'ಅಶ್ಲೀಲ ಮಂತ್ರಿ' ಗೆ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ: ಪುಟ್ಟಣ್ಣ
ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ವಿಧಾನಸೌಧದ ತನ್ವೀರ್ ಕಚೇರಿಗೆ ಬೀಗ ಜಡಿದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರ
ಬೆಂಗಳೂರು, ನವೆಂಬರ್, 11 ; ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ವಿಧಾನಸೌಧದ ತನ್ವೀರ್ ಕಚೇರಿಗೆ ಬೀಗ ಜಡಿದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ತನ್ವೀರ್ ಸೇಠ್ ಕಚೇರಿ ಮುಂದೆ ಚಾಪೆ ದಿಂಬು ಇಟ್ಟುಕೊಂಡು ಸಂಜೆ ಐದು ಗಂಟೆ ವರೆಗೆ ಧರಣಿ ಕೂರುವುದಾಗಿ ಪುಟ್ಟಣ ತಿಳಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು" ಇಂತಹ ಶಿಕ್ಷಣ ಸಚಿವರನ್ನು ನಾವು ನೋಡೇ ಇಲ್ಲ, ನಮಗೆ ಅಶ್ಲೀಲ ಮಂತ್ರಿಯ ಅಗತ್ಯವಿಲ್ಲ. ಅವರಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಹೋಗಲಿ, ರಾಜೀನಾಮೆ ನೀಡುವವರೆಗೂ ತನ್ವೀರ್ ಸೇಠ್ ಕಚೇರಿಗೆ ದಿನಕ್ಕೊಂದು ಬೀಗ ಜಡಿದು ಪ್ರತಿಭಟಿಸುವುದಾಗಿ ತಿಳಿಸಿದ್ದಾರೆ.[ಟಿಪ್ಪು ವೇದಿಕೆಯಲ್ಲೇ ಅರೆ ನಗ್ನ ಚಿತ್ರ ವೀಕ್ಷಿಸಿದ ತನ್ವೀರ್]

ವಿಧಾನ ಸೌಧದ ತನ್ವೀರ್ ಸೇಠ್ ಕಚೇರಿ ಎದುರು ಜೆಡಿಎಸ್ ಕಾರ್ಯಕರ್ತರೊಂದಿಗೆ ಜೊತೆಯಾದ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಶಿಕ್ಷಣ ಸಚಿವ ತನ್ವೀರ್, ಶಿಕ್ಷಣ ಇಲಾಖೆ ಆಯುಕ್ತ ಅಜಯ್ ಸೇಠ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಕ್ಷಣ ಸಿಎಂ ಸಚಿವರ ರಾಜಿನಾಮೆ ಪಡೆಯಬೇಕು. ಕಳೆದ ಮೂರುವರೆ ವರ್ಷಗಳಲ್ಲಿ ಇವರಿಂದ ಯಾವ ಅಭಿವೃದ್ಧಿ ಕಲೆಸಗಳಾಗಿಲ್ಲ ಎಂದಿದ್ದಾರೆ. ಅಜಯ್ ಸೇಠ್ ಅಧಿಕಾರಕ್ಕೆ ಬಂದ ಮೇಲೆ ದಿನಕ್ಕೆ ಮೂರು ಫೈಲ್ ಪಾಸ್ ಆದ ಉದಾಹರಣೆಗಳಿಲ್ಲ, ಸಚಿವರು ರಾಜಿನಾಮೆ ಕೊಡದೇ ಇದ್ರೆ ರಾಜಿನಾಮೆ ಕೊಡಬೇಕಾದ ವಾತಾವರಣ ಸೃಷ್ಟಿ ಮಾಡಬೇಕಾಗುತ್ತದೆ. ಇದರ ವಿರುದ್ಧ ರಾಜ್ಯಾದ್ಯಂತ ತೀವ್ರ ಸ್ವರೂಫದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.[ತನ್ವೀರ್ ಅರೆನಗ್ನ ಚಿತ್ರ ವೀಕ್ಷಣೆ, ಸಿದ್ದರಾಮಯ್ಯ, ಪರಂ ಗರಂ]

ಇನ್ನು ಪ್ರತಿಭಟನೆಯಲ್ಲಿ ಅನುದಾನಿತ ಶಾಲಾ ಶಿಕ್ಷಕರ ಸಂಘಟನೆ ಭಾಗಿಯಾಗಿದ್ದು 15 ಕ್ಕೂ ಹೆಚ್ಚು ಶಿಕ್ಷಕರು ಅರೆ ನಗ್ನ ಚಿತ್ರ ವೀಕ್ಷಿಸುತ್ತಿದ್ದ ತನ್ವೀರ್ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ ಪ್ರತಿಭಟನೆಯಲ್ಲಿ ಅವರ ವಿರುದ್ಧ ಘೋಷಣೆಯನ್ನೂ ಕೂಗಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications