Tunnel Road: ಟನಲ್ ರಸ್ತೆ ಯಾಕೆ ಬೇಡ ಅಂತ ಡಿಸಿಎಂಗೆ ಮನವರಿಕೆ ಮಾಡ್ತೀನಿ: ತೇಜಸ್ವಿ ಸೂರ್ಯ
ಭವಿಷ್ಯದ ಬೆಂಗಳೂರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಟನಲ್ ರಸ್ತೆ ಮಾಡಲು ಹೊರಟಿದೆ. ಇದಕ್ಕೆ ಡಿಸಿಎಂ ಡಿಕೆ.ಶಿವಕುಮಾರ್ ಅವರು ವಿಶೇಷ ಕಾಳಜಿ ವಹಿಸಿದ್ದಾರೆ. ಮತ್ತೊಂದೆಡೆ ಬೆಂಗಳೂರಿಗೆ ಟನಲ್ ರಸ್ತೆ ಬೇಡ ಎಂದು ವಿರೋಧವೂ ಕೇಳಿಬರುತ್ತಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಈ ಯೋಜನೆಯನ್ನು ಮೊದಲಿನಿಂದಲೂ ವಿರೋಧ ಮಾಡುತ್ತಲೇ ಬಂದಿದ್ದಾರೆ. ಇದೀಗ ಡಿಸಿಎಂ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದು, ಟನರ್ ರಸ್ತೆ ಯಾಕೆ ಬೇಡ ಅಂತ ಡಿಸಿಎಂಗೆ ಮನವರಿಕೆ ಮಾಡ್ತೀನಿ ಎಂದಿದ್ದಾರೆ.
ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಕಾರ್ಯಯೋಜನೆಯನ್ನು ಕೇಳಿದರು. ಅವರು ಪರ್ಯಾಯ ಪರಿಹಾರಗಳನ್ನು ಕೇಳಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ತನ್ನ ಸಂಚಾರ ದಟ್ಟಣೆಯನ್ನು ಹೇಗೆ ಪರಿಹರಿಸಬೇಕು ಎಂಬುದರ ಕುರಿತು ಆಲೋಚನೆಗಳನ್ನು ಮಂಡಿಸಲು ನಾನು ಅವರ ಕಚೇರಿಯಿಂದ ಸಮಯ ಕೇಳಿದ್ದೇನೆ ಮತ್ತು ಸಹ ಕೇಳಿದ್ದೇನೆ ಎಂದಿದ್ದಾರೆ.

ಬೆಂಗಳೂರಿನ ಸಮಸ್ಯೆಗಳನ್ನು ಪರಿಹರಿಸಲು ಸುಸ್ಥಿರ ಪರಿಹಾರಗಳಿಗಾಗಿ ನಾನು ದೀರ್ಘಕಾಲದಿಂದ ಪ್ರತಿಪಾದಿಸುತ್ತಿದ್ದೇನೆ. ಈ ನಗರದ ನಿವಾಸಿಯಾಗಿ, ಒಳ್ಳೆಯ ವಿಚಾರಗಳನ್ನು ಬೆಂಬಲಿಸುವುದು ನನ್ನ ಜವಾಬ್ದಾರಿ. ಬೆಂಗಳೂರಿನ ಮುಖ್ಯ ಸಮಸ್ಯೆಯನ್ನು ಪರಿಹರಿಸದ ವಿಚಾರಗಳನ್ನು ವಿರೋಧಿಸುವುದು ನನ್ನ ಕರ್ತವ್ಯವಾಗಿದೆ. ಬೆಂಗಳೂರಿಗೆ ತನ್ನ ದೀರ್ಘಕಾಲದಿಂದ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ದ್ವಿಪಕ್ಷೀಯ ವಿಧಾನದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ಬಗ್ಗೆ ಅವರಿಗೆ ಕಾಳಜಿ ಇದೆ
ಡಿ.ಕೆ.ಶಿವಕುಮಾರ್ ಅವರು ಹಿರಿಯ ರಾಜಕಾರಣಿ ಮತ್ತು ಆಡಳಿತಾಧಿಕಾರಿ, ಅವರು ನಗರಕ್ಕಾಗಿ ತಮ್ಮ ಕೈಲಾದಷ್ಟು ಮಾಡಲು ಉದ್ದೇಶಿಸಿದ್ದಾರೆ ಎಂದು ಭಾವಿಸಿದ್ದೇನೆ. ನಮ್ಮ ಈ ಚರ್ಚೆಯು ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳಲು ಮತ್ತು ಬೆಂಗಳೂರನ್ನು ಹೆಚ್ಚು ವಾಸಯೋಗ್ಯ ನಗರವನ್ನಾಗಿ ಮಾಡಲು ಒಟ್ಟಾಗಿ ಕೆಲಸ ಮಾಡಲು ನಮಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ಇದು ನಗರದ ಪ್ರಮುಖ ಸವಾಲುಗಳನ್ನು ಪರಿಹರಿಸುತ್ತದೆ. ಈ ಸಭೆ ಹೇಗೆ ನಡೆಯುತ್ತದೆ ಎಂಬುದನ್ನು ನಾನು ನಿಮ್ಮೆಲ್ಲರಿಗೂ ತಿಳಿಸುತ್ತೇನೆ ಎಂದಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದೇನೆ. ಅರ್ಧ ಗಂಟೆ ಸಮಯ ಕೊಟ್ಟರೆ ಟನಲ್ ಯೋಜನೆ ಯಾಕೆ ಬೇಡ? ಹಾಗೂ ಅದರಿಂದ ಏನೆಲ್ಲ ಸಮಸ್ಯೆ ಆಗುತ್ತದೆ ಎಂಬುದನ್ನು ಡಿ.ಕೆ.ಶಿವಕುಮಾರ್ ಅವರಿಗೆ ಮನವರಿಕೆ ಮಾಡುತ್ತೇನೆ. ಈ ಟನಲ್ ಯೋಜನೆಯ ಬಗ್ಗೆ ಡಿಸಿಎಂಗೆ ಅಧಿಕಾರಿಗಳು ಸರಿಯಾದ ಮಾಹಿತಿ ಕೊಟ್ಟಿಲ್ಲ ಅನಿಸುತ್ತೆ. ಇದರಿಂದ ಸ್ಯಾಂಕಿ ಕೆರೆ, ಲಾಲ್ಬಾಗ್ ಪ್ರದೇಶಕ್ಕೆ ಹಾನಿಯಾಗುತ್ತೆ. ಹೀಗಾಗಿ ಈ ಯೋಜನೆಯನ್ನು ಮಾಡೇ ತೀರುತ್ತೇನೆ ಅನ್ನೋದು ಜಿದ್ದಿಗೆ ಬೀಳುವುದು ತಪ್ಪು. ಟನಲ್ ಯೋಜನೆ ಬೇಡ ಎಂದು ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದಾರೆ. ಇದರ ವಿಚಾರಣೆ ಮಂಗಳವಾರ ನಡೆಯಲಿದ್ದು, ನಾನೇ ವಾದ ಮಂಡಿಸುತ್ತೇನೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications