Namma Metro: ರೈಲಿನಲ್ಲಿ ದೋಷ, ಸೇವೆಯಲ್ಲಿ ವ್ಯತ್ಯಯ, ಪದೇ ಪದೆ ಯಾಕೆ ಹೀಗೆ?
ಬೆಂಗಳೂರು, ಜೂನ್ 13: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತೀ ವೇಗದ ಮತ್ತು ಸುರಕ್ಷತೆಯ ಪ್ರಯಾಣ ಸೇವೆಗೆ ಹೆಸರಾಗಿರುವ ನಮ್ಮ ಮಟ್ರೋ ರೈಲಿನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಹೀಗಾಗಿ ಕೆಲವು ಗುರುವಾರ ಬೆಳಗ್ಗೆ ಕೆಲವು ಘಂಟೆಗಳ ಕಾಲ ಮೆಟ್ರೋ ಸೇವೆಯಲ್ಲಿ ವ್ಯತ್ಯವಾಯಿತು.
ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬೆಂಗಳೂರು ಮಟ್ರೋ ರೈಲು ನಿಗಮ (BMRCL) ಅಧಿಕಾರಿಗಳು, ಗುರುವಾರ ಬೆಳಗ್ಗೆ ಎಂದಿನಂತೆ ರೈಲು ಸಂಚಾರ ಆರಂಭವಾಗಿತ್ತು. ಈ ವೇಳೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆಯಿಂದಾಗಿ ಬೆಳಗ್ಗೆ 9.58 ಕ್ಕೆ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ಇದರಿಂದ ಪ್ರಯಾಣಿಕರು ಪರದಾಡಿದರು.

ನಂತರ ಆ ದೋಷಯುಕ್ತ ರೈಲನ್ನು ಕೆಂಪೇಗೌಡ ಮೆಜೆಷ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪಾಕೆಟ್ ಟ್ರ್ಯಾಕ್ಗೆ ಕೊಂಡೋಯ್ಯಲಾಗಿದೆ. ಇದರಿಂದ ಒಂದಷ್ಟು ತೊಂದರೆ ಆಗಿದ್ದು, ಸಂಚಾರ ಸೇವೆಯಲ್ಲಿ ವ್ಯತ್ಯವಾಯಿತು. ಒಂದೆರಡು ಗಂಟೆಗಳ ಬಳಿಕ ರೈಲು ಸೇವೆಯನ್ನು ಎಂದಿನಂತೆ ಆರಂಭಿಸಲಾಗಿದೆ ಎಂದು ನಮ್ಮ ಮೆಟ್ರೋ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದ ಟ್ವಿಟ್ಟರ್ (ಎಕ್ಸ್) ನಲ್ಲಿ ಪೋಸ್ಟ್ ಮಾಡಿರುವ ಅವರು ಉಂಟಾದ ಅಡಚಣೆಗೆ ಬಿಎಂಆರ್ಸಿಎಲ್ ವಿಷಾದಿಸುತ್ತೇವೆ ಎಂದು ತಿಳಿಸಿದ್ದಾರೆ. ಜೊತೆಗೆ ದೋಷಯುಕ್ತ ರೈಲನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ಮರದ ಕೊಂಬೆ ಬಿದ್ದು, ತಾಂತ್ರಿಕ ಸಮಸ್ಯೆ, ಆತ್ಮಹತ್ಯೆ ಯತ್ನದಂತಹ ಕೆಲವು ಸಮಸ್ಯೆಗಳಿಂದಾಗಿ ಪದೇ ಪದೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಅದು ಬೆಳಗ್ಗೆ ಮತ್ತು ಸಂಜೆ ಪೀಕ್ ಸಮಯದಲ್ಲಿ ಹೀಗಾಗುತ್ತಿರುವ ಕಾರಣ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.
ಮೆಟ್ರೋ ಸೇವೆ ಬಗ್ಗೆ ಸುಳ್ಳು ಹೇಳಿದ್ರಾ ಅಧಿಕಾರಿಗಳು?
ಮೆಟ್ರೋ ರೈಲಿನಲ್ಲಿ ತಾಂತ್ರಿಕ ದೋಷಗಳಾದ ಬಳಿಕ ಬೆಳಗ್ಗೆ 11.30ರ ಹೊತ್ತಿಗೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳನ್ನು ಮರುಸ್ಥಾಪಿಸಲಾಗಿದೆ. ಎಲ್ಲವು ಸರಿ ಹೋಗಿದ್ದು, ಎಂದಿನಂತೆ ಸೇವೆ ಆರಂಭವಾಗಿದೆ. ಈ ಬಗ್ಗೆ ಸಾರ್ವಜನಿಕರು ದಯವಿಟ್ಟು ಗಮನಿಸಬಹುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಟ್ವೀಟ್ನಲ್ಲಿ ಮಾಹಿತಿ ನೀಡಿದ್ದಾರೆ.
ಆದರೆ, ನಮ್ಮ ಮೆಟ್ರೋ ಟ್ವೀಟ್ ಗೆ ಪ್ರತಿಕ್ರಿಯಿಸಿದ ವ್ಯಕ್ತಿಯೊಬ್ಬರು ಬೆಳಗ್ಗೆ 11:30ಗಂಟೆಗೆ ಮೆಟ್ರೋ ರೈಲು ಸೇವೆ ಮರುಸ್ಥಾಪಿಸಲಾಗಿಲ್ಲ. ಈ ಬಗ್ಗೆ ಸರಿಯಾದ ಮಾಹಿತಿಯನ್ನು ಏಕೆ ಪ್ರಕಟಿಸಿಲ್ಲ. ಪ್ರತಿ 30 ನಿಮಿಷಗಳಿಗೊಮ್ಮೆ ನಾವು ಮಾಹಿತಿ ಪಡೆಯುತ್ತಿದ್ದು, ಇದು ಆರಂಭವಾಗಲಿದೆ ಎಂದು ಹತಿಳಿಸಿದ್ದಾರೆ. ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ಅವರು ಕೇಳಿಕೊಂಡಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications