ವಿದ್ಯಾರ್ಥಿನಿ ಮೇಲೆ ಹಲ್ಲೆ : ಯಶವಂತಪುರ ಎಸಿಪಿ ಅಮಾನತು
ಬೆಂಗಳೂರು, ಫೆಬ್ರವರಿ 7 : ತಾಂಜಾನಿಯ ಮೂಲದ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಯಶವಂತಪುರ ವಿಭಾಗದ ಎಸಿಪಿಯವರನ್ನು ಅಮಾನತು ಮಾಡಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದಿ, 9 ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು, ಯಶವಂತಪುರ ಉಪವಿಭಾಗದ ಎಸಿಪಿ ಅಶೋಕ ನಾರಾಯಣ ಪಿಸೆ ಅವರನ್ನು ಅಮಾತನುಗೊಳಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಶೋಕ ನಾರಾಯಣ ಅವರನ್ನು ಅಮಾನತು ಮಾಡಲಾಗಿದೆ. ['ವಿದ್ಯಾರ್ಥಿನಿ ಮೇಲೆ ಜನಾಂಗೀಯ ದ್ವೇಷದಿಂದ ಹಲ್ಲೆ ನಡೆದಿಲ್ಲ']

ಜನವರಿ 31ರಂದು ಹೆಸರಘಟ್ಟ ರಸ್ತೆಯಲ್ಲಿ ಅಪಘಾತ ಸಂಭವಿಸಿ, ಗಲಾಟೆ ನಡೆದರೂ ಎಸಿಪಿ ಅವರು ಸ್ಥಳಕ್ಕೆ ತೆರಳಿರಲಿಲ್ಲ. ಪೊಲೀಸರಿಂದ ಆದ ಲೋಪಗಳ ಬಗ್ಗೆ ಇಲಾಖಾ ತನಿಖೆ ನಡೆಸಿ ವರದಿ ಕೊಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರು ಹೆಚ್ಚುವರಿ ಪೊಲೀಸ್ ಕಮಿಷನರ್ ಚರಣ್ ರೆಡ್ಡಿ ಅವರಿಗೆ ಸೂಚಿಸಿದ್ದರು. ವರದಿ ಆಧರಿಸಿ ಎಸಿಪಿ ಅಮಾನತುಗೊಳಿಸಲಾಗಿದೆ. [ರಾಷ್ಟ್ರೀಯ ಮಾಧ್ಯಮಗಳ ವಿರುದ್ಧ ತಿರುಗಿ ಬಿದ್ದ ಬೆಂಗಳೂರಿಗರು]
ಜನರ ಗಲಾಟೆ ಬಗ್ಗೆ ಮಾಹಿತಿ ಪಡೆಯಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಜನವರಿ 31ರಂದು ಎಸಿಪಿಗೆ ಕರೆ ಮಾಡಿದ್ದರು. ಆಗ ಅವರು ಅಗತ್ಯ ಕ್ರಮಗಳನ್ನು ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಸುಳ್ಳು ಹೇಳಿದ್ದರು. [ವಿದ್ಯಾರ್ಥಿನಿ ಮೇಲೆ ಹಲ್ಲೆ : 9 ಮಂದಿ ಬಂಧನ, ಮೂವರ ಅಮಾನತು]
ಅಪಘಾತದ ಬಗ್ಗೆ ತಕ್ಷಣವೇ ಪ್ರಾಥಮಿಕ ಮಾಹಿತಿ ಕೊಡಿ ಎಂದು ಆಯುಕ್ತರು ಕೇಳಿದಾಗ ಎಸಿಪಿ ಅಸಮರ್ಪಕ ಉತ್ತರ ನೀಡಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಕೋಪಗೊಂಡಿದ್ದ ಆಯುಕ್ತರು, ನೀವಿನ್ನೂ ಘಟನಾ ಸ್ಥಳಕ್ಕೆ ಹೋಗಿಯೇ ಇಲ್ಲ. ಮೊದಲು ಅಲ್ಲಿಗೆ ಹೋಗಿ ಕರ್ತವ್ಯ ನಿರ್ವಹಿಸಿ ಎಂದು ಸೂಚಿಸಿದ್ದರು. ಆದ್ದರಿಂದ, ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಅಮಾನತುಗೊಳಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications