ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಿಂಗಾಯತ ಪ್ರತ್ಯೇಕ ಧರ್ಮ: ಟಿಬಿ ಜಯಚಂದ್ರ ಸುದ್ದಿಗೋಷ್ಠಿ ವಿವರ

By Manjunatha
|
Google Oneindia Kannada News

ಬೆಂಗಳೂರು, ಮಾರ್ಚ್‌ 19: ನ್ಯಾ.ನಾಗಮೋಹನ್ ದಾಸ್ ಅವರ ನೇತೃತ್ವದ ತಂಡ ನೀಡಿದ್ದ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ವರದಿಯನ್ನು ಸಚಿವ ಸಂಪುಟವು ಅಂಗೀಕರಿಸಿದ್ದು. ಲಿಂಗಾಯತಕ್ಕೆ ಅಲ್ಪಸಂಖ್ಯಾತ ಸ್ಥಾನ ಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿದೆ.

ಈ ಬಗ್ಗೆ ಕಾನೂನು ಮಂತ್ರಿ ಟಿ.ಬಿ.ಜಯಚಂದ್ರ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಅದರ ಮುಖ್ಯಾಂಶಗಳು ಇಲ್ಲಿವೆ...

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು : ಸಚಿವ ಸಂಪುಟದ ನಿರ್ಣಯಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು : ಸಚಿವ ಸಂಪುಟದ ನಿರ್ಣಯ

 TB Jayachandra press meet about Lingayata separate religion

* ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಬಗ್ಗೆ ನ್ಯಾ.ನಾಗಮೋಹನದಾಸ್ ಕೊಟ್ಟಿರುವ ವರದಿಯನ್ನು ಸಚಿವ ಸಂಪುಟ ಸರ್ವ ಸಮ್ಮತದಿಂದ ಒಪ್ಪಿಕೊಂಡಿದೆ.
* ಲಿಂಗಾಯತಕ್ಕೆ ಅಲ್ಪಸಂಖ್ಯಾತ ಸ್ಥಾನ ಮಾನ ನೀಡುವಂತೆ ರಾಜ್ಯ ಅಲ್ಪಸಂಖ್ಯಾತ ಆಯೋಗವು ಕೇಂದ್ರಕ್ಕೆ ಶಿಫಾರಸ್ಸು ಮಾಡಲಿದೆ.
* ಬಸವತತ್ವ ಪಾಲನೆ ಮಾಡುವವರು ಲಿಂಗಾಯತರು, ಲಿಂಗಾಯತ ಧರ್ಮಕ್ಕೆ ಬಸವಣ್ಣನನ್ನು ಧರ್ಮಗುರು, ಇಷ್ಟ ಲಿಂಗ ದೇವರು, ವಚನ ಧರ್ಮ ಗ್ರಂಥ ಎಂದುಕೊಳ್ಳಬಹುದು.
* ಯಾವ ಸಚಿವರ ವಿರೋಧವೂ ಇಲ್ಲದೆ, ಸಂಪುಟ ಸಭೆಯಲ್ಲಿ ವರದಿ ಅಂಗೀಕಾರವಾಗಿದೆ.
* ಕೆಲ ಕ್ಷಣಗಳ ಕಾಲ ಸುದ್ದಿಗೋಷ್ಠಿಯಲ್ಲಿ ಗೊಂದಲದ ವಾತಾವರಣ
* ಶಿಫಾರಸ್ಸು ಕಳಿಸುವ ದಿನಾಂಕವನ್ನು ಸರ್ಕಾರ ನಿರ್ಧಾರ ಮಾಡಲಿದೆ.
* ಲಿಂಗಾಯತರಿಗೆ ನೀಡಲಾಗುವ ಮೀಸಲಾತಿಗಳನ್ನು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡಲಾಗುತ್ತದೆ.
* ವೀರಶೈವ ಲಿಂಗಾಯತರು, ಲಿಂಗಾಯತ ಧರ್ಮದ ಭಾಗ

English summary
Karnataka law minister TB Jayachandra did press meet and give information about cabinet meeting and Lingayata separate religion. He said Karnataka Government cabinet today decided to grant separate Lingayat religion status as recommended by Nagamohandas committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X