ಮಾನವ ಕಳ್ಳಸಾಗಾಣೆ: ಬೆಂಗಳೂರು ಎನ್ಐಎ ತಂಡದಿಂದ ವ್ಯಕ್ತಿ ಬಂಧನ
ಬೆಂಗಳೂರು, ಅಕ್ಟೋಬರ್ 23: ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭಾನುವಾರ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಎಟಿಟಿ ತಂಡವು ಭಾನುವಾರ ಬಂಧಿಸಿರುವುದಾಗಿ ಮಾಹಿತಿ ನೀಡಿದೆ.
ಮಾನವ ಕಳ್ಳಸಾಗಣೆ (Human Trafficking) ಪ್ರಕರಣದಲ್ಲಿ ಬಂಧಿತ ಆರೋಪಿ ತಮಿಳುನಾಡು ರಾಜ್ಯದ ರಾಮನಾಥಪುರಂ ಮೂಲದ ನಿವಾಸಿ ಮೊಹಮ್ಮದ್ ಇಮ್ರಾನ್ ಖಾನ್ (39) ಎಂದು NIA ತಿಳಿಸಿದೆ. ಇದೇ ಪ್ರಕರಣದಲ್ಲಿ ಈತ ಜೂನ್ 2021 ರಿಂದಲೇ ಅಧಿಕಾರಿಗಳ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾನೆ ಎಂದು ಎನ್ಐಎ ತಿಳಿಸಿದೆ.

ಕಳೆದ ಹಲವು ತಿಂಗಳುಗಳಿಂದ ಬೆಂಗಳೂರು ಎಟಿಟಿ ಆತನ ಚಲನವಲನಗಳ ಮೇಲೆ ನಿಗಾ ಇರಿಸಲಾಗಿತ್ತು. ಈ ಸಂಬಂಧ ಉಡುಕಾಟ ನಡೆಸಿದ್ದ ಅಧಿಕಾರಿಗಳಿಗೆ ಈ ಆರೋಪಿ ತಮಿಳುನಾಡಿನ ತೇನಿ ಜಿಲ್ಲೆಯ ಅಜ್ಞಾತ ಸ್ಥಳದಲ್ಲಿದ್ದ ಎನ್ನಲಾಗಿದೆ.
ಹಲವು ಪ್ರಕರಣಗಳಲ್ಲಿ ಬಂಧಿತ ಭಾಗಿ
ಬಂಧಿತ ಖಾನ್ ಈ ತೇನಿ ಜಿಲ್ಲೆಯ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆಗಳ ನಡೆಸುತ್ತಿದ್ದ ಬಗ್ಗೆ ಬಹುದೊಡ್ಡ ಇತಿಹಾಸ ಹೊಂದಿದ್ದಾನೆ. ಇಲ್ಲಿಂದಲೇ ಕಳ್ಳ ಸಾಗಾಣಿಕೆಗೆ ಪ್ಲಾನ್ ಮಾಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ವಿವಿಧ ಅಕ್ರಮ ಅಪರಾಧ ಪ್ರಕರಣಗಳಲ್ಲಿ ತೊಡಗಿಕೊಂಡಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.
ಇನ್ನೂ ಇದೇ ಪ್ರಕರಣದ ದಾಖಲೆಗಳಿಲ್ಲದೆ ಶ್ರೀಲಂಕಾ ಪ್ರಜೆಗಳ ಗುಂಪು ಮಂಗಳೂರಿನಲ್ಲಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಪ್ರಕಾರ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಕರಣದ ಕಾರ್ಯಾಚರಣೆ 2021 ರಿಂದ ನಡೆಸಿ ಬಂಧಿಸಲಾಗಿದೆ.

ಶ್ರೀಲಂಕಾದಿಂದ ಮಾನವ ಕಳ್ಳಸಾಗಾಣೆ
ಶ್ರೀಲಂಕಾ ಪ್ರಜೆಗಳನ್ನು ಶ್ರೀಲಂಕಾದಿಂದ ತಮಿಳುನಾಡು ಮತ್ತು ಬೆಂಗಳೂರು ಮಾರ್ಗವಾಗಿ ಬಂಧಿಸಿ ಕರೆತರಲಾಗಿತ್ತು ಎಂಬುದು ಎನ್ಐಎ ತನಿಖೆಯಿಂದ ತಿಳಿದು ಬಂದಿದೆ. ಇಮ್ರಾನ್ ಖಾನ್, ಶ್ರೀಲಂಕಾದ ಪ್ರಜೆ, ಈಸನ್ ಎಲ್ಟಿಟಿ ಜೊತೆಗೆ ಈ ಹಿಂದೆ ಸಂಬಂಧ ಹೊಂದಿದ್ದರು. ಅವರ ಸಹಯೋದಲ್ಲಿಯೇ 38 ಶ್ರೀಲಂಕಾದ ಪ್ರಜೆಗಳನ್ನು ವಿವಿಧ ಸ್ಥಳಗಳಿಗೆ ಸಾಗಾಣೆಗೆ ಪ್ಲಾನ್ ಮಾಡಲಾಗಿತ್ತು.
ಬಂಧಿತ ಖಾನ್ ತನ್ನ ಸಹಚರ ಆರೋಪಿಗ ಜತೆಗೆ ಶ್ರೀಲಂಕಾದ ಪ್ರಜೆಗಳನ್ನು ಬೆಂಗಳೂರು ಮತ್ತು ಮಂಗಳೂರಿನ ವಿವಿಧ ಸ್ಥಳಗಳಿಗೆ ಸಾಗಿಸಿದ್ದಾನೆ. ಅಂತಾರಾಷ್ಟ್ರೀಯ ಮಾನವ ಕಳ್ಳಸಾಗಣೆ ಒಳಗೊಂಡ ಪಿತೂರಿಯಲ್ಲಿ ಇಮ್ರಾನ್ ಖಾನ್ ಪ್ರಮುಖ ವ್ಯಕ್ತಿ ಎಂದು ತನಿಖೆಯ ಮೂಲಗಳು ಬಹಿರಂಗಪಡಿಸಿವೆ. ಶ್ರೀಲಂಕಾದ ಪ್ರಜೆಗಳನ್ನು ಮೂಲ ಸ್ಥಳದಿಂದ ಬೇರೆ ಬೇರೆ ಕಡೆ ಸಾಗಿಸುವ ಕೆಲಸದಲ್ಲಿ ಈತ ಬಹುಮುಖ್ಯ ಕೆಲಸ ಮಾಡುತ್ತಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ












Click it and Unblock the Notifications