ಉತ್ತಮನಾಗು-ಉಪಕಾರಿಯಾಗು: ವಿವೇಕ್ ಬ್ಯಾಂಡ್ ಅಭಿಯಾನ
ಬೆಂಗಳೂರು, ಜನವರಿ 12 : ಯುವಜನರಲ್ಲಿ ಸಾಮಾಜಿಕ ಸೇವಾ ಮನೋಭಾವ ಪೋಷಿಸುವ 'ಉತ್ತಮನಾಗು-ಉಪಕಾರಿಯಾಗು' ಎಂಬ ಸ್ವಾಮಿ ವಿವೇಕಾನಂದರ ಸಂದೇಶ ಸಾರುವ ವಿವೇಕ್ ಬ್ಯಾಂಡ್ -2018 ಅಭಿಯಾನಕ್ಕೆ ಜಯನಗರದ ಆರ್.ವಿ. ಟೀಚರ್ಸ್ ಕಾಲೇಜಿನಲ್ಲಿ ಶುಕ್ರವಾರ ಚಾಲನೆ ದೊರೆಯಿತು.
ಸಮರ್ಥ ಭಾರತ ಸಂಸ್ಥೆ ಜನವರಿ 12 ರಂದು ಸ್ವಾಮಿ ವಿವೇಕಾನಂದರ 155 ಜಯಂತಿಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯಾದ್ಯಂತ ವಿವೇಕ್ ಬ್ಯಾಂಡ್ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅದರ ಭಾಗವಾಗಿ ಆರ್.ವಿ.ಟೀಚರ್ಸ್ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.
ವಿವೇಕ್ ಬ್ಯಾಂಡ್ ಅಭಿಯಾನದ ಉದ್ದೇಶ: ಕಾಲೇಜು ವಿದ್ಯಾರ್ಥಿಗಳು, ಯುವ ಉದ್ಯೋಗಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ತಮ್ಮ ವಯಕ್ತಿಕ ಜೀವನದಲ್ಲಿ ಉತ್ತಮ ಗುಣ ಸ್ವಭಾವವನ್ನು ಮೈಗೂಡಿಸಿಕೊಳ್ಳುವುದರ ಜತೆಗೆ ಸಮಾಜಕ್ಕೆ ಉಪಯೋಗವಾಗುವಂತಹ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

ಹೆಚ್ಚಿನ ಯುವಜನತೆಯನ್ನು ಸ್ಫೂರ್ತಿದಾಯಕ ಕಾರ್ಯಗಳಿಗೆ ಪ್ರೇರೇಪಿಸುವ ಮೂಲಕ ಅನೇಕರಿಗೆ ಆದರ್ಶ ವ್ಯಕ್ತಿಗಳಾಗುವ ಮೂಲ ಉತ್ತಮನಾಗು-ಉಪಕಾರಿಯಾಗು ಎಂಬ ಪರಂಪರೆಯನ್ನು ನಿರ್ಮಿಸುವ ಆಶಯವನ್ನು ಈ ಅಭಿಯಾನ ಹೊಂದಿದೆ. ಈ ಬಾರಿ ಖಾದಿ ಧರಿಸಿ, ಗಿಡವೊಂದನ್ನು ಪೋಷಿಸಿ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಕುರಿತು ಜಾಗೃತಿ ಮೂಡಿಸಿ, ಯುವ ಜನತೆ ಸಾಮಾಜಿಕವಾಗಿ ಉಪಯೋಗವಾಗುವ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ.
ಗುರುವಿನ ಗುಲಾಮನಾಗುವ ವರೆಗೆ ಯಶಸ್ಸು ಪಡೆಯಲು ಸಾಧ್ಯವಿಲ್ಲ: ಈ ವೇಳೆ ಮಾತನಾಡಿದ ಇಸ್ರೋ ಮಾಜಿ ಅಧ್ಯಕ್ಷ ಡಾ. ರಾಧಾಕೃಷ್ಣನ್, ಶಿಕ್ಷಕನೆಂದರೆ ಭಾರತೀಯರಿಗೆ ಕೇವಲ ಅಕ್ಷರ ಕಲಿಸುವ ಉದ್ಯೋಗಿಯಲ್ಲ, ಶಿಕ್ಷಕನೆಂದರೆ ಗುರು. ಆತನಿಗೆ ಆಚಾರ್ಯರ ಸ್ಥಾನವಿದೆ. ಗುರು ಮತ್ತು ದೇವರ ನಡುವೆ ನಾವು ಅಂತರ ಕಾಣುವುದಿಲ್ಲ ಹೀಗಾಗಿ ಸ್ವಾಮಿ ವಿವೇಕಾನಂದರು ಶಿಕ್ಷಕರನ್ನು ಗುರುವಿನ ಮೂಲಕ ಆಚಾರ್ಯ ಸ್ಥಾನ ನೀಡಿದ್ದರು ಎಂದು ಬಣ್ಣಿಸಿದರು.

21 ನೇ ಶತಮಾನದಲ್ಲಿ ಭಾರತ ಜಗತ್ತಿನ ಎಲ್ಲಾ ರಾಷ್ಟ್ರಗಳಿಗಿಂತ ಆರ್ಥಿಕತೆಯ ದಿಗಂತದಲ್ಲಿ ಕೊಂಡೊಯ್ದಿರುವ ಹಿಂದಿನ ಶಕ್ತಿ ನಮ್ಮ ಪರಂಪರೆ ಎನ್ನುವುದನ್ನು ಮರೆಬಾರದು ಎಂದು ಕಳಕಳಿ ವ್ಯಕ್ತಪಡಿಸಿದರು. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎನ್ನುವ ಹಾಗೆ ಗುರುವಿಗೆ ತಲೆಬಾಗದಿದ್ದರೆ, ಗುರುವಿನ ಆಶೀರ್ವಾದವಿಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications