ಆಚಾರ್ಯ ಕ್ಯಾಂಪಸ್ ನಲ್ಲಿ ರಾಜ್ಯಮಟ್ಟದ ಯೋಜನಾ ಸ್ಪರ್ಧೆ
ಬೆಂಗಳೂರು, ಫೆ.11 : ಬೆಂಗಳೂರಿನ ಆಚಾರ್ಯ ಇನ್ಸ್ ಟಿಟ್ಯೂಟ್ ಮತ್ತೊಂದು ರಾಜ್ಯ ಮಟ್ಟದ ಸ್ಪರ್ಧೆಯನ್ನು ನಡೆಸಲು ತಯಾರಿ ಆರಂಭಿಸಿದೆ. ಫೆ.16 ಮತ್ತು 17 ರಂದು ಇನ್ಸ್ ಟಿಟ್ಯೂಟ್ ಆವರಣದಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಯೋಜನಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
120 ಎಕರೆ ಪ್ರದೇಶದಲ್ಲಿ ಹಬ್ಬಿರುವ ಆಚಾರ್ಯ ಇನ್ಸ್ ಟಿಟ್ಯೂಟ್ ಪರಿಸರ ಸ್ನೇಹಿ ಕ್ಯಾಂಪಸ್ ನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಲವಾರು ಸ್ಪರ್ಧೆಗಳು ಈಗಾಗಲೇ ನಡೆದಿವೆ. ಸದ್ಯ ಫೆ.16 ಮತ್ತು 17ರಂದು ಆಚಾರ್ಯ ಪಾಲಿಟೆಕ್ನಿಕ್ ಇನ್ಸ್ ಟಿಟ್ಯೂಟ್ ಆವರಣದಲ್ಲಿ Technical Project Competition ಹಮ್ಮಿಕೊಂಡಿದೆ.

ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ ಮತ್ತು ಆಚಾರ್ಯ ಪಾಲಿಟೆಕ್ನಿಕ್ ಜಂಟಿಯಾಗಿ ಈ ರಾಜ್ಯ ಮಟ್ಟದ ತಾಂತ್ರಿಕ ಯೋಜನಾ ಸ್ಪರ್ಧೆಯನ್ನು ಆಯೋಜಿಸಿವೆ. ಈ ಸ್ಪರ್ಧೆ "Do-it yourself" ಎಂದೇ ಪ್ರಸಿದ್ಧಿ ಪಡೆದಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕ್ಯಾಂಪಸ್ ಆವರಣದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಫೆ.16ರಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಸ್ಪರ್ಧೆಯನ್ನು ಉದ್ಗಾಟಿಸಿಲಿದ್ದು, ಯಲಹಂಕ ಶಾಸಕ ವಿಶ್ವನಾಥ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬಹುದಾಗಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ತಮ್ಮ ಬುದ್ದಿವಂತಿಕೆ ಪ್ರದರ್ಶಿಸಲಿದ್ದಾರೆ.55 ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, 170 ಯೋಜನೆಗಳನ್ನು ತಯಾರಿಸಲಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications