ಟಿಕೆಟ್ ಕೈತಪ್ಪಿದ್ದಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಏನಂದ್ರು?
Recommended Video
ಬೆಂಗಳೂರು, ಮಾರ್ಚ್ 26: "ಅನಂತ್ ಕುಮಾರ್ ಅವರು ಇದ್ದಾಗಲೂ ಬಿಜೆಪಿ ಪರ ಪ್ರಚಾರ ಮಾಡಿದ್ದೆ, ಈಗಲೂ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ" ಎಂದು ಮಾಜಿ ಕೇಂದ್ರ ಸಚಿವ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಅವರನ್ನು ಕಣಕ್ಕಿಳಿಸುತ್ತದೆ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಸೋಮವಾರ ತಡರಾತ್ರಿಯವರೆಗೂ ಸಭೆ ನಡೆಸಿದ ಬಿಜೆಪಿ ಕೇಂದ್ರ ಚುನಾವಣೆ ಸಮಿತಿ, ತೇಜಸ್ವಿ ಸೂರ್ಯ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿತು.
ತೇಜಸ್ವಿನಿಗೆ ತಪ್ಪಿದ ಟಿಕೆಟ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ
ಮಂಗಳವಾರ ಬೆಳಿಗ್ಗೆ ತೇಜಸ್ವಿನಿ ಅವರ ಮನೆಗೆ ತೆರಳಿ ಹಾಲಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದ ತೇಜಸ್ವಿನಿ ಅವರು, "ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಅನಂತ್ ಕುಮಾರ್ ಬದುಕಿದ್ದಾಗಲೂ ನಾನು ಪ್ರತಿಯೊಂದು ಚುನಾವಣೆಯಲ್ಲೂ ಅವರೊಂದಿಗೆ ಬಿಜೆಪಿ ಪರ ಪ್ರಚಾರ ಮಾಡಿದ್ದೆ. ಈಗಲೂ ಅದನ್ನೇ ಮಾಡುತ್ತೇನೆ. ತೇಜಸ್ವಿ ಸೂರ್ಯ ಅವರ ಪರ ಪ್ರಚಾರ ಮಾಡೋಣ, ಅದರಲ್ಲೇನು?" ಎಂದರು.
OMG! ಟಿಕೆಟ್ ಸಿಕ್ಕಿದ್ದಕ್ಕೆ ತೇಜಸ್ವಿ ಸೂರ್ಯ ಭಾವುಕ ಟ್ವೀಟ್
ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಏಪ್ರಿಲ್ 18 ರಂದು ಮತದಾನವಾಗಲಿದ್ದು, ಮೇ.23 ರಂದು ಫಲಿತಾಂಶ ಹೊರಬೀಳಲಿದೆ.