ಆಚಾರ್ಯ ಕಾಲೇಜಿನಲ್ಲಿ ತಾಂಜಾನಿಯಾ ಡೇ ಸಂಭ್ರಮ
ಬೆಂಗಳೂರು, ಡಿ.19 : ಬೆಂಗಳೂರಿನ ಆಚಾರ್ಯ ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳು ಎಥಿನಿಕ್ ಡೇಯನ್ನು ವಿಶಿಷ್ಟ ಪೂರ್ಣವಾಗಿ ಆಚರಣೆ ಮಾಡಿದರು. ತಾಂಜಾನಿಯಾ ವಿದ್ಯಾರ್ಥಿಗಳೊಂದಿಗೆ ದಿನವನ್ನು ಆಚರಣೆ ಮಾಡಿದ್ದರಿಂದ ಅದಕ್ಕೆ ತಾಂಜಾನಿಯಾ ಡೇ ಎಂಬ ಹೆಸರು ನೀಡಿದ್ದರು. ಸಂಗೀತ, ಹಾಡು, ವಿವಿಧ ಸ್ಪರ್ಧೆಗಳಿಂದ ತಾಂಜಾನಿಯಾ ಡೇ ರಂಗೇರಿತ್ತು.
ತಾಂಜಾನಿಯಾ ಡೇಗೆ ಅಲ್ಲಿನ ವಿದ್ಯಾರ್ಥಿಗಳು ತಮ್ಮ ಸಾಂಪ್ರದಾಯಿಕ ಹಾಡು, ನೃತ್ಯದ ಮೂಲಕ ವಿಶಿಷ್ಟ ಮೆರಗು ನೀಡಿದರು. ಆಚಾರ್ಯ ಕಾಲೇಜಿನ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಕೃತಿ ಪರಿಚಯ ಮಾಡಿಕೊಟ್ಟ ತಾಂಜಾನಿಯಾ ವಿದ್ಯಾರ್ಥಿಗಳು, ತಮ್ಮ ದೇಶದ ನಾಡಗೀತೆಯೊಂದಿಗೆ ಎಥಿನಿಕ್ ಡೇ ಸಂಭ್ರಮಾಚರಣೆ ಆರಂಭಿಸಿದರು.
ಬಗೆಬಗೆಯ ಸಾಂಸ್ಕೃತಿಕ ಕಾರ್ಯಕ್ರಮ, ಹಾಡು, ನೃತ್ಯ, ವಿವಿಧ ಸ್ಪರ್ಧೆಗಳಿಂದ ಆಚಾರ್ಯ ಪಿಯು ಕಾಲೇಜಿನ ಆವರಣ ರಂಗೇರಿತ್ತು. ತಾಂಜಾನಿಯಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕನ್ನಡ ಮಾತನಾಡುವ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಕನ್ನಡ ಪಾಂಡಿತ್ಯ ಪ್ರದರ್ಶಿಸಿ ವಿದ್ಯಾರ್ಥಿಗಳಿಂದ ಚಪ್ಪಾಳೆ ಗಿಟ್ಟಿಸಿದರು. ತಾಂಜಾನಿಯಾ ಡೇ ಸಂಭ್ರಮಾಚರಣೆ ಚಿತ್ರಗಳಲ್ಲಿ

ತಾಂಜಾನಿಯಾ ಡೇ
ಬೆಂಗಳೂರಿನ ಆಚಾರ್ಯ ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳು ಎಥಿನಿಕ್ ಡೇಯನ್ನು ತಾಂಜಾನಿಯಾ ವಿದ್ಯಾರ್ಥಿಗಳೊಂದಿಗೆ ಸೇರಿ `ತಾಂಜಾನಿಯಾ ಡೇ`ಯನ್ನಾಗಿ ಆಚರಣೆ ಮಾಡಿದರು. ಬೆಂಗಳೂರಿನ ವಿದ್ಯಾರ್ಥಿಗಳಿಗೆ ಇದರಿಂದ ತಾಂಜಾನಿಯಾ ಸಂಸ್ಕೃತಿಯ ಪರಿಚಯವಾಯಿತು.

ಆಚಾರ್ಯ ಕಾಲೇಜಿನ ಆವರಣದಲ್ಲಿ ಸಂಭ್ರಮ
ತಾಂಜಾನಿಯಾ ಡೇ` ಅಂಗವಾಗಿ ಆಚಾರ್ಯ ಕಾಲೇಜಿನ ಆವರಣ ಸಂಭ್ರಮ ಸಡಗರದಲ್ಲಿ ಮುಳುಗಿ ಹೋಗಿತ್ತು.ಡ್ರಮ್ಮರ್ ರಮೇಶ್ ಕಾರ್ಯಕ್ರಮ, ತಾಂಜಾನಿಯಾ ವಿದ್ಯಾರ್ಥಿಗಳ ಸಾಂಪ್ರದಾಯಿಕ ನೃತ್ಯ ವಿದ್ಯಾರ್ಥಿಗಳ ಮನಸೂರೆಗೊಂಡಿತು.

ಜೀನ್ಸ್, ಟಿ ಶರ್ಟ್ ಗೆ ಗುಡ್ ಬೈ
ತಾಂಜಾನಿಯಾ ಡೇ` ಗೆ ಮತ್ತಷ್ಟು ಮೆರಗು ನೀಡಲು ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಆಗಮಿಸಿದ್ದರು. ಪ್ರತಿದಿನ ಜೀನ್ಸ್, ಟಿ ಶರ್ಟ್ ಧರಿಸಿ ಬರುತ್ತಿದ್ದ ವಿದ್ಯಾರ್ಥಿಗಳು ಅವುಗಳಿಗೆ ವಿದಾಯ ಹೇಳಿದ್ದರು.

ಕನ್ನಡ ಪಾಂಡಿತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಳು
ಎಥಿನಿಕ್ ಡೇಯಲ್ಲಿ ತಾಂಜಾನಿಯಾ ವಿದ್ಯಾರ್ಥಿಗಳಿಗಾಗಿ ಕನ್ನಡ ಮಾತನಾಡುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಯಾವುದೇ ಬೇರೆ ಭಾಷೆಯ ಶಬ್ದಗಳನ್ನು ಬಳಸದೆ ತಾಂಜಾನಿಯಾ ವಿದ್ಯಾರ್ಥಿಗಳು ಕನ್ನಡ ಮಾತನಾಡಿ ತಮ್ಮ ಕನ್ನಡ ಪಾಂಡಿತ್ಯ ಪ್ರದರ್ಶಿಸಿ ವಿದ್ಯಾರ್ಥಿಗಳಿಂದ ಚಪ್ಪಾಳೆ ಗಿಟ್ಟಿಸಿದರು.

ಸಂತಸ ಹಂಚಿಕೊಂಡ ವಿದ್ಯಾರ್ಥಿಗಳು
ಆಚಾರ್ಯ ಕಾಲೇಜಿನಲ್ಲಿ ಎಥಿನಿಕ್ ಡೇಯಲ್ಲಿ ತಾಂಜಾನಿಯಾದ ಕಲೆ ಮತ್ತು ಸಂಸ್ಕೃತಿ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟದ್ದಕ್ಕೆ ವಿದ್ಯಾರ್ಥಿಗಳು ಸಂತಸ ಪಟ್ಟರು. ಭಾರತದಲ್ಲಿ ತಮ್ಮ ಸಂಸ್ಕೃತಿ ಪ್ರದರ್ಶನಕ್ಕೆ ಅವಕಾಶ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದರು.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications