ಗ್ರಂಥಾಲಯದಲ್ಲಿ ಕಚೇರಿ ತೆರೆದು ಆಕ್ರೋಶಕ್ಕೆ ಗುರಿಯಾದ ತೇಜಸ್ವಿ ಸೂರ್ಯ
Recommended Video
ಬೆಂಗಳೂರು, ಸೆಪ್ಟೆಂಬರ್ 19 : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಚೇರಿ ಆರಂಭದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ದಿ. ಅನಂತ್ ಕುಮಾರ್ ಬಳಕೆ ಮಾಡುತ್ತಿದ್ದ ಕಚೇರಿಯನ್ನು ಬಳಸಲು ಅವರು ನಿರಾಕರಿಸಿದ್ದರು.
ಗ್ರಂಥಾಲಯವಿದ್ದ ಜಾಗದಲ್ಲಿ ತೇಜಸ್ವಿ ಸೂರ್ಯ ತಮ್ಮ ನೂತನ ಕಚೇರಿಯನ್ನು ಆರಂಭ ಮಾಡಲಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಸದರ ಕಚೇರಿಗೆ ಸ್ಥಳವನ್ನು ತೆರವುಗೊಳಿಸಲು ಆದೇಶವನ್ನು ಹೊರಡಿಸಿದೆ.
ಬಿಬಿಎಂಪಿಯ 168ನೇ ವಾರ್ಡ್ನಲ್ಲಿ ಸಂಸದರ ಕಚೇರಿ ಆರಂಭವಾಗಲಿದೆ. ಈ ಮೊದಲು ಬಿಬಿಎಂಪಿ ಸೌತ್ ಎಂಡ್ ವೃತ್ತದಲ್ಲಿ ಸಂಸದರಿಗೆ ಕಚೇರಿ ನಿಗದಿ ಮಾಡಿತ್ತು. ದಿ. ಅನಂತ್ ಕುಮಾರ್ ಅದೇ ಕಚೇರಿ ಬಳಕೆ ಮಾಡುತ್ತಿದ್ದರು.
ತೇಜಸ್ವಿ ಸೂರ್ಯ 2019ನೇ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿ ಸಂಸದರಾದಾಗ ಬಳಿಕ ಬಿಬಿಎಂಪಿಗೆ ಪತ್ರ ಬರೆದಿದ್ದರು. ಅನಂತ್ ಕುಮಾರ್ ಬಳಸುತ್ತಿದ್ದ ಕಚೇರಿ ಬೇಡ ಬೇರೆ ಕಡೆ ವ್ಯವಸ್ಥೆ ಮಾಡಲು ಕೋರಿದ್ದರು.

ಎಲ್ಲಿದೆ ಸಂಸದರ ನೂತನ ಕಚೇರಿ
ತೇಜಸ್ವಿ ಸೂರ್ಯ ನೂತನ ಕಚೇರಿ ನಂ 44, 11ನೇ ಮುಖ್ಯ ರಸ್ತೆ, 39ನೇ ಬಿ ಅಡ್ಡ ರಸ್ತೆ, ಜಯನಗರ 5ನೇ ಬ್ಲಾಕ್, ಪು. ತಿ. ನ. ಪಾರ್ಕ್ ಎದುರು, ಪಟ್ಟಾಭಿರಾಮನಗರದಲ್ಲಿ ಆರಂಭವಾಗಲಿದೆ. ಈ ಜಾಗ ವಾರ್ಡ್ ನಂ 168ರ ವ್ಯಾಪ್ತಿಯಲ್ಲಿ ಬರುತ್ತದೆ.

ಇ- ಗ್ರಂಥಾಲಯದ ಜಾಗ
ತೇಜಸ್ವಿ ಸೂರ್ಯ ಕಚೇರಿ ನಿರ್ಮಾಣಗೊಳ್ಳುತ್ತಿರುವ ಜಾಗ ಇ-ಗ್ರಂಥಾಲಕ್ಕೆ ಸೇರಿದ್ದು. ಜಯನಗರದ ಶಾಸಕರಾಗಿದ್ದ ದಿ. ಬಿ. ಎನ್. ವಿಜಯಕುಮಾರ್ ಮತ್ತು ಬೆಂಗಳೂರು ದಕ್ಷಿಣದ ಸಂಸದರಾಗಿದ್ದ ದಿ. ಅನಂತ್ ಕುಮಾರ್ ಇ-ಗ್ರಂಥಾಲಯವನ್ನು ಉದ್ಘಾಟನೆ ಮಾಡಿದ್ದರು.

ಮಕ್ಕಳು ಪಾಠ ಕಲಿಯುವ ಸ್ಥಳ
ಬೆಂಗಳೂರಿನಲ್ಲಿ ಅದರಲ್ಲೂ ಜಯನಗರದಲ್ಲಿ ಇರುವುದು ಕೆಲವು ಗ್ರಂಥಾಲಯಗಳು ಮಾತ್ರ. ಕೆಲವು ಸಂಘ ಸಂಸ್ಥೆಗಳು ಸುತ್ತಮುತ್ತಲಿನ ಬಡ ಮಕ್ಕಳಿಗೆ ಎಸ್ಎಸ್ಎಲ್ಸಿ ಟ್ಯೂಷನ್ ಮಾಡಲು ಈ ಕಟ್ಟಡವನ್ನು ಉಪಯೋಗಿಸುತ್ತಿದ್ದವು. ಐಎಎಸ್/ಐಪಿಎಸ್/ಕೆಎಎಸ್ ಪರೀಕ್ಷೆಗೆ ಸಿದ್ಧರಾಗುವ ಅಭ್ಯರ್ಥಿಗಳಿಗೆ ಈ ಗ್ರಂಥಾಲಯ ಉಪಯೋಗವಾಗುತ್ತಿತ್ತು.

ಪಾರ್ಕಿಂಗ್ ಸಮಸ್ಯೆ ಇದೆ
11ನೇ ಮುಖ್ಯ ರಸ್ತೆಯಲ್ಲಿ ಈಗಾಗಲೇ ವಾಹನಗಳ ಪಾರ್ಕಿಂಗ್ ಸಮಸ್ಯೆ ಇದೆ. ಸಂಸದರ ಕಚೇರಿಯೂ ಆರಂಭವಾದರೆ ಜನರ ಬಳಕೆ ಹೆಚ್ಚಾಗಲಿದ್ದು, ವಾಹನಗಳ ಪಾರ್ಕಿಂಗ್ಗೆ ಜನರು ಪರದಾಡಬೇಕಾಗುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ.

ಕಚೇರಿ ಜಾಗ ಚೆನ್ನಾಗಿತ್ತು
ಸೌತ್ ಎಂಡ್ ವೃತ್ತದಲ್ಲಿ ಅನಂತ್ ಕುಮಾರ್ ಬಳಕೆ ಮಾಡುತ್ತಿದ್ದ ಕಚೇರಿ ಚೆನ್ನಾಗಿತ್ತು. ಹತ್ತಿರ ನಮ್ಮ ಮೆಟ್ರೋ ಮತ್ತು ಬಿಎಂಟಿಸಿ ಬಸ್ ಸೌಕರ್ಯವಿತ್ತು. ತೇಜಸ್ವಿ ಸೂರ್ಯ ಆ ಕಚೇರಿಯನ್ನು ಬಳಕೆ ಮಾಡಬಹುದಿತ್ತು ಎಂಬುದು ಜನರ ಅಭಿಪ್ರಾಯವಾಗಿದೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications