Hoysala Police: ಸರಿಯಾದ ಸಮಯಕ್ಕೆ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ಸೇರಿಸಿದ ಹೊಯ್ಸಳ ಸಿಬ್ಬಂದಿ
ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ತಲುಪಲಾಗದೆ ಪರೀಕ್ಷೆಯನ್ನೇ ಕಳೆದುಕೊಳ್ಳುವ ಭಯದಲ್ಲಿದ್ದ ವಿದ್ಯಾರ್ಥಿಗೆ ಹೊಯ್ಸಳ ಸಿಬ್ಬಂದಿ ಆಸರೆಯಾಗಿದ್ದಾರೆ. ಸೈರನ್ ಹಾಕಿಕೊಂಡು ಸರಿಯಾದ ಸಮಯಕ್ಕೆ ವಿದ್ಯಾರ್ಥಿಯನ್ನು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಶನಿವಾರ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಬೆಂಗಳೂರು ನಗರದಲ್ಲಿ ಭಾರಿ ಟ್ರಾಫಿಕ್ ಉಂಟಾಗಿತ್ತು, ಇದರೊಂದಿಗೆ ಪರೀಕ್ಷಾ ಕೇಂದ್ರ ಸಮಯಕ್ಕೆ ಸರಿಯಾಗಿ ಹೋಗಲು ಸಾಧ್ಯವಾಗುವುದಿಲ್ಲ ಎಂದು ವಿದ್ಯಾರ್ಥಿಯೊಬ್ಬ ನೊಂದಿದ್ದ, ವಿದ್ಯಾರ್ಥಿಯನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಿಸಿದಾಗ, ಸಿಇಟಿ ಪರೀಕ್ಷೆ ಬರೆಯಲು ಹೋಗುತ್ತಿದ್ದು, ಟ್ರಾಫಿಕ್ನಿಂದ ತಡವಾಗುತ್ತಿದೆ ಎಂದು ಅಸಹಾಯಕತೆ ಹೇಳಿಕೊಂಡಿದ್ದ.

ವಿದ್ಯಾರ್ಥಿಗೆ ಧೈರ್ಯ ಹೇಳಿದ ಪೊಲೀಸರು ಹೊಯ್ಸಳ ವಾಹನದಲ್ಲಿ ಕಳುಹಿಸಿಕೊಟ್ಟರಿ. ಸೈರನ್ ಹಾಕಿಕೊಂಡ ಹೊಯ್ಸಳ ವಾಹನ ಸಿಬ್ಬಂದಿ ಕೇವಲ 15 ನಿಮಿಷದಲ್ಲಿ ಕೋರಮಂಗಲದ ಜೆ.ಎನ್.ಸಿ ಕಾಲೇಜಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಇದರಿಂದ ವಿದ್ಯಾರ್ಥಿ ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗುವಂತಾಯಿತು.
ಕೊತ್ತನೂರಿನ ಹೊಯ್ಸಳ ಸಿಬ್ಬಂದಿ ಗೌರಿಶ್ ಹಾಗೂ ಸೋಮಶೇಖರ್ ಅವರೇ ವಿದ್ಯಾರ್ಥಿಯನ್ನು ಸಮಯಕ್ಕೆ ಸರಿಯಾಗಿ ತಲುಪಿಸಿದವರು, ಇವರ ಕಾರ್ಯಕ್ಕೆ ಸಾರ್ವಜನಿಕರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಕೂಡ ಹೊಯ್ಸಳ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾನೆ.
ಹೊಯ್ಸಳ ಸಿಬ್ಬಂದಿ ವಿಡಿಯೋ ಮೂಲಕ ಸಂದೇಶ ನೀಡಿದ್ದು, ಜನರ ಸೇವೆಗೆ ತಾವು ಸದಾ ಸಿದ್ದವಾಗಿದ್ದೇವೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಾಗಿ ಸೈರನ್ ಹಾಕಿಕೊಂಡು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರ ತಲುಪಿಸಿದ ಪೊಲೀಸರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಪೊಲೀಸರು ಸದಾಕಾಲ ಹೀಗೆ ಜನಸ್ನೇಹಿಯಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Traffic Alert: ಬೆಂಗಳೂರು ಹೊರ ವರ್ತುಲ ಸವಾರರೇ ಗಮನಿಸಿ, ರಸ್ತೆ ಸಂಚಾರ ನಿರ್ಬಂಧ -
Dawood Ibrahim: "ರಿಯಲ್ ಡಾನ್ ದಾವೂದ್ ಇಬ್ರಾಹಿಂ" ಸ್ಟಿಕ್ಕರ್ ಹಾಕಿಸಿದ್ದ ಬಸ್ ಚಿಕ್ಕಮಗಳೂರಿನಲ್ಲಿ ಪೊಲೀಸ್ ವಶಕ್ಕೆ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್











Click it and Unblock the Notifications