ಇದಕ್ಕಿಂತ ಶ್ರದ್ಧಾಂಜಲಿ ಬೇರೇನಿದೆ? ಹೆಮ್ಮೆ ಮೂಡಿಸಿದ ತೇಜಸ್ವಿನಿ ನಡೆ
Recommended Video

ಬೆಂಗಳೂರು, ನವೆಂಬರ್ 19: ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಇನ್ನಿಲ್ಲವಾಗಿ ವಾರವೂ ಕಳೆದಿಲ್ಲ. ಆರದೆ ಆಗಲೇ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಪ್ರತಿ ಭಾನುವಾರ ನಡೆಸುವ ಹಸಿರು ಭಾನುವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಮೂಲಕ ಪತಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ನ.18 ರಂದು ಭಾನುವಾರ 151 ನೇ ಹಸಿರು ಭಾನುವಾರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗಿಡವನ್ನು ನೆಟ್ಟು, ಅದಕ್ಕೆ ನೀರೆರೆದು ಪತಿಯ ಸಾವಿನ ದುಃಖದಲ್ಲೂ ಕರ್ತವ್ಯ ಪ್ರಜ್ಞೆ ಮೆರೆದರು ತೇಜಸ್ವಿನಿ ಅನಂತ್ ಕುಮಾರ್.
ಕಳೆದ ಸೋಮವಾರ, ನ.12 ರಂದು ವಿಧಿವಶರಾದ ಅನಂತ್ ಕುಮಾರ್ ಅವರ ಅಗಲಿಕೆಯ ನೋವು ಮನಸ್ಸಿನಲ್ಲಿದ್ದರೂ, ಅದ್ಯಾವುದನ್ನೂ ತೋರಿಸಿಕೊಳ್ಳದೆ, ಕರ್ತವ್ಯ ಪ್ರಜ್ಞೆ ಮೆರೆಯುವುದೇ ಪತಿಗೆ ನೀಡುವ ಬಹುದೊಡ್ಡ ಶೃದ್ಧಾಂಜಲಿ ಎಂದು ತೇಜಸ್ವಿನಿ ಅನಂತ್ ಕುಮಾರ್ ಭಾವಿಸಿದ್ದಂತಿತ್ತು.
| Array |
ಬೆಂಗಳೂರಿನ ಬಗ್ಗೆ ಕುಟುಂಬದ ಅನನ್ಯ ಕಾಳಜಿ
ಪತಿ ಅನಂತ್ ಕುಮಾರ್ ಅವರು ನಿಧನರಾಗಿ ಆರು ದಿನಗಳಾಗಿವೆ ಅಷ್ಟೇ. ಆದರೆ ಅವರ ಪತ್ನಿ ತೇಜಸ್ವಿನಿ ಅವರು 151 ನೇ ಹಸಿರು ಭಾನುವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬೆಂಗಳೂರಿನ ಅಭಿವೃದ್ಧಿಗೆ ಈ ಕುಟುಂಬ ಇರಿಸಿಕೊಂಡ ಕಾಳಜಿಗೆ ಇದು ಸಾಕ್ಷಿ ಎಂದಿದ್ದಾರೆ ಕಿರಣ್ ಕುಮಾರ್ ಎಸ್.
| Array |
ಹ್ಯಾಟ್ಸ್ ಆಫ್
ತೇಜಸ್ವಿನಿ ಅವರ ಕರ್ತವ್ಯ ಪ್ರಜ್ಞೆಗೆ ಹ್ಯಾಟ್ಸ್ ಆಫ್. ಪತಿ ನಿಧನರಾಗಿ ಒಂದು ವಾರವಾಗಿಲ್ಲ, ಆಗಲೇ ಹಸಿರು ಭಾನುವಾರಕ್ಕೆ ಕೈಜೋಡಿಸಿದ್ದಾರೆ ಅವರು ಎಂದಿದ್ದಾರೆ ಲಾವೀನ್ ಎಸ್ ಕೆ.
|
ಇದೇ ನಿಜವಾದ ಶ್ರದ್ಧಾಂಜಲಿ
ಅನಂತವನದಲ್ಲಿ ಸಸಿ ನೆಡುವ ಮೂಲಕ ಪತಿಗೆ ಶ್ರದ್ಧಾಂಜಲಿ ಅರ್ಪಿಸಿದರು ತೇಜಸ್ವಿನಿ ಅನಂತ್ ಕುಮಾರ್. ಇದೇ ನಿಜವಾದ ಶ್ರದ್ಧಾಂಜಲಿ ಎಂದಿದ್ದಾರೆ ಶ್ರೀಕಾಂತ್ ಪ್ರಸಾದ್

ನ.12 ರಂದು ಇಹಲೋಕ ತ್ಯಜಿಸಿದ ಅನಂತ್ ಕುಮಾರ್
ಬಿಜೆಪಿ ಮುಖಂಡ ಕೇಂದ್ರ ಸಚಿವ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್ ಅವರು ಶ್ವಾಸ ಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನ.12 ರಂದು ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಅವರು ವಿಧಿವಶರಾದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಕೇಂದ್ರದ ಹಲವು ಸಚಿವರು ಅವರ ಅಂತಿಮ ದರ್ಶನ ಪಡೆದರು. ಹಸನ್ಮುಖಿ, ಮಾನವೀಯ ಅಂತಃಕರಣದ ಅನಂತ್ ಕುಮಾರ್ ಅವರ ಅಗಲಿಕೆಗೆ ಇಡೀ ರಾಷ್ಟ್ರದ ನಾಯಕರೂ ಪಕ್ಷ ಭೇದ ಮರೆತು ಮರುಗಿದ್ದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications