ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಟೆಕ್ಕಿ ಪತ್ನಿ ಆತ್ಮಹತ್ಯೆಗೆ ಶರಣು

|
Google Oneindia Kannada News

ಬೆಂಗಳೂರು, ಡಿಸೆಂಬರ್ 6 : ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರು ತಿಂಗಳ ಹಿಂದೆ ಅಮೆರಿಕದಿಂದ ಪತಿ ಜೊತೆಗೆ ಗೃಹಿಣಿ ಬೆಂಗಳೂರಿಗೆ ಆಗಮಿಸಿದ್ದರು.

ಮೃತಪಟ್ಟವರನ್ನು ಆಶಾ (30) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಎಂಬುವವರನ್ನು ವಿವಾಹವಾಗಿದ್ದ ಆಶಾ ರಾಜಾಜಿನಗರ ಬಳಿಯ ಪ್ರಶಾಂತ್‌ ನಗರದಲ್ಲಿ ವಾಸವಾಗಿದ್ದರು. ಸತ್ಯನಾರಾಯಣ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

 ತನ್ವೀರ್ ಸೇಠ್ ಕೊಲೆಯತ್ನ ಪ್ರಕರಣ: ಆರೋಪಿ ಪತ್ನಿ ಆತ್ಮಹತ್ಯೆ ಬೆದರಿಕೆ ತನ್ವೀರ್ ಸೇಠ್ ಕೊಲೆಯತ್ನ ಪ್ರಕರಣ: ಆರೋಪಿ ಪತ್ನಿ ಆತ್ಮಹತ್ಯೆ ಬೆದರಿಕೆ

ಗುರುವಾರ ಸಂಜೆ ಮನೆಯಲ್ಲಿ ಆಶಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ರಾಜಾಜಿನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.

ಕೆಲಸ ಹೋಗುತ್ತೆ ಎನ್ನುವ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಟೆಕ್ಕಿ ಕೆಲಸ ಹೋಗುತ್ತೆ ಎನ್ನುವ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಟೆಕ್ಕಿ

Techie Wife Ends Life Prashanth Nagar Bengaluru

ಆಶಾ ಮತ್ತು ಸತ್ಯನಾರಾಯಣ 15 ವರ್ಷಗಳ ಹಿಂದೆ ವಿವಾಹವಾಗಿದ್ದರು. ಅಮೆರಿಕದಲ್ಲಿ ವಾಸವಾಗಿದ್ದ ದಂಪತಿಗಳು ಆರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸ್ ಆಗಿದ್ದರು. ಸತ್ಯನಾರಾಯಣ ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ನಾಲ್ಕು ನಿಮಿಷಕ್ಕೆ ಒಂದು ಆತ್ಮಹತ್ಯೆ: ಇದು ಭಾರತೀಯರ ಕಥೆ! ನಾಲ್ಕು ನಿಮಿಷಕ್ಕೆ ಒಂದು ಆತ್ಮಹತ್ಯೆ: ಇದು ಭಾರತೀಯರ ಕಥೆ!

ಆಶಾ ಕುಟುಂಬಸ್ಥರು ಸತ್ಯನಾರಾಯಣ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A 30-year-old woman committed suicide in Prashanth Nagar, Bengaluru. Asha was married to Satyanarayana a software engineer. Couple recently come to Bengaluru from united states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X