Darshan Thoogudeepa: ನಟ ದರ್ಶನ್ ಪರಪ್ಪನ ಅಗ್ರಹಾರದಿಂದ ಹೊರಬರ್ತಾನಾ.? ಭಯಾನಕ ಭವಿಷ್ಯ ನುಡಿದ ದೈವ.!
Actor Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲು ಪಾಲಾಪಾಗಿದೆ. ಇನ್ನು ದರ್ಶನ್ನನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಲವರು ಭವಿಷ್ಯಗಳನ್ನು ಕೂಡ ಈಗಾಗಲೇ ಈ ಬಗ್ಗೆ ನುಡಿದಿದ್ದಾರೆ. ಹಾಗೆಯೇ ಇದೀಗ ದೈವ ಕೂ ಭವಿಷ್ಯ ನುಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ನನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಹರಹಸಾಹಸ ಪಡುತ್ತಿದ್ದಾರೆ. ಅಷ್ಟೇ ಅಲ್ಲದೆ, ವಿಜಯಲಕ್ಷ್ಮಿ ಪತಿಗಾಗಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳು ಕೂಡ ಹಲವೆಡೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಸಹ ಮಾಡಿಸುತ್ತಿದ್ದಾರೆ.

ದೈವದ ಮೊರೆ ಹೋದ ಅರ್ಚಕರು: ಇದುವರೆಗೂ ಪರಪ್ಪನ ಅಗ್ರಹಾರ ಜೈಲು ಸೇರಿ 50 ದಿನ ಆದರೂ ಕೂಡ, ಎಷ್ಟೇ ಪ್ರಯತ್ನ ಪಟ್ಟರೂ ದರ್ಶನ್ ಬಿಡುಗಡೆ ಬಗ್ಗೆ ಯಾವುದೇ ಧನಾತ್ಮಕ ಮಾಹಿತಿಗಳನ್ನು ಲಭ್ಯವಾಗುತ್ತಿಲ್ಲ. ಆದರೆ ನಟ ದರ್ಶನ್ ಯಾವಾಗ ಬಿಡುಗಡೆ ಆಗುತ್ತಾರೆ ಎಂದು ದೇವಸ್ಥಾನದ ಅರ್ಚಕರೇ ದೈವದ ಮೊರೆ ಹೋಗಿರುವ ಘಟನೆ ನಡೆದಿದೆ. ಹಾಗಾದರೆ ದೈವ ನುಡಿದ ಭವಿಷ್ಯ ಏನು ಎಂದು ಇಲ್ಲಿ ತಿಳಿಯಿರಿ.
ಬೆಂಗಳೂರಿನ ಬಾಪೂಜಿನಗರದ ಶಾರದಾಂಬೆ ದೇವಸ್ಥಾನದ ಅರ್ಚಕರ ಮಗಳ ಮೂಲಕ ಕುಟ್ಟೊ ಕಲ್ಲು ಮೂಲವಾಗಿ ದರ್ಶನ್ ಬಗ್ಗೆ ಓಂ ಶಕ್ತಿ ಶಾರದಾಂಬೆ ದೇವಿ ಭವಿಷ್ಯ ನುಡಿದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸದ್ಯ ಓಂ ಶಕ್ತಿ ಶಾರದಾಂಬೆ ಬಿಸುವ ಕಲ್ಲು ಮೂಲಕ ಭವಿಷ್ಯ ನುಡಿದ ದೈವ, ದರ್ಶನ್ ಸದ್ಯ ಮೀನ ರಾಶಿಯಲ್ಲಿದ್ದಾರೆ. ಯಾವುದಕ್ಕೂ ಗ್ರಹಚಾರ ಸರಿಯಾಗಿಲ್ಲ. ಗುರುಬಲ ಇಲ್ಲದೇ ಇರುವುದರಿಂದ ಕೆಟ್ಟ ದೆಸೆ ನಡೆಯುತ್ತಿದೆ, ಶನಿ ಬಂದು ಕೂತಿದ್ದಾನೆ ಎಂದು ಭವಿಷ್ಯ ನುಡಿದಿದೆ ಎಂದು ತಿಳಿದುಬಂದಿದೆ.
ಇನ್ನು ಬೆಂಗಳೂರಿನಲ್ಲಿರುವ ರಾಜರಾಜೇಶ್ವರಿನಗರದ ದರ್ಶನ್ ನಿವಾಸಕ್ಕೆ ವಾಸ್ತುದೋಷ ಇದೆ. ಮನೆಯ ಮೂಲೆಯೇ ಸರಿಯಿಲ್ಲ. ಈ ಎಲ್ಲಾ ಕಾರಣದಿಂದ ಅವರ ಬಿಡುಗಡೆಗೆ ಅಡ್ಡಿ ಆಗಿದೆ. ಇನ್ನೂ 2 ತಿಂಗಳು ಬಿಡುಗಡೆಯ ಭಾಗ್ಯವಿಲ್ಲ. ಬಳಿಕ ಜೈಲಿನಿಂದ ಹೊರಬರಲಿದ್ದಾರೆ ಎಂದು ದೈವ ಭವಿಷ್ಯ ನುಡಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications