ಮದ್ಯಪಾನ ತಪಾಸಣೆ: ಪೊಲೀಸರಿಗೆ ಡಿಕ್ಕಿ ಹೊಡೆದ ಟೆಕ್ಕಿ
ಬೆಂಗಳೂರು, ಮೇ. 26: ಮದ್ಯಪಾನ ತಪಾಸಣೆ ವೇಳೆ ಸಂಚಾರ ಪೊಲೀಸ್ ಮುಖ್ಯ ಪೇದೆಗೆ ದ್ವಿಚಕ್ರ ವಾಹನ ಸವಾರನೊಬ್ಬ ಡಿಕ್ಕಿ ಹೊಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಿರಂಜನ್ ಕುಮಾರ್, ಮುಖ್ಯಪೇದೆ ತಮ್ಮಯ್ಯ, ಪೇದೆಗಳಾದ ಗೋಪಾಲ್ ಹಾಗೂ ಕುಮಾರ್ ನಾಯಕ್ ಎಂಬುವರು ಮೇ.24 ಶನಿವಾರ ರಾತ್ರಿ ಸುಂಕದಕಟ್ಟೆ ಕೆಬ್ಬೆಹಳ್ಳಿ ಬಳಿ ಮದ್ಯಪಾನ ತಪಾಸಣೆ ನಡೆಸುತ್ತಿದ್ದರು.[ಸುಳ್ಳು ಕೇಸ್ ಬೆದರಿಕೆ: ಟ್ರಾಫಿಕ್ ಇನ್ಸ್ಪೆಕ್ಟರ್ ಸಸ್ಪೆಂಡ್]

ಈ ವೇಳೆ ಅನ್ನಪೂರ್ಣೇಶ್ವರಿ ಬಡಾವಣೆ ನಿವಾಸಿ ನಾಗರಬಾವಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿ ರಮೇಶ್(32) ಮದ್ಯಪಾನ ಮಾಡಿ ನಾಗರಬಾವಿ ಮುಖ್ಯರಸ್ತೆಯಲ್ಲಿ ಹೆಲ್ಮೆಟ್ ಧರಿಸದೆ ವೇಗವಾಗಿ ಬರುತ್ತಿದ್ದ. ಈ ವೇಳೆ ಸಂಚಾರ ಪೊಲೀಸರು ತಪಾಸಣೆಗಾಗಿ ರಮೇಶ್ನನ್ನು ತಡೆಯಲು ಮುಂದಾದಾಗ ಗಾಬರಿಗೊಂಡ ರಮೇಶ್ ತಪ್ಪಿಸಿಕೊಳ್ಳುವ ಭರದಲ್ಲಿ ಮುಖ್ಯ ಪೇದೆ ತಮ್ಮಯ್ಯ ಅವರಿಗೆ ಡಿಕ್ಕಿ ಹೊಡೆದು ಬೈಕ್ನಿಂದ ಕೆಳಗೆ ಬಿದ್ದಿದ್ದಾನೆ.[ಟ್ರಾಫಿಕ್ ಪೊಲೀಸು ಕೆಲಸ ಯಾರಿಗೆ ಬೇಕು ಹೇಳಿ?]
ತಮ್ಮಯ್ಯ ಅವರ ಕಾಲಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಮಾಡಿದ ರಮೇಶ್ಗೂ ಸಣ್ಣ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಮೇಶ್ ಮದ್ಯಪಾನ ಮಾಡಿರುವುದು ಪರೀಕ್ಷೆ ವೇಳೆ ದೃಢಪಟ್ಟಿದೆ. ಪೊಲೀಸರ ತಪಾಸಣೆಗೆ ಅಸಹಕಾರ, ಡಿಕ್ಕಿ ಸೇರಿದಂತೆ ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ರಮೇಶ್ ವಿರುದ್ಧ ಪ್ರಕರಣ ದಾಖಲಿಸಿಸಲಾಗಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications