ಗಿರೀಶ್ ಕಾರ್ನಾಡ್ 'ತುಘಲಕ್' ನಾಟಕಕ್ಕೆ ನೂರರ ಸಂಭ್ರಮ: ಎರಡು ದಿನದ ರಂಗೋತ್ಸವದ ಸಂಪೂರ್ಣ ಮಾಹಿತಿ
ಬೆಂಗಳೂರು, ಅಕ್ಟೋಬರ್ 26: ಸಮುದಾಯ, ಬೆಂಗಳೂರು ಪ್ರಸ್ತುತ ಪಡಿಸಿರುವ, ಗಿರೀಶ್ ಕಾರ್ನಾಡ್ ರಚಿತ 'ತುಘಲಕ್' ನಾಟಕ ನೂರನೇ ಪ್ರದರ್ಶನ ಕಾಣುತ್ತಿದೆ. ಈ ಸಂದರ್ಭದಲ್ಲಿ ಸಮುದಾಯ ಬೆಂಗಳೂರು ಎರಡು ದಿನಗಳ ವಿಶೇಷ ಕಾರ್ಯಕ್ರಮವನ್ನು ಅಕ್ಟೋಬರ್ 28 ಮತ್ತು ಅಕ್ಟೋಬರ್ 29ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದೆ.
ಕಾರ್ಯಕ್ರಮದಲ್ಲಿ ಗಿರೀಶ್ ಕಾರ್ನಾಡರ ನೆನಪು ವಿಚಾರ ಸಂಕಿರಣ, ಸ್ಮರಣ ಸಂಚಿಕೆ ಬಿಡುಗಡೆ, ಕೆ.ಎಂ.ಚೈತನ್ಯ ನಿರ್ದೇಶನದ ಕಾರ್ನಾಡ್ ಸಾಕ್ಷ್ಯ ಚಿತ್ರ ಪ್ರದರ್ಶನ, 'ಹೂವು' ಏಕವ್ಯಕ್ತಿ ನಾಟಕ ಪ್ರದರ್ಶನ, 'ಕಾರ್ನಾಡರ ಕೃತಿಗಳು-ಒಳನೋಟ' ವಿಚಾರ ಸಂಕಿರಣ, 'ರಂಗ ಚಿಂತನ' ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಜೊತೆಗೆ ತುಘಲಕ್ ನಾಟಕ ಪ್ರದರ್ಶನ ಕೂಡ ಏರ್ಪಡಿಸಲಾಗಿದೆ. ನಾಡಿನ ಹೆಸರಾಂತ ರಂಗಕರ್ಮಿಗಳು, ಸಾಹಿತಿಗಳು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ರಂಗಭೂಮಿ ಹಾಗೂ ಸಾಹಿತ್ಯ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಮುದಾಯ, ಬೆಂಗಳೂರು ಮನವಿ ಮಾಡಿಕೊಂಡಿದ್ದಾರೆ.
ಗಿರೀಶ್ ಕಾರ್ನಾಡರ ತುಘಲಕ್ ನಾಟಕ ಬಗ್ಗೆ ಒಂದಿಷ್ಟು ಮಾಹಿತಿ..!
ಗಿರೀಶ್ ಕಾರ್ನಾಡರ ತುಘಲಕ್ ಭಾರತದ ಶ್ರೇಷ್ಠ ನಾಟಕಗಳಲ್ಲೊಂದು. ಐತಿಹಾಸಿಕ ಭಿತ್ತಿಯಲ್ಲಿ ಸಮಕಾಲೀನ ಧ್ವನಿಗಳನ್ನು ಹೊರಡಿಸುವ ಈ ನಾಟಕ ಹಲವು ವ್ಯಾಖ್ಯಾನಗಳ ಸಾಧ್ಯತೆಯನ್ನು ತನ್ನ ಒಡಲೊಳಗಿರಿಸಿಕೊಂಡಿದೆ. ಈ ನಾಟಕದ ಮಹತ್ವಾಕಾಂಕ್ಷೆಯ ಪ್ರಯೋಗಗಳನ್ನು ಕನ್ನಡವೂ ಸೇರಿದಂತೆ ನಾಡಿನ ಅನೇಕ ಭಾಷೆಗಳು ಕಂಡಿದೆ.

ತನ್ನ ರಾಜ್ಯದ ಉಜ್ವಲ ಭವಿಷ್ಯದ ಕನಸು ಕಂಡ ತುಘಲಕ್ನ ಸಾಮ್ರಾಜ್ಯದ ಅವನತಿಯ ರಾಜಕಾರಣ ಮತ್ತು ಧರ್ಮಕಾರಣಗಳನ್ನು ಎತ್ತಿ ಹಿಡಿವ ಈ ನಾಟಕ ಒಂದು ಅಪ್ಪಟ ರಾಜಕೀಯ ನಾಟಕವಾಗಿ ರೂಪುಗೊಡಿದೆ. ಮೇಲ್ನೋಟಕ್ಕೆ ತುಘಲಕ್ ಐತಿಹಾಸಿಕ ನಾಟಕವೆನಿಸಿದರೂ ಇಂದಿಗೂ ನಾವು ಕಾಣುವ ರಾಜಕಾರಣದ ಮೇಲಿನ ಧರ್ಮದ ಹಿಡಿತವನ್ನು ಎತ್ತಿ ಹಿಡಿಯುತ್ತದೆ ಎಂದು ಸಮುದಾಯ, ಬೆಂಗಳೂರು ತಿಳಿಸಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications