ಗೆಲುವಿನ ಬಳಿಕ ಎಚ್.ಡಿ.ದೇವೇಗೌಡರ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ
ಬೆಂಗಳೂರು, ಜೂನ್, 05: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ನಡೆದಿದ್ದು, ಮೇ 4ಕ್ಕೆ ಅಂದರೆ ನಿನ್ನೆ ಫಲಿತಾಂಶ ಪ್ರಕಟವಾಗಿದೆ. ಇನ್ನು ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ವಿರುದ್ಧ 2,77,083 ಮತಗಳ ಅಂತರದಿಂದ ಗೆಲುವು ಸಾಧಿಸಿದ ತೇಜಸ್ವಿ ಸೂರ್ಯ ಅವರು ಇಂದು (ಜೂನ್ 05) ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿಯಾಗಿ ಗಮನ ಸೆಳೆದಿದ್ದಾರೆ.

1991ರಿಂದಲೂ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಆಗ ಮೊದಲ ಬಾರಿಗೆ ಗೆಲುವು ಸಾಧಿಸಿದ್ದ ಅನಂತ್ಕುಮಾರ್ ಸತತ 6 ಬಾರಿ ಲೋಕಸಭೆ ಪ್ರವೇಶ ಮಾಡಿದ್ದು. ಈ ಕ್ಷೇತ್ರದ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಚಿಕ್ಕಪೇಟೆ, ಬಸವನಗುಡಿ, ಜಯನಗರ, ಪದ್ಮನಾಭನಗರ, ಬೊಮ್ಮನಹಳ್ಳಿ, ಕ್ಷೇತ್ರಗಳಲ್ಲಿ ಬಿಜೆಪಿ, ವಿಜಯನಗರ, ಗೋವಿಂದರಾಜ ನಗರ ಮತ್ತು ಬಿಟಿಎಂ ಲೇ ಔಟ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಇದೇ ಕ್ಷೇತ್ರದ ರಾಮಲಿಂಗಾ ರೆಡ್ಡಿ ಸಾರಿಗೆ ಸಚಿವರಾಗಿದ್ದರೆ, ಆರ್. ಆಶೋಕ್ ಪ್ರತಿಪಕ್ಷದ ನಾಯಕರಾಗಿದ್ದಾರೆ.
ಇನ್ನು ಅನಂತಕುಮಾರ್ ನಿಧನದ ಬಳಿಕ 2019ರಲ್ಲಿ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಬದಲಾಗಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು. ಈ ವೇಳೆ ಅವರು ಕೇವಲ ಸಂಘ ಪರಿವಾರದ ಕಾರ್ಯಕರ್ತ ಮತ್ತು ವಕೀಲ ಮಾತ್ರ ಆಗಿದ್ದರು. ಆಗ ಅವರು ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಅವರನ್ನು 3,31,192 ಮತಗಳ ಅಂತರದಿಂದ ಸೋಲಿಸಿ ಗೆಲುವು ದಾಖಲಿಸಿದ್ದು, ಅದು ಮೊದಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಅವರದ್ದಾಗಿತ್ತು.
ಇದೀಗ 2024ರಲ್ಲಿ ಎರಡನೇ ಬಾರಿಯೂ ಬಾರಿ ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆ. ಇದು ಸೌಮ್ಯ ರೆಡ್ಡಿ ಅವರಿಗೆ ಎರಡನೇ ಸೋಲಾಗಿದೆ. ಕಳೆದ ವಿಧಾನಸಬಾ ಚುನಾವಣೆಯಲ್ಲಿ ಕೇವಲ 16 ಮತಗಳ ಅಂತರದಿಂದ ಸೋಲನುಭವಿಸಿದ್ದರು.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications