ಕೊರೊನಾ ಜೊತೆ ಎಚ್1ಎನ್1 ಸೋಂಕು: ಟೆಕ್ಕಿಗಳಿಗೆ ಆತಂಕ
ಬೆಂಗಳೂರು, ಮಾರ್ಚ್ 7: ಬೆಂಗಳೂರಲ್ಲಿ ಕೊರೊನಾ ಜೊತೆಗೆ ಎಚ್1ಎನ್1 ಭೀತಿಯೂ ಆರಂಭವಾಗಿದೆ.
ಐಟಿ ವಲಯದಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ಭಯ ಕಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಒಂದೆಡೆ ಕುಳಿತು ಕೆಲಸ ಮಾಡುವ ಕಾರಣ ಒಬ್ಬರಿಂದೊಬ್ಬರಿಗೆ ಹರಡುವ ಸಾಧ್ಯತೆ ಇರುತ್ತದೆ. ಈಗಾಗಲೇ ಚೀನಾದಲ್ಲಿ ಕೊರೊನಾ ಸೋಂಕಿಗೆ 3 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಇತರೆ ದೇಶಗಳಿಂದ ಬಂದಿರುವ 24 ಜನರಲ್ಲಿ ಕೋವಿಡ್ 19 ತಗುಲಿದ್ದು, ವಿದೇಶಗಳಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಾಗಲಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಅಮೆಜಾನ್ನಲ್ಲಿ ಇಬ್ಬರು ಉದ್ಯೋಗಿಗಳಿಗೆ ಎಚ್1ಎನ್1
ಇ-ಕಾಮರ್ಸ್ ಕಂಪನಿಯಾದ ಅಮೆಜಾನ್ನ ಬೆಂಗಳೂರು ಕಚೇರಿಯ ಇಬ್ಬರು ಉದ್ಯೋಗಿಗಳಲ್ಲಿ ಈ ಸೋಂಕು ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅನಾರೋಗ್ಯದಿಂದಾಗಿ ಇವರು ಕಚೇರಿಗೆ ಬರುತ್ತಿಲ್ಲ.ಇನ್ನು ಮರ್ಸಿಡಿಸ್ ಬೆಂಜ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಇಂಡಿಯಾ ಕಂಪನಿಯಲ್ಲೂ ಇದೆ ಪರಿಸ್ಥಿತಿ ಇದೆ ಎಂಬುದು ತಿಳಿದುಬಂದಿದೆ.

ಉದ್ಯೋಗಿಗಳ ಸುರಕ್ಷತೆಗೆ ಮೊದಲ ಆದ್ಯತೆ ಎಂದ ಕಂಪನಿ
ಉದ್ಯೋಗಿಗಳ ಆರೋಗ್ಯ ಮತ್ತು ಸುರಕ್ಷತೆ ನಮ್ಮ ಮೊದಲ ಆದ್ಯತೆ, ಮುಂಜಾಗ್ರತಾ ಕ್ರಮವಾಗಿ ಕಚೇರಿ ಸ್ವಚ್ಛಗೊಳಸಿಲಾಗುತ್ತಿದೆ. ಅಗತ್ಯವಿರುವ ಸೌಲಭ್ಯ ಕಲ್ಪಿಸಲಾಗುತ್ತದೆ. ಹಾಗೆಯೇ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ.

ಬೆಂಗಳೂರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಟೆಕ್ಕಿಗೆ ಕೊರೊನಾ ಸೋಂಕಿಲ್ಲ
ಬೆಂಗಳೂರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹೈದರಾಬಾದ್ ಮೂಲದ ಟೆಕ್ಕಿಗೆ ಕೊರೊನಾ ಸೋಂಕಿಲ್ಲ ಎಂಬುದು ದೃಢಪಟ್ಟಿದೆ. ವರು ಇತ್ತೀಚೆಗಷ್ಟೇ ದುಬೈನಿಂದ ಬೆಂಗಳೂರಿಗೆ ಬಂದಿದ್ದರು. ಬಳಿಕ ಹೈದರಾಬಾದ್ಗೆ ಬಸ್ಸಿನಲ್ಲಿ ತೆರಳಿದ್ದರು. ಒಂದು ವಾರದ ಬಳಿಕ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಅದು ಕೊರೊನಾ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿತ್ತು.

ಕೊರೊನಾಕ್ಕೆ ಮೃತಪಟ್ಟವರ ಸಂಖ್ಯೆ 3070ಕ್ಕೆ ಏರಿಕೆ
ಕೊರೊನಾ ವೈರಸ್ ಸೋಂಕಿಗೆ ಚೀನಾದಲ್ಲಿ ಶುಕ್ರವಾರ 28 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 3070ಕ್ಕೆ ಏರಿಕೆಯಾಗಿದೆ. ಹ್ಯುಬೆದಲ್ಲಿ 74 ಮಂದಿಗೆ ಹೊಸದಾಗಿ ಕೋವಿಡ್ 19 ತಗುಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications