ಬೆಂಗಳೂರಿನಲ್ಲಿ ಕುದುರೆ ರೇಸ್ ಇರುತ್ತಾ? ಇಲ್ವಾ? ಹೈಕೋರ್ಟಿನತ್ತ ಚಿತ್ತ
ಬೆಂಗಳೂರು, ಡಿಸೆಂಬರ್ 15 : ಬೆಂಗಳೂರು ಟರ್ಫ್ ಕ್ಲಬ್ ನ ಪರವಾನಗಿ ನವೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋಡಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಪ್ರಕಟಿಸಲಿದೆ.
ಬಿಟಿ ಪರವಾನಗಿ ನವೀಕರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಎಚ್.ಎನ್. ಚಂದ್ರೇಗೌಡ ಸೇರಿ 10 ಮಂದಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ಅರ್ಜಿಯ ಕುರಿತು ಮಧ್ಯಂತರ ಆದೇಶ ಪ್ರಕಟಿಸುವುದಾಗಿ ತಿಳಿಸಿತು.
ಇದಕ್ಕೂ ಮುನ್ನ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಮಧುಸೂದನ್ ನಾಯಕ್ ವಾದ ಮಂಡಿಸಿ, ಕುದುರೆ ರೇಸ್ ನಡೆಸಲು ಅನುಮತಿ ಕೋರಿ ಬಿಟಿಸಿ ಅಜಿಲ್ಲ ಸಲ್ಲಿಸಿಲ್ಲ. ರೇಸ್ ಕೋರ್ಸ್ ಬೆಟ್ಟಿಂಗ್ ಪತ್ರ ನೀಡಿದ್ದು, ಅದು ಸಹ ಸರಿಯಾದ ಸ್ವರೂಪದಲ್ಲಿ ಇಲ್ಲ. ಆದ್ದರಿಂದ ಬಿಟಿಸಿ ಪರವಾನಗಿ ನವೀಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನು ಆಕ್ಷೇಪಿಸಿದ ಬಿಟಿಸಿ ಪರ ವಕೀಲರು, ಕುದುರೆ ರೇಸ್ ಅನುಮತಿ ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ. ಹಿಂದೆಯೂ ಈ ಬಾರಿ ಸಲ್ಲಿಸಿರುವ ಸ್ವರೂಪದಲ್ಲೇ ಅರ್ಜಿ ಸಲ್ಲಿಸಲಾಗಿತ್ತು. ಆಗ ಸರ್ಕಾರ ಯಾವುದೇ ಆಕ್ಷೇಪ ಎತ್ತಿರಲಿಲ್ಲ.
ಬಿಟಿಟಸಿಯ ಸರ್ಕಾರಕ್ಕೆ 50 ಸದಸ್ಯತ್ವ ನೀಡುತ್ತಿಲ್ಲ ಎಂಬ ದ್ವೇಶಷದಿಂದ ಸದ್ಯ ಈ ವರ್ತನೆ ತೋರುತ್ತಿದೆ. ಸದಸ್ಯತ್ವ ನೀಡಲು ನಮ್ಮದು ಯಾವುದೇ ತಕರಾರಿಲ್ಲ. ಆದರೆ ಸದಸ್ಯತ್ವ ಕೋಟಿ ಬಿಟಿಸಿ ನಿಯಮಗಳನ್ವಯ ಸರಿಯಾದ ಸ್ವರೂಪದಲ್ಲಿ ಅರ್ಜಿ ಸಲ್ಲಿಸಬೇಕಿದೆ ಎಂದು ತಿಳಿಸಿದರು.
ಅಡ್ವೋಕೇಟ್ ಜನರಲ್ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರವು ರೇಸ್ ಕೋರ್ಸ್ ಬೆಟ್ಟಿಂಗ್ ಸಲ್ಲಿಸಿರುವ ಅರ್ಜಿಯನ್ನು ಕಾನೂನು ಪ್ರಕಾರ ಪರಿಶೀಲಿಸಿ ಪರಿಗಣಿಸಲಾಗುವುದು. ಅಲ್ಲದೆ, ಸರಿಯಾದ ಸ್ವರೂಪದಲ್ಲಿ ಕುದುರೆ ರೇಸ್ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಅದನ್ನು ಪರಿಗಣಿಸಲು ಮುಕ್ತವಾಗಿರುವುದಾಗಿ ತಿಳಿಸಿದರು.
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ಕುರಿತು ಶುಕ್ರವಾರ ಮಧ್ಯಂತರ ಆದೇಶ ಪ್ರಕಟಿಸಲಾಗುವುದು ಎಂದು ತಿಳಿಸಿತು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ










Click it and Unblock the Notifications