ರಾಜಧಾನಿಯಲ್ಲಿದ್ದಾರಾ ಉಗ್ರ ಬೆಂಬಲಿಗರು?
ಬೆಂಗಳೂರು, ಡಿಸೆಂಬರ್ 18: ಕರ್ನಾಟಕ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ (ಜೆಎಂಬಿ) ಶಂಕಿತ ಉಗ್ರ ಸಂಘಟನೆಯ ಬೆಂಬಲಿಗರು ಅಡಗಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಆತಂಕ ವ್ಯಕ್ತಪಡಿಸಿದೆ. ಅವರನ್ನು ಬಂಧಿಸಲು ಸ್ಥಳೀಯ ಪೊಲೀಸರ ಜೊತೆ ಬಲೆ ಬೀಸಿದೆ.
ಬೆಂಗಳೂರಿನ ಜನ ಯಾವಾಗ ಏನಾಗುತ್ತದೋ ಎಂಬ ಸ್ಥಿತಿಯಲ್ಲಿ ದಿನನಿತ್ಯ ಜೀವನ ಸಾಗಿಸುತ್ತಿದ್ದಾರೆ. ಆಗಾಗ ನಗರದಲ್ಲಿ ಬಾಂಬ್ ಬೆದರಿಕೆ, ಉಗ್ರರ ಬಂಧನದಂತಹ ಸುದ್ದಿಗಳು ಕಿವಿಗೆ ಬೀಳುತ್ತುರುತ್ತವೆ. ಈಗ ಮತ್ತೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಉಗ್ರರ ಕರಿನೆರಳು ಬಿದ್ದಿದೆ.
ಅಗಸ್ಟ್ 2018 ರಂದು ರಾಮನಗರದಲ್ಲಿ ಜೆಎಂಬಿ ಉಗ್ರ ಸಂಘಟನೆಯ ಶಂಕಿತ ಉಗ್ರ ಮುನೀರ್ ಶೇಖ್ ಅಲಿಯಾಸ್ ಬೋಮ್ ಮಿಯಾನ್ ನನ್ನು ಎನ್ಐಎ ಬಂಧಿಸಿತ್ತು. ಅವನನ್ನು ವಿಚಾರಣೆ ಮಾಡಿದಾಗ ಹಲವು ಮಾಹಿತಿಗಳನ್ನು ಬಾಯಿ ಬಿಟ್ಟಿದ್ದ.

ಅವನು ಕೊಟ್ಟ ಮಾಹಿತಿಯನ್ನಾಧರಿಸಿ ಒಂದೂವರೆ ವರ್ಷದಿಂದ ಹಲವರಿಗೆ ಎನ್ಐಎ ಅಧಿಕಾರಿಗಳು ಬಲೆ ಬೀಸಿದ್ದರು. ಡಿಸೆಂಬರ್ 16 ರಂದು ಪಶ್ಚಿಮ ಬಂಗಾಳದಲ್ಲಿ ಶಂಕಿತ ಉಗ್ರ ಮೊಸ್ರಾಫ್ ಹುಸೇನ್ ಎಂಬಾತನನ್ನು ಬಂಧಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮುನೀರ್, ಅಲ್ಲಿ ಜೈಲಿನಿಂದ ತಪ್ಪಿಸಿಕೊಂಡು 2011 ರಲ್ಲಿ ಪಶ್ಚಿಮ ಬಂಗಾಳಕ್ಕೆ ಓಡಿ ಬಂದಿದ್ದ. ನಂತರ 2013 ರ ಜುಲೈ 07 ರಂದು ಬಿಹಾರದ ಬೋಧ್ ಗಯಾದಲ್ಲಿ ಬಾಂಬ್ ಸ್ಪೋಟಿಸಿ, ಅಲ್ಲಿಂದ ಕರ್ನಾಟಕಕ್ಕೆ ಬಂದು ನೆಲೆಸಿದ್ದ.
ಕಳೆದ ನಾಲ್ಕೈದು ವರ್ಷಗಳಿಂದ ಜೆಎಂಬಿ ಉಗ್ರ ಸಂಘಟನೆಯನ್ನು ಬಲಗೊಳಿಸಲು ಬೆಂಗಳೂರು ಮತ್ತು ಸುತ್ತಮುತ್ತಲಿನಲ್ಲಿರುವ ಸಹಚರರನ್ನು ಸೇರಿಸಿಕೊಂಡು ಡಕಾಯಿತಿ ನಡೆಸುತ್ತಾ, ಹಣವನನ್ನು ಹೊಂದಿಸುತ್ತಿದ್ದ.
ಬೆಂಗಳೂರು ನಗರ ಹೊರವಲಯದ ಸೋಲದೇವನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿದ್ದು, ಸ್ಪೋಟಕ ವಸ್ತುಗಳನ್ನು ಸಿದ್ದಪಡಿಸುತ್ತಿದ್ದ. ಅವಗಳನ್ನು ದೇಶದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡುತ್ತಿದ್ದುದು ಆತನ ವಿಚಾರಣೆಯಿಂದ ಮಾಹಿತಿ ಹೊರಗೆ ಬಂದಿತ್ತು.
ಇಂದಿಗೂ ಆತನ ಸಹಚರರು ಬೆಂಗಳೂರು ಹಾಗೂ ಹೊರವಲಯದ ಪ್ರದೇಶಗಳಲ್ಲಿ ಇರುವ ಶಂಕೆ ಎನ್ಐಎ ಅಧಿಕಾರಿಗಳಿಗಿದೆ. ಇದನ್ನು ಸ್ಥಳೀಯ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಕೆಲವು ಬಂಧಿತರ ಮೊಬೈಲ್ ನಂಬರ್ ಕರೆಗಳ ವಿವರ ಪಡೆದು ಒಂದೊಂದಾಗಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications