ಚಳಿ ಕಳಚಿ ಮೈಸುಡುವ ಬೇಸಿಗೆಯತ್ತ ಬೆಂಗಳೂರು!
ಬೆಂಗಳೂರು, ಮಾರ್ಚ್ 2 : ಚಳಿಗಾಲ ಇನ್ನೂ ಮುಗಿದಿಲ್ಲ ಎಂದುಕೊಂಡಿದ್ದೀರಾ, ಹೊರಗೆ ಕಾಲಿಟ್ಟರೆ ಬೈಸುಡುವ ಅನುಭವ ರಾಜಧಾನಿಯಲ್ಲಿ ಈಗಾಗಲೇ ಆರಂಭವಾಗಿದೆ. ಈಗಾಗಲೇ ತಾಪಮಾನ 33.2 ಡಿಗ್ರಿಗೆ ತಲುಪಿದ್ದು ಕಳೆದ ನಾಲ್ಕು ದಿನಗಳಲ್ಲಿ2 ಡಿಗ್ರಿ ಉಷ್ಣಾಂಶ ಏರಿಕೆಯಾಗಿದೆ.
ಬೇಸಿಗೆ ಆರಂಭದಲ್ಲಿ ಕಾಂಕ್ರೀಟ್ ನಗರಿ ಸುಸ್ತಾಗಿ ಹೋಗಿದೆ. ಫೆಬ್ರವರಿ 2 ನೇ ವಾರದಿಂದ ನಗರದಲ್ಲಿ ಸೆಕೆ ಏರಿಕೆಯಾಗತೊಡಗಿದೆ. ಫೆ.1 ರಂದು 29.6 ಡಿಗ್ರಿ ಇದ್ದ ಗರಿಷ್ಠ ತಾಪಮಾನ ಫೆ.15 ಕ್ಕೆ 30.7 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.

ಫೆ.25 ಕ್ಕೆ 31.2 ಡಿಗ್ರಿ, ಫೆ.27 ಕ್ಕೆ 32 ಡಿಗ್ರಿ, ಫೆ.28 ಕ್ಕೆ 33 ಮತ್ತು ಮಾರ್ಚ್1 ಕ್ಕೆ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಇದು ವಾಡಿಕೆಯಂತೆ 1.3 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಬರುವ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಅದು ಮುನ್ಸೂಚನೆ ನೀಡಿದೆ. ಬಿಸಿಲನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಆದರೆ ಬಿಸಿಲಿಂದ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳುವುದು ಸಾಧ್ಯವಿದೆ.
ಹೊರಗಡೆ ಸುತ್ತಾಡುವ ಸಮಯದಲ್ಲಿ ತಲೆಗೆ ಬಟ್ಟೆ ಕಟ್ಟಿಕೊಳ್ಳಿ, ನೀರಿನ ಅಂಶವಿರುವ ಹಣ್ಣುಗಳನ್ನು ಸೇವಿಸಿ, ದೇಹದಲ್ಲಿನ ನೀರಿನ ಅಂಶ ಹೆಚ್ಚಿಸಲು ಆಗಾಗ ನೀರು ಕುಡಿಯುತ್ತಿರಿ, ಬಾಯಾರಿಕೆ ನೀಗಿಸಲು ತಂಪು ಪಾನೀಯ ಸೇವನೆ ಬೇಡ ಇನ್ನು ಕೆಲವು ನಿಮಗೆ ತಿಳಿಸಿದಿರುವ ಕ್ರಮವನ್ನು ಅನುಸರಿಸಿದರೆ ಸ್ವಲ್ಪ ಬಿಸಿಲಿನಿಂದ ರಕ್ಷಣೆ ಪಡೆಯಬಹುದು.
-
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications