ಎಸಿ ಪತ್ನಿ ಜೊತೆ 15 ಜನರ ದುರ್ವರ್ತನೆ, ಒಬ್ಬ ಬಂಧನ
ಬೆಂಗಳೂರು, ಜನವರಿ 10: ರಾಜ್ಯ ಟೆನಿಸ್ ಅಸೋಸಿಯೇಶನ್ನಿನಲ್ಲಿ ನಡೆದ ಹೊಸವರ್ಷಾಚರಣೆ ವೇಳೆ 15 ಜನರ ತಂಡದಿಂದ ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತ ಪತ್ನಿಯ ಮೇಲೆ ಅಸಭ್ಯವಾಗಿ ವರ್ತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಒಬ್ಬರನ್ನು ಬಂಧಿಸಲಾಗಿದೆ.
ಹೊಸ ವರ್ಷದಂದು ರಾಜ್ಯ ಟೆನಿಸ್ ಅಸೋಸಿಯೇಶನ್ ವತಿಯಿಂದ ನಡೆದ ನ್ಯೂಇಯರ್ ಪಾರ್ಟಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಮತ್ತು ಆತನ ಪತ್ನಿ ಭಾಗವಹಿಸಿದ್ದಾರೆ. ಉಪ ಆಯುಕ್ತ ಪಾರ್ಟಿಯಲ್ಲಿ ಪತ್ನಿಯನ್ನು ಒಂದೆಡೆ ಇರಲು ಹೇಳಿ ಊಟ ಕೌಂಟರ್ ಬಳಿ ತೆರಳಿದ್ದಾರೆ. ಆ ವೇಳೆ 15 ಜನರ ತಂಡ ಎಸಿ ಪತ್ನಿ ಬಳಿ ಧಾವಿಸಿ ಬಂದಿದ್ದು ಸೆಲ್ಫಿ ತೆಗೆಯಲು ಆಕೆಗೆ ಫೋನ್ ನೀಡಿದ್ದು ಅಸಭ್ಯ ಮಾತನಾಡಿ ದುರ್ವರ್ತನೆ ಮೆರೆದಿದ್ದಾರೆ. ಇದನ್ನು ಆಕೆ ನೊಂದು ತನ್ನ ಪತಿಗೆ ವಿವರಿಸಿದ್ದು ವಾಣಿಜ್ಯ ತೆರೆಗೆ ಉಪಆಯುಕ್ತ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.[ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ ಮೈದುನ ನಾದಿನಿ ಜೋಡಿ]

ಈ ಸಂಬಂಧ ತನಿಖೆ ಪ್ರಾರಂಭಿಸಿದ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಹೊಸವರ್ಷಾಚರಣೆ ವೇಳೆ ನಡೆದ ಘಟನಾವಳಿಗಳನ್ನು ಪರಿಶೀಲಿಸಿದ್ದು, ಟೆನಿಸ್ ಅಸೋಸಿಯೇಶನ್ನಿನಲ್ಲಿ ಇದ್ದ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಿದ್ದಾರೆ. ಇದರಿಂದ ಹದಿನೈದು ಜನರ ತಂಡ ಬಗ್ಗೆ ಮಾಹಿತಿ ಪಡೆದ ಪೊಲೀಸರು ಶಿವರಾಜ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದು ಎಫ್ಐಆರ್ ದಾಖಲಿಸಿದ್ದಾರೆ[ಯುವತಿಯ ಟಿ ಶರ್ಟ್ ಹಿಡಿದು ಎಳೆದಾಡಿದ ಕಾಮುಕರು]
ಇನ್ನು ಹದಿನಾಲ್ಕು ಆರೋಪಿಗಳಿಗಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಹೊಸ ವರ್ಷಾಚರಣೆ ಸಂಬಂಧ ದೌರ್ಜನ್ಯ ಪ್ರಕರಣಗಳು ಹಸಿಯಾಗಿರುವಾಗಲೇ ಮತ್ತೆ ಮತ್ತೆ ಪ್ರಕರಣಗಳು ಅದಕ್ಕೆ ಸೇರಿಕೆಯಾಗುತ್ತಿರುವುದು ನಗರಕ್ಕೆ ಕೆಟ್ಟಹೆಸರು ತರುತ್ತಿದೆ. [ಒಂದು ಹಗ್, ಕಿಸ್ ಗಾಗಿ ನಡೆದಿತ್ತಾ ಕಮ್ಮನಹಳ್ಳಿ ಕಿರುಕುಳ?]
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications