ಮೋದಿ ಅಲೆ ತಡೆಯಲು ಕೆಸಿಆರ್ಗೆ ದೇವೇಗೌಡ ಬೆಂಬಲ
ಬೆಂಗಳೂರು, ಏಪ್ರಿಲ್ 13: ಉಕ್ಕುತ್ತಿರುವ ಮೋದಿ ಅಲೆಗೆ ಬ್ರೇಕ್ ಹಾಕಲು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಪ್ರಯತ್ನಿಸುತ್ತಿದ್ದು, ತೃತೀಯ ರಂಗಕ್ಕೆ ಮರುಜೀವ ತುಂಬಲು ಯತ್ನಿಸುತ್ತಿದ್ದಾರೆ. ಅದೇ ಕಾರ್ಯದ ಭಾಗವಾಗಿ ಇಂದು ಅವರು ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿದರು.
ಇಂದು ದೇವೇಗೌಡ ಅವರ ನಿವಾಸದಲ್ಲಿ ನಟ ಪ್ರಕಾಶ್ ರೈ, ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಮಾತುಕತೆ ನಡೆಸಿದ ಅವರು ಮೋದಿ ವಿರುದ್ಧ 'ಪೀಪಲ್ ಫ್ರಂಟ್' ಒಕ್ಕೂಟದ ಯೋಜನೆಯನ್ನು ದೇವೇಗೌಡ ಅವರಿಗೆ ವಿವರಿಸಿ ಅವರ ಸಹಕಾರ ಪಡೆದರು.
ಮೋದಿ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ನಿರತರಾಗಿರುವ ಕೆಸಿಆರ್ ಅವರು ಈ ಮುಂಚೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ರಾಷ್ಟ್ರೀಯ ಪಕ್ಷಗಳಿಗೆ ಇಚ್ಛಾಶಕ್ತಿ ಇಲ್ಲ
ಮಾತುಕತೆ ನಂತರ ಮಾತನಾಡಿದ ಕೆಸಿಆರ್ ಅವರು ದೇಶವನ್ನು 60 ವರ್ಷದ ಆಳಿದ ರಾಷ್ಟ್ರೀಯ ಪಕ್ಷಗಳು ಸಾಧಿಸಿ ತೋರಿಸುವಲ್ಲಿ ವಿಫಲವಾಗಿವೆ ಹಾಗಾಗಿ ಜನಗಳೇ ಮುನ್ನಡೆಸುವ ಆಡಳಿತವೊಂದರ ಅವಶ್ಯಕತೆ ಇದೆ ಎಂದರು. ಇದಕ್ಕೆ ಧನಿಗೂಡಿಸಿದ ದೇವೇಗೌಡರು ಕೆಸಿಆರ್ ಅವರ ಪ್ರಯತ್ನಕ್ಕೆ ನಮ್ಮ ಸಹಕಾರ ಇದೆ ಎಂದರು.

ದಕ್ಷಿಣ ರಾಜ್ಯಗಳ ಬೆಂಬಲ
ಈಗಾಗಲೇ ಕೇಂದ್ರ ಸರ್ಕಾರದ ಉತ್ತರ ಭಾರತ ಪ್ರೀತಿಯ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳು ಧನಿ ಎತ್ತಿದ್ದು, ಈ ಸಮಯದಲ್ಲಿ ಕೆಸಿಆರ್ ಅವರ ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಕರ್ನಾಟಕ, ಪ.ಬಂಗಾಳದಲ್ಲಿ ಸಕಾರಾತ್ಮಕ ಪ್ರತಿಕ್ರಿಯೆ ಪಡೆದಿರುವ ಕೆಸಿಆರ್, ಎನ್ಡಿಎ ಇಂದ ಹೊರಬಂದಿರುವ ಟಿಡಿಪಿ, ಕೇರಳದ ಸಿಪಿಎಂ ಪಕ್ಷಗಳೂ ತಮಗೆ ಬೆಂಬಲ ನೀಡುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಎಪಿ, ಆರ್ಜೆಡಿ ಕೂಡಾ ಬೆಂಬಲ
ಉತ್ತರ ಭಾರತದ ಹಲವು ಪಕ್ಷಗಳನ್ನು ಪೀಪಲ್ ಪ್ರಂಟ್ಗೆ ಜೊತೆ ಮಾಡಿಕೊಳ್ಳುವ ಉದ್ದೇಶ ಹೊಂದಿರುವ ಕೆಸಿಆರ್ ಎಎಪಿ ಮತ್ತು ಲಾಲೂ ಪ್ರಸಾದ್ ಯಾದವ್ರ ಆರ್ಜೆಡಿ, ಶರದ್ ಪವಾರ್ರ ಎನ್ಸಿಪಿ ಇನ್ನೂ ಹಲವು ಪಕ್ಷಗಳ ಜೊತೆ ಮಾತುಕತೆ ನಡೆಸಲಿದ್ದಾರೆ. ಶಿವಸೇನೆ ಜೊತೆ ಮಾತುಕತೆ ನಡೆಸಿದರೂ ಅಚ್ಚರಿ ಇಲ್ಲ.

ಯಶಸ್ವಿ ಆಗುವುದೇ ಕೆಸಿಆರ್ ಪ್ರಯತ್ನ?
ತೃತೀಯ ರಂಗ ಈ ಹಿಂದೆಯೂ ಅಸ್ಥಿತ್ವದಲ್ಲಿತ್ತು, ಆದರೆ ಸೂಕ್ತ ನಾಯಕತ್ವದ ಕೊರತೆಯಿಂದ ಅದು ತೆರೆಮರೆಗೆ ಸರಿಯಿತು. ಆಗೊಮ್ಮೆ ಈಗೊಮ್ಮೆ ತೃತೀಯ ರಂಗದ ಮಾತು ಬಂದರಾದರೂ ಚುನಾವಣೆಯಲ್ಲಿ ಚಾಪು ಮೂಡಿಸಲು ಅದು ವಿಫಲವೇ ಆಗಿದೆ. ಆದರೆ ಅಪ್ರತಿಮ ಹೋರಾಟಗಾರ ಕೆಸಿಆರ್ ಪಟ್ಟು ಬಿಡದ ಛಲದಂಕಮಲ್ಲ, ಅವರ ನಾಯಕತ್ವದ ಬಗ್ಗೆಯೂ ಉತ್ತಮ ಅಭಿಪ್ರಾಯಗಳಿವೆ, ಮೋದಿಯನ್ನೊ ಅಥವಾ ಕಾಂಗ್ರೆಸ್ ಅನ್ನೋ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದಿಂದ ದೂರ ಇಡುತ್ತಾರೆ ಎಂದು ಖಡಾಕಂಡಿತವಾಗಿ ಹೇಳಲು ಆಗದೇ ಇದ್ದರೂ, ಚುನಾವಣೆಯಲ್ಲಿ ತನ್ನ ಚಾಪು ಮೂಡಿಸುವುದಂತೂ ಖಾತ್ರಿ.

ದೇವೇಗೌಡ ಹೇಳಿದ್ದೇನು?
ಇಂದು ಕೆಸಿಆರ್ ಅವರನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಠಿಯಲ್ಲಿರಿಸಿಕೊಂಡು ಬಹಳ ನಾಜೂಕಾಗಿ ಮಾತನಾಡಿದರು. ಕೆಸಿಆರ್ ಅವರ ಪ್ಯತ್ನಕ್ಕೆ ಸಹಕಾರ ನೀಡುವುದಾಗಿ ಹೇಳಿದ ಅವರು ಆದರೆ ಯಾರನ್ನೊ ಅಧಿಕಾರದಿಂದ ದೂರ ಇಡಲು ಅಥವಾ ಯಾರನ್ನೋ ಅಧಿಕಾರಕ್ಕೆ ಕೂಡಿಸಲು ಈ ಚಳುವಳಿ ಅಲ್ಲ ಇದು ಜನಗಳಿಗಾಗಿ ರೂಪಿಸಲಾಗುತ್ತಿರುವ ಚಳುವಳಿ ಎಂದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications