ಜನವರಿ 8 ರಂದು ದೇಶವ್ಯಾಪಿ ಬಂದ್ಗೆ ಕರೆಕೊಟ್ಟ ಸಿಪಿಐ
ಬೆಂಗಳೂರು, ಡಿಸೆಂಬರ್ 27: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊರಟಿರುವ ಎನ್ಆರ್ಸಿ, ಎನ್ಪಿಆರ್, ಸಿಎಎ ವಿರುದ್ಧ ಸಿಪಿಐ ಜನವರಿ 8ರಂದು ದೇಶವ್ಯಾಪಿ ಬಂದ್ಗೆ ಕರೆಕೊಟ್ಟಿದೆ.
ದೇಶದ ಜನರನ್ನು ವಿಭಜಿಸಲು ಸಿಎಎ, ಎನ್ಪಿಆರ್, ಎನ್ಆರ್ಸಿ ಜಾರಿಗೆ ತರಲಾಗುತ್ತಿದೆ ಎಂದು ಸಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಆರೋಪಿಸಿದ್ದಾರೆ.
ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ಮತ್ತು ಆರ್ ಎಸ್ ಎಸ್ ನಿಜವಾದ ತುಕುಡೆ ತುಕುಡೆ ಗ್ಯಾಂಗ್, ಜನವರಿ 1 ರಿಂದ 7ರವರೆಗೆ ದೇಶವ್ಯಾಪಿ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನಕ್ಕೆ ಎಡಪಕ್ಷಗಳು ಕರೆ ಕೊಡುತ್ತಿವೆ.
ಜನವರಿ 8 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಡಲಾಗಿದೆ.ಬಿಜೆಪಿ, ಆರ್ ಎಸ್ ಎಸ್ ವಿರುದ್ಧ ಕರ್ನಾಟಕದಲ್ಲಿ ಕೂಡಾ ಬೃಹತ್ ಹೋರಾಟ ರೂಪಿಸುತ್ತೇವೆ.ಕೇಂದ್ರ ಸರ್ಕಾರವನ್ನು ಯಾರಾದರೂ ಪ್ರಶ್ನಿಸಿದರೆ ಅವರನ್ನು ದೇಶ ವಿರೋಧಿಗಳು ಎಂಬಂತೆ ಬಿಂಬಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ನೀತಿಗಳನ್ನು ಪ್ರಶ್ನಿಸಿದರೆ ಅರ್ಬನ್ ನಕ್ಸಲರು ಎನ್ನಲಾಗುತ್ತಿದೆ. ಸ್ವತಃ ಗೃಹಸಚಿವ ಅಮಿತ್ ಷಾ ಈ ಮಾತು ಹೇಳುತ್ತಾರೆ ಎಂದರು.
ಸಿಪಿಐ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣ ಕುರಿತು ಮಾತನಾಡಿರುವ ಅವರು, ಇಂತಹ ಘಟನೆಗಳನ್ನು ನಾವು ಎಷ್ಟೋ ನೋಡಿದ್ದೇವೆ, ಸೈದ್ಧಾಂತಿಕವಾಗಿ, ರಾಜಕೀಯವಾಗಿ, ಸಂಘಟನಾತ್ಮಕವಾಗಿ ನಾವು ಹೋರಾಡುತ್ತೇವೆ.
ನಮ್ಮ ಕಾರ್ಯಕರ್ತರು ಗೂಂಡಾಗಳಿಗೆ ಹೆದರಿ ಓಡಿ ಹೋಗುತ್ತಾರೆ ಅಂತಾ ಯಾರೂ ಭಾವಿಸೋದು ಬೇಡ.ಸ್ವಾತಂತ್ರ್ಯ ಹೋರಾಟ ಮಾಡಿದ ಇತಿಹಾಸ ನಮ್ಮದು ಇದೆ.ಸಿಎಎ ವಿರುದ್ಧ ಹೋರಾಟ ನಡೆಯುತ್ತಿರುವ ಸಮಯದಲ್ಲೇ ಸಿಪಿಐ ಕಚೇರಿಗೆ ಬೆಂಕಿ ಹಚ್ಚುವ ಯತ್ನ ನಡೆದಿದೆ ಎಂದು ಆರೋಪಿಸಿದರು.
ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಹೋರಾಟ ಮುಂದುವರಿಯಲಿದೆ.ಸಿಎಎ ವಿಚಾರದಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶ ಮಾಡಬೇಕು.ನಮ್ಮ ಸೇನೆ ಭಾರತೀಯ ಸೇನೆ, ಸೇನಾ ಮುಖ್ಯಸ್ಥ ಹೇಗೆ ನಾಗರಿಕ ವಿಚಾರದಲ್ಲಿ ಪ್ರವೇಶ ಮಾಡುತ್ತಾರೆ? ಮೊದಲ ಬಾರಿಗೆ ಸರ್ಕಾರ ಸೇನಾ ಮುಖ್ಯಸ್ಥರಿಗೆ ನಾಗರಿಕ ವಿಚಾರದಲ್ಲಿ ಮಾತನಾಡಲು ಅವಕಾಶ ಕೊಟ್ಟಿದೆ, ಈವರೆಗೆ ನಮ್ಮಲ್ಲಿ ಅಂತಹ ಅವಕಾಶ ಮಾಡಿಕೊಟ್ಟಿಲ್ಲ ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications