ಪ್ರಿಯಕರನಿಂದಲೇ ಅಂಗನವಾಡಿ ಟೀಚರ್ ಹತ್ಯೆ
ಬೆಂಗಳೂರು, ನವೆಂಬರ್ 27: ಅಂಗನವಾಡಿ ಶಿಕ್ಷಕಿ ಲಾಡ್ಜ್ ನಲ್ಲಿ ಕೊಲೆಯಾಗಿರುವ ಘಟನೆ ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಸಂಬಂಧ ಮೃತ ಮಹಿಳೆಯ ಪ್ರಿಯಕರನ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದಾರೆ.
ಸಿದ್ಧಾಪುರದ ನಿವಾಸಿ ಕಮಲಾ ಅಂಗನವಾಡಿ ಟೀಚರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪಕ್ಕದಲ್ಲೇ ಟೈಲರ್ ಕೆಲಸ ಮಾಡುತ್ತಿದ್ದ ದಿಲೀಪ್ ಕುಮಾರ್ ನನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನವೆಂಬರ್ 25 ರಂದು ಕಮಲಾ ಕಾಣೆಯಾಗಿದ್ದರು. ಈ ಕುರಿತು ಪೋಷಕರು ಎಲ್ಲಾ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು.
ಜೆ.ಸಿ. ರಸ್ತೆಯಲ್ಲಿರುವ ಲಾಡ್ಜ್ ನಲ್ಲಿ ಕೊಠಡಿ ಬುಕ್ ಮಾಡಿದ್ದ ದಿಲೀಪ್ ಕುಮಾರ್ ನವೆಂಬರ್ 25 ರಂದು ಕಮಲಾ ಅವರನ್ನು ಕರೆದುಕೊಂಡು ಬಂದಿದ್ದಾನೆ. ಲಾಡ್ಜ್ ನಿಂದ ಹೊರ ಹೋದ ದಿಲೀಪ್ ಕುಮಾರ್ ಎರಡು ದಿನವಾದರೂ ಬಂದಿರಲಿಲ್ಲ. ಕೊಠಡಿಯಿಂದ ವಾಸನೆ ಬರುತ್ತಿದ್ದ ಕಾರಣ ಲಾಡ್ಜ್ ಸಿಬ್ಬಂದಿ ಬಾಗಿಲು ತಟ್ಟಿದ್ದಾರೆ. ಹೊರೆಗೆ ಯಾರೂ ಬಂದಿಲ್ಲ. ಅನುಮಾನಗೊಂಡ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Recommended Video
ಪೊಲೀಸರು ಬಾಗಿಲು ಒಡೆದು ನೋಡಿದಾಗ ಕಮಲಾ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡು ಬಂದಿದೆ. ಪ್ರಿಯಕರ ಕಮಲಾ ಅವರನ್ನು ಕೊಲೆ ಮಾಡಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಮಲಾ ಹತ್ಯೆ ಬಳಿಕ ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗಲು ಇಷ್ಟ ವಿಲ್ಲದೇ ದಿಲೀಪ್ ಕುಮಾರ್ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications