.
ಹೊಸೂರಿನಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಬೆಂಬಲಿತ ಫೇರ್ಫ್ಯಾಕ್ಸ್ ಸಂಸ್ಥೆಯೊಂದಿಗೆ ಚರ್ಚೆ ನಡೆಸಿದೆ. ಈಗಾಗಲೇ ಈ ಬಗ್ಗೆ BIAL ಸಕ್ರಿಯವಾಗಿ ಉತ್ತರಿಸಿದೆ. ಇನ್ನಷ್ಟು ಚರ್ಚೆಗಳು ನಡೆಯಬೇಕಿದೆ. ಇದೆಲ್ಲ ಬೆಳವಣಿಗೆ ನೋಡಿದರೆ ತಮಿಳುನಾಡು ಸರ್ಕಾರ ಏರ್ಪೋರ್ಟ್ ನಿರ್ಮಾಣದಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ ಎಂಬುದು ಗೊತ್ತಾಗುತ್ತದೆ.

ವಾರ್ಷಿಕವಾಗಿ 30 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಣೆ ಸಾಮರ್ಥ್ಯದ ಸುವ್ಯವಸ್ಥಿತ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದರು. ಈ ಏರ್ಪೋರ್ಟ್ ಒಟ್ಟು ಸುಮಾರು 2,000 ಎಕರೆಗಳಲ್ಲಿ ಈ ಏರ್ಪೋರ್ಟ್ ತಲೆ ಎತ್ತಲಿದೆ. ಇದೊಂದು ಮಹತ್ವದ ಯೋಜನೆ ಆಗಿರುವ ಕಾರಣ, ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮದ (ಟಿಡ್ಕೊ) ಉನ್ನತ ಅಧಿಕಾರಿಗಳು ಬಿಐಎಎಲ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ತಮಿಳುನಾಡಿನಲ್ಲಿ 10,800 ಕ್ಕೂ ಹೆಚ್ಚುಸ್ಟಾರ್ಟ್-ಅಪ್ ಕಂಪನಿಗಳು ಬೆಳೆಯುತ್ತಿವೆ ಎಂದು ಟಿ.ಎಂ. ಅನ್ಬರಸನ್ ಹೇಳಿದ್ದಾರೆ. ಬಿಐಎಎಲ್ ಜೊತೆ ಸಭೆ ನಡೆದಿದೆ. 2033 ರವರೆಗೆ 150 ಕಿಲೋಮೀಟರ್ ವ್ಯಾಪ್ತಿಯಲ್ಲಿ ಹೊಸ ವಿಮಾನ ನಿಲ್ದಾಣ ಇರಬಾರದು ಎಂಬ ಒಪ್ಪಂದಿವೆ. ಹೀಗಾಗಿ ಅದಕ್ಕೂ ಮೊದಲು ಹೊಸೂರು ವಿಮಾನ ನಿಲ್ದಾಣವನ್ನು ನಿರ್ವಹಿಸುವುದು ಆಗುವುದಿಲ್ಲ. ಆದರೆ ನಿರ್ಮಾಣಕ್ಕೆ ಬೇಕಾದ ಎಲ್ಲ ಆಯ್ಕೆಗಳು, ಪೂರಕೆ ಅಂಶಗಳನ್ನು ಸಂಶೋಧಿಸಲಾಗುತ್ತದೆ.
BIAL ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ನಿರ್ವಹಿಸುತ್ತದೆ. ಕೆನಡಾದ ಫೇರ್ಫ್ಯಾಕ್ಸ್ ಗ್ರೂಪ್ ನಲ್ಲಿ ಶೇಕಡಾ 64ರಷ್ಟು ಪಾಲು ಹೊಂದಿದೆ. ಆದರೆ ಸೀಮೆನ್ಸ್ ಪ್ರಾಜೆಕ್ಟ್ ವೆಂಚರ್ಸ್ 10ರಷ್ಟು ಪಾಲು ಹೊಂದಿದೆ. ಉಳಿದಂತೆ ಕರ್ನಾಟಕದ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಹಾಗೂ ಎಎಐನಲ್ಲೂ ಪಾಲು ಹೊಂದಿದೆ. ಹೀಗಾಗಿ ಬಿಐಎಎಲ್ ನಿರ್ಧಾರ, ಮಾಡಿಕೊಳ್ಳುವ ಒಪ್ಪಂದಗಳ ಪ್ರಮುಖವಾಗಿರುತ್ತವೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2008 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ಏರ್ಪೋರ್ಟ್ ಸುತ್ತಮುತ್ತ 150 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅಂತಾರಾಷ್ಟ್ರೀಯವ ವಿಮಾನ ನಿಲ್ದಾಣ ನಿರ್ಮಿಸದಂತೆ ಒಪ್ಪಂದ ಇದೆ. ಅದು 2033 ರ ಹೊತ್ತಿಗೆ ಮುಗಿಯಲಿದೆ. ಅಷ್ಟೊತ್ತಿಗಾಗಿ ಹೊಸೂರಿನಲ್ಲಿ ತಮಿಳುನಾಡು ಸರ್ಕಾರ, ಬೆಂಗಳೂರಿನ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿನರ್ಮಿಸಲು ಕರ್ನಾಟಕ ಸರ್ಕಾರ ಪ್ಲಾನ್ ಮಾಡಿಕೊಂಡಿವೆ. ಸದ್ಯ ರಾಜ್ಯ ಸರ್ಕಾರಗಳು ಯೋಜನೆಗೆ ಫೈನಲ್ ಮಾಡಿರುವ ಜಾಗಗಳ ಪರಿಶೀಲನೆ ಆಗಿದೆ. ಅದರ ಒಪ್ಪಿಗೆ, ಅನುಮೋದನೆಯು ಕೇಂದ್ರ ಸರ್ಕಾರದ ಮುಂದಿದೆ..
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications