ಉತ್ತಮನಾಗು-ಉಪಕಾರಿಯಾಗು: ವಿವೇಕ್ ಬ್ಯಾಂಡ್ ಅಭಿಯಾನ
ಬೆಂಗಳೂರು, ಜನವರಿ 12 : ಯುವಜನರಲ್ಲಿ ಸಾಮಾಜಿಕ ಸೇವಾ ಮನೋಭಾವ ಪೋಷಿಸುವ 'ಉತ್ತಮನಾಗು-ಉಪಕಾರಿಯಾಗು' ಎಂಬ ಸ್ವಾಮಿ ವಿವೇಕಾನಂದರ ಸಂದೇಶ ಸಾರುವ ವಿವೇಕ್ ಬ್ಯಾಂಡ್ -2018 ಅಭಿಯಾನಕ್ಕೆ ಜಯನಗರದ ಆರ್.ವಿ. ಟೀಚರ್ಸ್ ಕಾಲೇಜಿನಲ್ಲಿ ಶುಕ್ರವಾರ ಚಾಲನೆ ದೊರೆಯಿತು.
ಸಮರ್ಥ ಭಾರತ ಸಂಸ್ಥೆ ಜನವರಿ 12 ರಂದು ಸ್ವಾಮಿ ವಿವೇಕಾನಂದರ 155 ಜಯಂತಿಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯಾದ್ಯಂತ ವಿವೇಕ್ ಬ್ಯಾಂಡ್ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅದರ ಭಾಗವಾಗಿ ಆರ್.ವಿ.ಟೀಚರ್ಸ್ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.
ವಿವೇಕ್ ಬ್ಯಾಂಡ್ ಅಭಿಯಾನದ ಉದ್ದೇಶ: ಕಾಲೇಜು ವಿದ್ಯಾರ್ಥಿಗಳು, ಯುವ ಉದ್ಯೋಗಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ತಮ್ಮ ವಯಕ್ತಿಕ ಜೀವನದಲ್ಲಿ ಉತ್ತಮ ಗುಣ ಸ್ವಭಾವವನ್ನು ಮೈಗೂಡಿಸಿಕೊಳ್ಳುವುದರ ಜತೆಗೆ ಸಮಾಜಕ್ಕೆ ಉಪಯೋಗವಾಗುವಂತಹ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

ಹೆಚ್ಚಿನ ಯುವಜನತೆಯನ್ನು ಸ್ಫೂರ್ತಿದಾಯಕ ಕಾರ್ಯಗಳಿಗೆ ಪ್ರೇರೇಪಿಸುವ ಮೂಲಕ ಅನೇಕರಿಗೆ ಆದರ್ಶ ವ್ಯಕ್ತಿಗಳಾಗುವ ಮೂಲ ಉತ್ತಮನಾಗು-ಉಪಕಾರಿಯಾಗು ಎಂಬ ಪರಂಪರೆಯನ್ನು ನಿರ್ಮಿಸುವ ಆಶಯವನ್ನು ಈ ಅಭಿಯಾನ ಹೊಂದಿದೆ. ಈ ಬಾರಿ ಖಾದಿ ಧರಿಸಿ, ಗಿಡವೊಂದನ್ನು ಪೋಷಿಸಿ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಕುರಿತು ಜಾಗೃತಿ ಮೂಡಿಸಿ, ಯುವ ಜನತೆ ಸಾಮಾಜಿಕವಾಗಿ ಉಪಯೋಗವಾಗುವ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ.
ಗುರುವಿನ ಗುಲಾಮನಾಗುವ ವರೆಗೆ ಯಶಸ್ಸು ಪಡೆಯಲು ಸಾಧ್ಯವಿಲ್ಲ: ಈ ವೇಳೆ ಮಾತನಾಡಿದ ಇಸ್ರೋ ಮಾಜಿ ಅಧ್ಯಕ್ಷ ಡಾ. ರಾಧಾಕೃಷ್ಣನ್, ಶಿಕ್ಷಕನೆಂದರೆ ಭಾರತೀಯರಿಗೆ ಕೇವಲ ಅಕ್ಷರ ಕಲಿಸುವ ಉದ್ಯೋಗಿಯಲ್ಲ, ಶಿಕ್ಷಕನೆಂದರೆ ಗುರು. ಆತನಿಗೆ ಆಚಾರ್ಯರ ಸ್ಥಾನವಿದೆ. ಗುರು ಮತ್ತು ದೇವರ ನಡುವೆ ನಾವು ಅಂತರ ಕಾಣುವುದಿಲ್ಲ ಹೀಗಾಗಿ ಸ್ವಾಮಿ ವಿವೇಕಾನಂದರು ಶಿಕ್ಷಕರನ್ನು ಗುರುವಿನ ಮೂಲಕ ಆಚಾರ್ಯ ಸ್ಥಾನ ನೀಡಿದ್ದರು ಎಂದು ಬಣ್ಣಿಸಿದರು.

21 ನೇ ಶತಮಾನದಲ್ಲಿ ಭಾರತ ಜಗತ್ತಿನ ಎಲ್ಲಾ ರಾಷ್ಟ್ರಗಳಿಗಿಂತ ಆರ್ಥಿಕತೆಯ ದಿಗಂತದಲ್ಲಿ ಕೊಂಡೊಯ್ದಿರುವ ಹಿಂದಿನ ಶಕ್ತಿ ನಮ್ಮ ಪರಂಪರೆ ಎನ್ನುವುದನ್ನು ಮರೆಬಾರದು ಎಂದು ಕಳಕಳಿ ವ್ಯಕ್ತಪಡಿಸಿದರು. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎನ್ನುವ ಹಾಗೆ ಗುರುವಿಗೆ ತಲೆಬಾಗದಿದ್ದರೆ, ಗುರುವಿನ ಆಶೀರ್ವಾದವಿಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications