ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟ್ಯಾಕ್ಸಿ- ಕ್ಯಾಬ್ ಆಪರೇಟರ್ ಗಳಿಂದ ಶೋಷಣೆ ತಪ್ಪಿಸಲು ಸಿಎಂಗೆ ಮನವಿ

|
Google Oneindia Kannada News

ಬೆಂಗಳೂರು, ಜೂನ್ 5: ಸಿಟಿ ಟ್ಯಾಕ್ಸಿ- ಕ್ಯಾಬ್ ಚಾಲಕರಿಗೆ ಆಪರೇಟರ್ ಗಳಿಂದ ಶೋಷಣೆ ತಪ್ಪಿಸಲು ಉನ್ನತ ಮಟ್ಟದ ಸಮಿತಿ ರಚಿಸಿ, ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಆಪ್ ಆಧಾರಿತ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಆಪರೇಟರ್ ಗಳು , ಕ್ಯಾಬ್ ಮಾಲೀಕರು ಮತ್ತು ಚಾಲಕರಿಗೆ ಕಡಿಮೆ ಹಣ ಪಾವತಿಸುತ್ತಿದ್ದಾರೆ ಹಾಗೂ ವೈಯಕ್ತಿಕವಾಗಿ ತಮ್ಮ ಲಾಭ ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಇದೆ ಎಂದು ಹೇಳಿದರು.

ಈ ಬಗ್ಗೆ ತಕ್ಷಣ ಉನ್ನತ ಮಟ್ಟದ ಸಮಿತಿ ರಚಿಸಿ, ಟ್ಯಾಕ್ಸಿ ಚಾಲಕರು/ ಮಾಲೀಕರು ಮತ್ತು ಆಪರೇಟರ್ ಗಳ ಜೊತೆ ಮಾತುಕತೆ ನಡೆಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸಾರಿಗೆ ಆಯುಕ್ತರು ಹಾಗೂ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಆದೇಶಿಸಿದರು.

Taxi- cab driver, owners request CM Kumaraswamy to stop operators exploitation

ತಮ್ಮನ್ನು ಭೇಟಿಯಾದ ಉಬರ್ ಸಿಟಿ ಟ್ಯಾಕ್ಸಿ ಹಾಗೂ ಕೆ ಎಸ್ ಟಿಡಿಸಿ ಸಿಟಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರ ನಿಯೋಗದ ಅಹವಾಲುಗಳನ್ನು ಆಲಿಸಿ, ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

English summary
Taxi- cab driver, owners complaint against app based operators exploitation in Bengaluru. They requested chief minister HD Kumaraswamy to take stringent action. CM assured action and issued direction to officers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X