ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು, ಮೇ 04: ಅಕ್ರಮವಾಗಿ ಬೆಡ್ ಬುಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದಾರೆ.
ಮೇ.04 ರಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ಅಕ್ರಮವಾಗಿ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಬೆಡ್ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿಗಳ ಅವ್ಯವಹಾರವನ್ನು ಬಯಲಿಗೆಳೆದಿದೆ.

ತನಿಖೆ ನಡೆಸಿದಾಗ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತರಾಗಿರುವ ಸಿಬ್ಬಂದಿಗಳು ಕೆಲವು ಖಾಸಗಿ ಆಸ್ಪತ್ರೆಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಸಾರ್ವಜನಿಕರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬಂಡಿದೆ.
ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿರುವ ಮಾಫಿಯಾವನ್ನು ತೇಜಸ್ವಿ ಸೂರ್ಯ ಸಾಕ್ಷ್ಯ ಸಮೇತವಾಗಿ ಬಹಿರಂಗಗೊಳಿಸಿದ್ದಾರೆ.
ಕೋವಿಡ್-19 ನ ಯಾವುದೇ ಗುಣ ಲಕ್ಷಣಗಳನ್ನು ಹೊಂದಿರದ ಸೋಂಕಿತರ ಹೆಸರಿನಲ್ಲಿ ಬಿಬಿಎಂಪಿ ಉಸ್ತುವಾರಿ ಹೊಂದಿರುವ ಸಿಬ್ಬಂದಿ ಬೆಡ್ ನೋಂದಣಿಗೊಳಿಸಿ, ಕೆಲವೇ ಕ್ಷಣಗಳ ನಂತರ ಅದೇ ಬೆಡ್ ನ್ನು ಹಣಕ್ಕೆ ಮತ್ತೊಬ್ಬರ ಹೆಸರಿನಲ್ಲಿ ನೋಂದಣಿಗೊಳಿಸುತ್ತಾರೆ.
Recommended Video
ನಿಜವಾಗಿಯೂ ಅವಶ್ಯಕತೆ ಇರುವ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಬೆಡ್ ಸಲುವಾಗಿ ಅಲೆದಾಡುತ್ತಿದ್ದರೆ, ಕೆಲವೇ ಕೆಲವರು ಅಕ್ರಮವಾಗಿ ಬೆಡ್ ಗಳನ್ನು ದುಡ್ಡಿಗೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಬೆಡ್ ಗಳ ಕೃತಕ ಅಭಾವ ಸೃಷ್ಟಿಯನ್ನು ವಿವರಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications