"3 ಪಕ್ಷಗಳು ಬೆಂಗಳೂರಿನ ಜನತೆಗೆ ನಯಾಪೈಸೆ ಅನುಕೂಲ ಮಾಡಿಲ್ಲ''
ಬೆಂಗಳೂರು, ನವೆಂಬರ್ 11: ಆಮ್ ಆದ್ಮಿ ಪಕ್ಷವು ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ. ನಾವು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುವುದಿಲ್ಲ, ಕಾಯಕದ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಹೇಳಿದರು.
ಬುಧವಾರ ಬೆಂಗಳೂರಿನ ಶಾಂತಿನಗರದ ಆಮ್ ಆದ್ಮಿ ಕ್ಲಿನಿಕ್ ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಸಂವಾದ ಮನೀಷ್ ಸಿಸೋಡಿಯಾ, ಬೆಂಗಳೂರಿನಲ್ಲಿ ಅಧಿಕಾರದಲ್ಲಿ ಇಲ್ಲದಿದ್ದರೂ ನಮ್ಮ ಸ್ವಯಂ ಸೇವಕರು ಸೇರಿ ಈ ಉಚಿತ ಕ್ಲಿನಿಕ್ ಪ್ರಾರಂಭಿಸಿದ್ದಾರೆ. ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ವಾರ್ಡ್ ನಲ್ಲಿ 3 ಕ್ಲಿನಿಕ್ ತೆರೆಯಲಾಗುವುದು ಎಂದರು.
ಬಿಬಿಎಂಪಿಯಲ್ಲಿ ಅಧಿಕಾರ ಅನುಭವಿಸಿದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ಮೂರು ಪಕ್ಷಗಳು ಬೆಂಗಳೂರಿನ ಜನತೆಗೆ ನಯಾಪೈಸೆ ಅನುಕೂಲ ಮಾಡಿಲ್ಲ. ನಾವು ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಬೆಂಗಳೂರಿನ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿ, ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ನೀಡದ ಸರ್ಕಾರ ಜನರಿಗೆ ಬೇಕಿಲ್ಲ. ನಾವು ನಡೆಸಿದ ಸಮೀಕ್ಷೆಯ ಪ್ರಕಾರ ಬೆಂಗಳೂರಿನ ಶೇ.70 ರಷ್ಟು ಜನ ದೆಹಲಿ ಮಾದರಿ ಆಮ್ ಆದ್ಮಿ ಸರ್ಕಾರ ಬೆಂಗಳೂರಿಗೆ ಬೇಕು ಎಂದು ಅಭಿಪ್ರಾಯ ತಿಳಿಸಿದ್ದಾರೆ, ಇದು ನಿಜವಾಗಲಿದೆ ಎಂದು ಹೇಳಿದರು.

ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಆಮ್ ಆದ್ಮಿ ಕ್ಲಿನಿಕ್ ಉಸ್ತುವಾರಿ ರಾಣಿ ದೇಸಾಯಿ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಮಾಧ್ಯಮ ಸಂಚಾಲಕ ಜಗದೀಶ್.ವಿ ಸದಂ, ಉಪಾಧ್ಯಕ್ಷ ಸುರೇಶ್ ರಾಥೋಡ್ ಇದ್ದರು.
ಧನ್ಯವಾದಗಳು
ಸೋಮಶೇಖರ್ ಸಿರಾ
ಮಾಧ್ಯಮ ಸಂಯೋಜಕ
ಆಮ್ ಆದ್ಮಿ ಪಕ್ಷ
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications