ಇದಕ್ಕಿಂತ ಶ್ರದ್ಧಾಂಜಲಿ ಬೇರೇನಿದೆ? ಹೆಮ್ಮೆ ಮೂಡಿಸಿದ ತೇಜಸ್ವಿನಿ ನಡೆ
Recommended Video

ಬೆಂಗಳೂರು, ನವೆಂಬರ್ 19: ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಇನ್ನಿಲ್ಲವಾಗಿ ವಾರವೂ ಕಳೆದಿಲ್ಲ. ಆರದೆ ಆಗಲೇ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಪ್ರತಿ ಭಾನುವಾರ ನಡೆಸುವ ಹಸಿರು ಭಾನುವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಮೂಲಕ ಪತಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ನ.18 ರಂದು ಭಾನುವಾರ 151 ನೇ ಹಸಿರು ಭಾನುವಾರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗಿಡವನ್ನು ನೆಟ್ಟು, ಅದಕ್ಕೆ ನೀರೆರೆದು ಪತಿಯ ಸಾವಿನ ದುಃಖದಲ್ಲೂ ಕರ್ತವ್ಯ ಪ್ರಜ್ಞೆ ಮೆರೆದರು ತೇಜಸ್ವಿನಿ ಅನಂತ್ ಕುಮಾರ್.
ಕಳೆದ ಸೋಮವಾರ, ನ.12 ರಂದು ವಿಧಿವಶರಾದ ಅನಂತ್ ಕುಮಾರ್ ಅವರ ಅಗಲಿಕೆಯ ನೋವು ಮನಸ್ಸಿನಲ್ಲಿದ್ದರೂ, ಅದ್ಯಾವುದನ್ನೂ ತೋರಿಸಿಕೊಳ್ಳದೆ, ಕರ್ತವ್ಯ ಪ್ರಜ್ಞೆ ಮೆರೆಯುವುದೇ ಪತಿಗೆ ನೀಡುವ ಬಹುದೊಡ್ಡ ಶೃದ್ಧಾಂಜಲಿ ಎಂದು ತೇಜಸ್ವಿನಿ ಅನಂತ್ ಕುಮಾರ್ ಭಾವಿಸಿದ್ದಂತಿತ್ತು.
| Array |
ಬೆಂಗಳೂರಿನ ಬಗ್ಗೆ ಕುಟುಂಬದ ಅನನ್ಯ ಕಾಳಜಿ
ಪತಿ ಅನಂತ್ ಕುಮಾರ್ ಅವರು ನಿಧನರಾಗಿ ಆರು ದಿನಗಳಾಗಿವೆ ಅಷ್ಟೇ. ಆದರೆ ಅವರ ಪತ್ನಿ ತೇಜಸ್ವಿನಿ ಅವರು 151 ನೇ ಹಸಿರು ಭಾನುವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬೆಂಗಳೂರಿನ ಅಭಿವೃದ್ಧಿಗೆ ಈ ಕುಟುಂಬ ಇರಿಸಿಕೊಂಡ ಕಾಳಜಿಗೆ ಇದು ಸಾಕ್ಷಿ ಎಂದಿದ್ದಾರೆ ಕಿರಣ್ ಕುಮಾರ್ ಎಸ್.
| Array |
ಹ್ಯಾಟ್ಸ್ ಆಫ್
ತೇಜಸ್ವಿನಿ ಅವರ ಕರ್ತವ್ಯ ಪ್ರಜ್ಞೆಗೆ ಹ್ಯಾಟ್ಸ್ ಆಫ್. ಪತಿ ನಿಧನರಾಗಿ ಒಂದು ವಾರವಾಗಿಲ್ಲ, ಆಗಲೇ ಹಸಿರು ಭಾನುವಾರಕ್ಕೆ ಕೈಜೋಡಿಸಿದ್ದಾರೆ ಅವರು ಎಂದಿದ್ದಾರೆ ಲಾವೀನ್ ಎಸ್ ಕೆ.
|
ಇದೇ ನಿಜವಾದ ಶ್ರದ್ಧಾಂಜಲಿ
ಅನಂತವನದಲ್ಲಿ ಸಸಿ ನೆಡುವ ಮೂಲಕ ಪತಿಗೆ ಶ್ರದ್ಧಾಂಜಲಿ ಅರ್ಪಿಸಿದರು ತೇಜಸ್ವಿನಿ ಅನಂತ್ ಕುಮಾರ್. ಇದೇ ನಿಜವಾದ ಶ್ರದ್ಧಾಂಜಲಿ ಎಂದಿದ್ದಾರೆ ಶ್ರೀಕಾಂತ್ ಪ್ರಸಾದ್

ನ.12 ರಂದು ಇಹಲೋಕ ತ್ಯಜಿಸಿದ ಅನಂತ್ ಕುಮಾರ್
ಬಿಜೆಪಿ ಮುಖಂಡ ಕೇಂದ್ರ ಸಚಿವ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್ ಅವರು ಶ್ವಾಸ ಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನ.12 ರಂದು ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಅವರು ವಿಧಿವಶರಾದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಕೇಂದ್ರದ ಹಲವು ಸಚಿವರು ಅವರ ಅಂತಿಮ ದರ್ಶನ ಪಡೆದರು. ಹಸನ್ಮುಖಿ, ಮಾನವೀಯ ಅಂತಃಕರಣದ ಅನಂತ್ ಕುಮಾರ್ ಅವರ ಅಗಲಿಕೆಗೆ ಇಡೀ ರಾಷ್ಟ್ರದ ನಾಯಕರೂ ಪಕ್ಷ ಭೇದ ಮರೆತು ಮರುಗಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications