ಮೊಬೈಲ್ ಟವರ್ ಸಂಖ್ಯೆ ಘೋಷಣೆಗೆ ಬಿಬಿಎಂಪಿ ಜ.20ರ ಗಡುವು
ಬೆಂಗಳೂರು, ಜನವರಿ 16: ಮೊಬೈಲ್ ಟವರ್ ಮತ್ತು ಕೇಬಲ್ ಜಾಲಗಳ ಕುರಿತು ಸ್ವಯಂ ಘೋಷಣೆಯ ಪ್ರಮಾಣಪತ್ರ ಸಲ್ಲಿಸುವಂತೆ ಟೆಲಿಕಾಂ ಸೇವೆಗಳ ಕಂಪನಿಗಳಿಗೆ ಬಿಬಿಎಂಪಿ ಜನವರಿ 20ರ ಗಡುವು ನೀಡಿದೆ.
ನಗರ ಅಕ್ರಮ ಮೊಬೈಲ್ ಟವರ್ ಗಳು ವಿಪರೀತವಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಟೆಲಿಕಾಂ ಸರ್ವೀಸ್ ಕಂಪನಿಗಳ ಜತೆ ಹಲವು ಸುತ್ತಿನ ಮಾತುಕತೆ ನಡೆಸಿರುವ ಬಿಬಿಎಂಪಿ ಜನವರಿ 20ರ ವರೆಗೆ ಡೆಡ್ ಲೈನ್ ನೀಡಿದೆ.
ಮೊದಲ ಬಾರಿಗೆ ಆಫ್ಟಿಕಲ್ ಫೈಬರ್ ಕೇಬಲ್ ಜಾಲ ಹಾಗೂ ಮೊಬೈಲ್ ಟವರ್ ಗಳ ಕುರಿತಂತೆ ಟೆಲಿಕಾಂ ಸರ್ವೀಸ್ ಕಂಪನಿಗಳಿಂದ ಗ್ಲೋಬಲ್ ಇಂಡಿಕೇಷನ್ ಸಿಸ್ಟಂ ಮೂಲಕ ಜಿ ಐ ಎಸ್ ಮೂಲಕ ಆಯಾ ಕಂಪನಿಗಳ ನಕಾಶೆ ಗಳನ್ನು ಸಿದ್ಧಪಡಿಸಿ ಬಿಬಿಎಂಪಿಗೆ ಅಫಿಡೆವಿಟ್ ಮೂಲಕ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಸದ್ಯ ಬೆಂಗಳೂರು ನಗರದಲ್ಲಿ 5 ಟೆಲಿಕಾಂ ಸರ್ವೀಸ್ ಕಂಪನಿಗಳು 6, 776 ಮೊಬೈಲ್ ಟವರ್ ಗಳನ್ನು ಘೋಷಿಸಿಕೊಂಡಿದೆ. ಮತ್ತೊಂದೆಡೆ 7 ಟೆಲಿಕಾಂ ಸರ್ವೀಸ್ ಕಂಪನಿಗಳು 8, 756 ಕಿ.ಮೀ ಆಪ್ಟಿಕಲ್ ಫೈಬರ್ ಕೇಬಲ್ ಜಾಲ ಹೊಂದಿದೆ ಎಂದು ಘೋಷಿಸಿವೆ.
ಆದರೆ, ಬಿಬಿಎಂಪಿ ಸಮೀಕ್ಷೆ ಪ್ರಕಾರ ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಮೊಬೈಲ್ ಟವರ್ ಗಳು ಹಾಗೂ 25 ಸಾವಿರ ಕಿ,ಮೀ ಗೂ ಹೆಚ್ಚಿನ ಆಪ್ಟಿಕಲ್ ಫೈಬರ್ ಕೇಬಲ್ ಜಾಲ ಹೊಂದಿದೆ ಎಂದು ಆಂದಾಜಿಸಿದೆ.
ಹೀಗಾಗಿ ಈಗಾಗಲೇ ಟೆಲಿಕಾಂ ಸರ್ವೀಸ್ ಕಂಪನಿಗಳು ಘೋಷಿಸಿರುವ ಮೊಬೈಲ್ ಟವರ್ ಹಾಗೂ ಓಎಫ್ ಸಿ ಜಾಲದ ಪ್ರಮಾಣ ಶೇ.50 ಕ್ಕಿಂತ ಕಡಿಮೆಯಾಗಿದೆ.
ಈ ಹಿನ್ನೆಲೆಯಲ್ಲಿಉಳಿದ ಶೇ.50 ರಷ್ಟು ಮೊಬೈಲ್ ಟವರ್ ಹಾಗೂ ಜಾಲಗಳನ್ನು ಈ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಜನವರಿ 20ರ ಗಡುವು ನೀಡಿದೆ. ಇದಕ್ಕೆ ಟೆಲಿಕಾಂ ಸರ್ವೀಸ್ ಕಂಪನಿಗಳು ಹೇಗೆ ಸ್ಪಂದಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು












Click it and Unblock the Notifications