ಉದ್ಯೋಗ ನೀಡುತ್ತೇನೆ ಎಂದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಿನಲ್ಲಿ ಟೆಕ್ಕಿ ಬಂಧನ
ಬೆಂಗಳೂರು, ಫೆಬ್ರವರಿ. 03: ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬ್ಲಾಕ್ಮೇಲ್ ಮಾಡುತ್ತಿದ್ದ ಟೆಕ್ಕಿಯನ್ನು ಆಗ್ನೇಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು 36 ವರ್ಷದ ದಿಲೀಪ್ ಪ್ರಸಾದ್ ಎಂದು ಗುರುತಿಸಲಾಗಿದೆ. ಮಹಿಳೆಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಅವರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡುತ್ತಿದ್ದರು ಎಂದು ವರದಿಯಾಗಿದೆ.
A techie Dilleep Prasad has been arrested by #Bengaluru police for molesting women in the garb of offering them jobs. He used to pose as a women on insta gram offering jobs,and would lure them to Oyo rooms. More than 10-12 women have been exploited informs police. #Karnataka pic.twitter.com/9dkqHYiXQA
— Imran Khan (@KeypadGuerilla) February 3, 2023
ಆರೋಪಿಯು ದಿಲೀಪ್ ಮೋನಿಕಾ ಮತ್ತು ಮ್ಯಾನೇಜರ್ ಹೆಸರಿನಲ್ಲಿ ಎರಡು ಇನ್ಸ್ಟಾಗ್ರಾಮ್ ಖಾತೆಗಳನ್ನು ತೆರೆದಿದ್ದರು. ಈ ಖಾತೆಗಳ ಮೂಲಕ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ಬಳಿಕ ಅವರನ್ನು ಓಯೋ ಕೊಠಡಿಗಳಿಗೆ, ಯಾವುದಾದರೂ ಸ್ಥಳಕ್ಕೆ ಬರುವಂತೆ ಆಹ್ವಾನಿಸಿ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ಈ ವಿಡಿಯೋಗಳನ್ನು ಬಳಸಿಕೊಂಡು ಮಹಿಳೆಯರನ್ನು ಬ್ಲಾಕ್ಮೇಲ್ ಮಾಡಿ ಹಣ ಗಳಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲಸದ ಆಸೆಯಿಂದ ಬಂದ 10 ರಿಂದ 12ಕ್ಕೂ ಹೆಚ್ಚು ಮಹಿಳೆಯರು ಈ ಆರೋಪಿ ದಿಲೀಪ್ ಪ್ರಸಾದ್ರಿಂದ ಶೋಷಣೆಗೆ ಒಳಗಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉದ್ಯೋಗವನ್ನು ಹುಡುಕುತ್ತಿರುವ ವಿವಾಹಿತ ಮಹಿಳೆಯರನ್ನು ಗುರುತಿಸಿ ಅವರನ್ನು ಪರಿಚಯ ಮಾಡಿಕೊಂಡು ಪ್ರಮುಖ ಕಂಪನಿಗಳ ಹೆಸರುಗಳನ್ನು ಹೇಳಿ, ಉತ್ತಮ ಸಂಬಳ ಸಿಗುವ ಕೆಲಸ ಕೊಡಿಸುವ ಭರವಸೆ ನೀಡುತ್ತಿದ್ದರು. ಇನ್ಸ್ಟಾಗ್ರಾಮ್ ಖಾತೆಗಳಲ್ಲಿ ಮಹಿಳೆಯರ ಚಿತ್ರಗಳನ್ನು ಹಾಕಿ ತಾನು ಮಹಿಳೆ ಎಂದು ನಂಬಿಕೆ ಬರುವಂತೆ ನಟಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಆರೋಪಿ ದಿಲೀಪ್ ಪ್ರಸಾದ್ ಹಲವು ಮಹಿಳೆಯರಿಗೆ ವಂಚನೆ ಮಾಡಿರುವುದು ಪೊಲೀಸರಿಗೆ ಪತ್ತೆಯಾಗಿದೆ. ಇದಲ್ಲದೆ ಆತನ ಮೊಬೈಲ್ ಫೋನ್ನಲ್ಲಿ ಹಲವು ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications