"ತೆಲಂಗಾಣದಲ್ಲಿ TRS ಅಧಿಕಾರ ಕಳೆದುಕೊಳ್ಳುವ ದಿನ ಸಮೀಪಿಸಿದೆ''
ಬೆಂಗಳೂರು, ಡಿಸೆಂಬರ್ 4: ಜಿಎಚ್ಎಂಸಿ ಚುನಾವಣಾ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಅಭಿವೃದ್ಧಿ ರಾಜಕಾರಣವನ್ನು ಜನರು ಮೆಚ್ಚಿರುವುದನ್ನು ತೋರಿಸಿದೆ. ಹಾಗೆಯೇ ಟಿ.ಆರ್.ಎಸ್ ಮತ್ತು ಎಂಐಎಂ ಪಕ್ಷಗಳ ತುಷ್ಟೀಕರಣದ ರಾಜಕಾರಣವನ್ನು ಜನರು ತಿರಸ್ಕರಿಸಿರುವುದನ್ನು ಬಿಂಬಿಸಿದೆ ಎಂದು ಜಿಎಚ್ಎಂಸಿ ಚುನಾವಣೆಯ ಬಿಜೆಪಿ ಸಹ ಉಸ್ತುವಾರಿಯಾಗಿದ್ದ ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ, ಟಿ.ಆರ್.ಎಸ್ ಪಕ್ಷದ ಅಧಿಕಾರದ ದಿನಗಳು ಕೊನೆಗೊಳ್ಳುವ ಹಂತಕ್ಕೆ ಬಂದಿದೆ ಎಂಬ ಜನರ ಭಾವನೆ ಸ್ಪಷ್ಟವಾಗಿ ವ್ಯಕ್ತವಾಗಿದೆ. ಟಿ.ಆರ್.ಎಸ್ ಹಾಗೂ ಎಂಐಎಂ ಪಕ್ಷಗಳು ಬಿಜೆಪಿಯನ್ನು ತಡೆಯುವ ಪ್ರಯತ್ನ ಮಾಡಿದ್ದರೂ, ಬಿಜೆಪಿ ಎತ್ತರಕ್ಕೆ ಏರಿದೆ. 2016 ರಲ್ಲಿ ಕೇವಲ ಸೀಟುಗಳನ್ನು ಹೊಂದಿದ್ದ ಬಿಜೆಪಿ ಈಗ ಪ್ರಬಲ, ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸೇರಿದಂತೆ ರಾಷ್ಟ್ರಮಟ್ಟದ ನಾಯಕರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರಿಂದ ಹೈದರಾಬಾದ್ ನಲ್ಲಿ ರಾಜ್ಯ ಬಿಜೆಪಿ ಘಟಕ ಹಾಗೂ ಇಡೀ ತಂಡದ ಉತ್ಸಾಹ ಮುಗಿಲು ಮುಟ್ಟಿತ್ತು. ಬಿಜೆಪಿ ಈ ಹೋರಾಟವನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯಲಿದ್ದು, ಭ್ರಷ್ಟ ಟಿ.ಆರ್.ಎಸ್-ಎಂಐಎಂ ಆಡಳಿತ ಅಂತ್ಯವಾಗುವವರೆಗೂ ಈ ಹೋರಾಟ ನಡೆಯಲಿದೆ ಎಂದು ಸಚಿವ ಡಾ.ಕೆ ಸುಧಾಜರ್ ಅಭಿಪ್ರಾಪಟ್ಟಿದ್ದಾರೆ.

ಜನಾಭಿಪ್ರಾಯ ತಮ್ಮ ವಿರುದ್ಧವಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹಾಗೂ ಅವರ ಪುತ್ರ ಕೆ.ಟಿ.ರಾಮರಾವ್ ಅವರಿಗೆ ಮೊದಲಿನಿಂದಲೂ ಗೊತ್ತಿತ್ತು. ಆತುರದ ಚುನಾವಣೆ, ಮಧ್ಯರಾತ್ರಿ ಆದೇಶಗಳು ಕೆಸಿಆರ್ ಪರಿವಾರದಲ್ಲಿ ಸೃಷ್ಟಿಯಾಗಿರುವ ಹತಾಶೆಯ ಲಕ್ಷಣಗಳು ಎಂದು ಟೀಕಿಸಿದ್ದಾರೆ.

"ತೆಲಂಗಾಣದ ಜನರು ಸಮರ್ಥವಾದ ಪರ್ಯಾಯ ನಾಯಕತ್ವವನ್ನು ಬಯಸುತ್ತಿದ್ದಾರೆ. ಈಗ ಟಿಐಎನ್ಎ (ದೆರ್ ಈಸ್ ನೋ ಆಲ್ಟರ್ ನೇಟಿವ್) ಬದಲು ಬಿಐಟಿಎ-ಬಿಜೆಪಿ (ಬಿಜೆಪಿ ಈಸ್ ದಿ ಆಲ್ಟರ್ ನೇಟಿವ್) ಆಗಿದೆ. ಟಿಆರ್ಎಸ್ ಹಾಗೂ ಎಂಐಎಂಗೆ ಅಧಿಕಾರ ಕಳೆದುಕೊಳ್ಳುವ ಕ್ಷಣಗಣನೆ ಆರಂಭವಾಗಿದೆ.''
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications