ಅನಂತ್ ಕುಮಾರ್ ಕಚೇರಿ ಬೇಡ ಎಂದ ಸಂಸದ ತೇಜಸ್ವಿ ಸೂರ್ಯ
Recommended Video
ಬೆಂಗಳೂರು, ಜೂನ್ 17: ತಮ್ಮ ರಾಜಕೀಯ ಮತ್ತು ಸಾಮಾಜಿಕ ಗುರು ಅನಂತ್ಕುಮಾರ್ ಅವರು ಬಳಸುತ್ತಿದ್ದ ಕಚೇರಿ ತಮಗೆ ಬೇಡವೆಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅಚ್ಚರಿ ರೀತಿಯಾಗಿ ಟಿಕೆಟ್ ಪಡೆದುಕೊಂಡು ಆರಿಸಿ ಬಂದಿರುವ ತೇಜಸ್ವಿ ಸೂರ್ಯ ಅವರಿಗೆ, ಇದೆ ಕ್ಷೇತ್ರದ ಮಾಜಿ ಸಂಸದ ಅನಂತ್ಕುಮಾರ್ ಅವರ ಕಚೇರಿಯನ್ನು ನೀಡಲಾಗಿತ್ತು, ಆದರೆ ಆ ಕಚೇರಿ ತಮಗೆ ಬೇಡ ಎಂದು ತೇಜಸ್ವಿ ಸೂರ್ಯ ಅವರು ಬಿಬಿಎಂಪಿಗೆ ಪತ್ರ ಬರೆದಿದ್ದಾರೆ.
ಜಯನಗರ ಸೌಥ್ ಎಂಡ್ ವೃತ್ತದಲ್ಲಿ ಅನಂತ್ಕುಮಾರ್ ಅವರ ಕಚೇರಿ ಇದೆ. ಅವರು ಕಾಲವಾಗುವವರೆಗೂ ಬಹು ವರ್ಷ ಇದೇ ಕಚೇರಿಯಲ್ಲಿದ್ದುಕೊಂಡೇ ಅನಂತ್ಕುಮಾರ್ ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಈಗ ಸಹಜವಾಗಿಯೇ ಕ್ಷೇತ್ರದ ಹೊಸ ಸಂಸದರಿಗೆ ಈ ಕಚೇರಿಯನ್ನು ನೀಡಲಾಗಿದೆ. ಆದರೆ ತೇಜಸ್ವಿ ಸೂರ್ಯ ಅವರಿಗೆ ಈ ಕಚೇರಿ ಬೇಡವಾಗಿದೆ.

ಬಿಬಿಎಂಪಿ ಆಯುಕ್ತರಿಗೆ ಪತ್ರ
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ತಮಗೆ ಶಾಲಿನಿ ಗ್ರೌಂಡ್ಸ್ ಎದುರು ಇರುವ ಕಟ್ಟಡದಲ್ಲಿ ಕಚೇರಿ ನೀಡಿ ಎಂದು ಮನವಿ ಮಾಡಿದ್ದಾರೆ. ಶಾಲಿನಿ ಗ್ರೌಂಡ್ಸ್ ಎದುರಿನ ಕಟ್ಟಡ ಕ್ಷೇತ್ರದ ಮಧ್ಯ ಭಾಗದಲ್ಲಿರುವುದರಿಂದ ಅಲ್ಲಿ ಕಚೇರಿ ಕೊಡಿ ಎಂದು ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.

ಕೇಳಿದ ಕಚೇರಿ ಕೊಡಲು ಆಗದು: ಬಿಬಿಎಂಪಿ
ಆದರೆ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪ್ರತ್ಯುತ್ತರ ನೀಡಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್, ಸಂಸದರಿಗೆ ಕಚೇರಿ ನೀಡುವುದು ಬಿಬಿಎಂಪಿಯ ಕಾರ್ಯ ಅಲ್ಲ ಅದು ರಾಜ್ಯ ಸರ್ಕಾರದ ಕಾರ್ಯ, ತೇಜಸ್ವಿ ಸೂರ್ಯ ಅವರು ಕೇಳಿರುವ ಕಟ್ಟಡದಲ್ಲಿ ಬಿಬಿಎಂಪಿ ಕಚೇರಿ ತೆರೆಯಲಿದೆ, ಅದೂ ಅಲ್ಲದೆ ಆ ಕಟ್ಟಡದ ಕುರಿತು ಪ್ರಕರಣ ಸಹ ನಡೆಯುತ್ತಿದೆ ಎಂದಿದ್ದಾರೆ.

ತೇಜಸ್ವಿನಿ ಬದಲಿಗೆ ಟಿಕೆಟ್ ಗಿಟ್ಟಿಸಿಕೊಂಡ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ ಅವರಿಗೆ ಅಚ್ಚರಿಯ ರೀತಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ದೊರೆತಿತು. ಅನಂತ್ಕುಮಾರ್ ಅವರು ಕಾಲವಾದ ನಂತರ ಬೆಂಗಳೂರು ದಕ್ಷಿಣ ಕ್ಷೇತ್ರ ಟಿಕೆಟ್ ಅನ್ನು ಅನಂತ್ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ಕುಮಾರ್ ಅವರಿಗೆ ಕೊಡಲಾಗುತ್ತದೆ ಎನ್ನಲಾಗಿತ್ತು, ಆದರೆ ಅಚ್ಚರಿಯ ರೀತಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಯಿತು.

ಲೋಕಸಭೆಯ ಅತ್ಯಂತ ಕಿರಿಯ ಸಂಸದ
ಇಂದಷ್ಟೆ ಪ್ರಮಾಣ ವಚನ ಸ್ವೀಕರಿಸಿರುವ ತೇಜಸ್ವಿ ಸೂರ್ಯ ಅವರು ಕರ್ನಾಟಕದ ಅತ್ಯಂತ ಕಿರಿಯ ಸಂಸದರಾಗಿದ್ದಾರೆ. ಅವರು ಇಂದು ಪಂಚೆ, ಶಲ್ಯ ತೊಟ್ಟು ಸಂಸತ್ತಿಗೆ ಹೋಗಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications