ಬೆಂಗಳೂರು : ಅಪಾರ್ಟ್ಮೆಂಟ್ನಲ್ಲಿ ಮಹಿಳಾ ಟೆಕ್ಕಿ ಹತ್ಯೆ
ಬೆಂಗಳೂರು, ಜನವರಿ 21 : ಲ್ಯಾಪ್ಟಾಪ್ ಚಾರ್ಜರ್ ವೈರ್ನಿಂದ ಕುತ್ತಿಗೆ ಬಿಗಿದು ಸಾಫ್ಟ್ವೇರ್ ಇಂಜಿನಿಯರ್ ವೊಬ್ಬರನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮೃತಪಟ್ಟವರನ್ನು ಐಬಿಎಂ ಉದ್ಯೋಗಿ ಕುಸುಮಾ ರಾಣಿ ಸಿಂಗ್ಲಾ (31) ಎಂದು ಗುರುತಿಸಲಾಗಿದೆ. ಪಂಜಾಬ್ ಮೂಲದ ಕುಸುಮಾ ರಾಣಿ ಅವರು, ಕಾಡುಗೋಡಿ ಸಮೀಪದ ಮಹಾವೀರ್ ಕಿಂಗ್ಸ್ ಪ್ಲೇಸ್ ಅಪಾರ್ಟ್ಮೆಂಟ್ನಲ್ಲಿ ದೆಹಲಿ ಮೂಲದ ನಿಧಿ ಶರ್ಮಾ ಅವರ ಜೊತೆ ವಾಸವಾಗಿದ್ದರು. [ಬೆಂಗಳೂರಿನ ಟೆಕ್ಕಿಯನ್ನು ಗುಂಡಿಕ್ಕಿ ಕೊಂದ ಕರೀಂನಗರ ಪೊಲೀಸರು!]

ಮೊದಲು ಕಂಪೆನಿಯ ನೋಯ್ಡಾ ಶಾಖೆಯಲ್ಲಿದ್ದ ಕುಸುಮಾ ರಾಣಿ ಅವರು ಆರು ತಿಂಗಳ ಹಿಂದೆ ವೈಟ್ಫೀಲ್ಡ್ ಶಾಖೆಗೆ ವರ್ಗಾವಣೆಗೊಂಡಿದ್ದರು. ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದ ಕುಸುಮಾ ಅವರು ಮನೆಯಲ್ಲಿದ್ದರು. ಸಂಜೆ 7.30ರ ಸುಮಾರಿಗೆ ನಿಧಿ ಶರ್ಮಾ ಅವರು ಮನೆಗೆ ವಾಪಸ್ ಆದಾಗ ಕುಸುಮಾ ಮೃತದೇಹ ಪತ್ತೆಯಾಗಿದೆ. [ಚೆನ್ನೈ ಪ್ರವಾಹದಿಂದ ಬದುಕುಳಿದು ಬಂದ ಮೈಸೂರು ಟೆಕ್ಕಿ]
ಪರಿಚಿತರಿಂದಲೇ ಕೊಲೆ? : ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ವ್ಯಕ್ತಿಯೊಬ್ಬರು ಕುಸುಮಾ ಅವರನ್ನು ಕೇಳಿಕೊಂಡು ಅಪಾರ್ಟ್ಮೆಂಟ್ಗೆ ಬಂದಿದ್ದರು ಎಂದು ಅಲ್ಲಿನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಆಗ ಕುಸುಮಾ ಅವರು ಮನೆಯಲ್ಲಿರಲಿಲ್ಲ. [ಬೆಂಗಳೂರು : ಯುವಕರಿಗೆ ಬುದ್ಧಿವಾದ ಹೇಳಿದ ಟೆಕ್ಕಿ ಕೊಲೆ]
ಮಧ್ಯಾಹ್ನ 1 ಗಂಟೆ ಸುಮಾರಿಗೆ ವಾಪಸ್ ಆದ ಕುಸುಮಾ ಅವರು ಆತನನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಮಧ್ಯಾಹ್ನ 3 ಗಂಟೆಗೆ ಆ ವ್ಯಕ್ತಿ ಅಪಾರ್ಟ್ಮೆಂಟ್ನಿಂದ ಹೊರಹೋಗಿದ್ದಾನೆ. ನಂತರ ಕುಸುಮಾ ಅವರ ಮನೆಗೆ ಯಾರೂ ಆಗಮಿಸಿಲ್ಲ ಎಂದು ಭದ್ರತಾ ಸಿಬ್ಬಂದಿ ಪೊಲೀಸರಿಗೆ ಹೇಳಿದ್ದಾರೆ.
ಕುಸುಮಾ ಅವರ ಕುತ್ತಿಗೆಗೆ ಲ್ಯಾಪ್ಟಾಪ್ ಚಾರ್ಜ್ರ್ ವೈರ್ ಬಿಗಿದು ಕೊಲೆ ಮಾಡಲಾಗಿದೆ. ಆದರೆ, ಮನೆಯ ಯಾವುದೇ ವಸ್ತು ಕಳವಾಗಿಲ್ಲ. ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿಲ್ಲ. ಆದ್ದರಿಂದ, ಪರಿಚಿತರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಠಾಣೆಗೆ ದೂರು ನೀಡಿದ್ದರು : ಪತಿಯಿಂದ ವಿಚ್ಛೇದನ ಪಡೆದಿದ್ದ ಕುಸುಮಾ ಅವರು ಮತ್ತೊಂದು ವಿವಾಹವಾಗಲು ಶಾದಿ ಡಾಟ್ ಕಾಂ ಸೇರಿದಂತೆ ಇತರ ಮ್ಯಾಟ್ರಿಮೋನಿಯಲ್ ವೆಬ್ ಸೈಟ್ಗಳಲ್ಲಿ ಸ್ವವಿವರಗಳನ್ನು ಪ್ರಕಟಿಸಿದ್ದರು. ಶಾದಿ ಡಾಟ್ ಕಾಂ ಮೂಲಕ ಪರಿಚಿತರಾದ ವ್ಯಕ್ತಿಯೊಬ್ಬರು ಮದುವೆ ಆಗುವುದಾಗಿ ನಂಬಿಸಿ, ಹಣದ ಸಹಾಯ ಪಡೆದು ವಂಚಿಸಿದ್ದಾರೆ ಎಂದು ಕುಸುಮಾ ಡಿ.30ರಂದು ಕಾಡುಗೋಡಿ ಪೊಲೀಸರಿಗೆ ದೂರು ನೀಡಿದ್ದರು.
ಇದೇ ವ್ಯಕ್ತಿ ಕುಸುಮಾ ಅವರನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅಪಾರ್ಟ್ಮೆಂಟ್ ಸಿಸಿಟಿವಿ ದೃಶ್ಯಾವಳಿಗಳನ್ನು ಕಾಡುಗೋಡಿ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications