ಸಿದ್ದು ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ: ಬೆಂಗಳೂರಿನಲ್ಲಿಟೆಕ್ಕಿ ಬಂಧನ
ಬೆಂಗಳೂರು, ಜುಲೈ 1: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆಯನ್ನು ಹೊಂದಿದ್ದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸ್ಪೀಕರ್ ಮುಂದೆ ಹಾಜರಾಗಲು ರವಿ ಬೆಳಗೆರೆಗೆ ಕೋರ್ಟ್ ಆದೇಶ
ಬಂಧಿತರನ್ನು ಮಧುಸೂದನ್ (30) ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಸೈಬರ್ ಅಪರಾಧ ಪ್ರಕರಣ ದಾಖಲಿಸಲಾಗಿದೆ.
ಸಿದ್ದರಾಮಯ್ಯ ಅವರ ಹೆಸರಿನ ನಕಲಿ ಟ್ವಿಟ್ಟರ್ ಖಾತೆಯೊಂದರಿಂದ ಟ್ವೀಟ್ ಗಳು ಹರಿದಾಡುತ್ತಿರುವ ಬಗ್ಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರೊಬ್ಬರು ಬೆಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿನನ್ವಯ ತನಿಖೆ ನಡೆಸುತ್ತಿದ್ದ ಪೊಲೀಸರು ಮಂದ್ಯದ ಟೆಕ್ಕಿ ಮಧುಸೂದನ್ ಎಂಬುವವರನ್ನು ಬಂಧಿಸಿದ್ದು, ಈತ ಮುಖ್ಯಮಂತ್ರಿಗಳ ಹೆಸರಿನಲ್ಲಿ ಟ್ವಿಟ್ಟರ್ ಖಾತೆ ಆರಂಭಿಸಿ, ಅವರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ.
Comments
bengaluru siddaramaiah cyber crime mandya twitter software engineer ಬೆಂಗಳೂರು ಸಿದ್ದರಾಮಯ್ಯ ಟ್ವಿಟ್ಟರ್ ಸೈಬರ್ ಅಪರಾಧ ಟೆಕ್ಕಿ
English summary
Madhusudan(30) from Madnya, a software engineer of an IT firm was arrested here for allegedly creating a fake Twitter handle of Karnataka Chief Minister Siddaramaiah, said Bengaluru police on JUne 30th.