Cubbon Park: ಕಬ್ಬನ್ ಪಾರ್ಕ್ನಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ಕೈ ಬಿಟ್ಟ ಸರ್ಕಾರ: ಕಾರಣ ಇಲ್ಲಿದೆ
ಬೆಂಗಳೂರು, ಫೆಬ್ರವರಿ 13: ಕಬ್ಬನ್ ಪಾರ್ಕ್ ಹಾಗೂ ಲಾಲಾಬಾಗ್ ನಗರದ ಪರಿಸರ ಪ್ರೇಮಿಗಳ ಮೆಚ್ಚಿನ ತಾಣ. ಸದಾ ವಾಹನಗಳ ಸದ್ದು, ಮಾಲಿನ್ಯದಿಂದ ಗಿಜುಗುಡುವ ಬೆಂಗಳೂರಿನಲ್ಲಿ ಸ್ವಚ್ಛಂದ ಮತ್ತು ಕಲುಷಿತಗೊಳ್ಳದ ಶುದ್ಧ ಗಾಳಿ ಸಿಗುವ ಜಾಗ ಕಬ್ಬನ್ ಪಾರ್ಕ್. ಈ ಪಾರ್ಕ್ನಲ್ಲಿ ನೂರಾರು ಪ್ರಾಣಿ ಪಕ್ಷಿ ಸಂಕುಲವಿದ್ದು, ಹಚ್ಚ ಹಸಿರಿನ ಹೊದಿಕೆಯಿದೆ.
ಒತ್ತಡದ ಜೀವನಕ್ಕೆ ಬ್ರೇಕ್ ಹಾಕಿ ಇಲ್ಲಿ ರಿಲ್ಯಾಕ್ಸ್ ಆಗಲು, ಮಕ್ಕಳಿಗೆ ಆಟವಾಡಲು, ಕುಟುಂಬ ಸಮೇತ ಬಂದು ಕಾಲ ಕಳೆಯಲು ಇರುವ ಸುಂದರವಾದ ತಾಣವಿದು. ಬೆಂಗಳೂರಿಗರು ಮಾತ್ರ ಅಲ್ಲದೇ ನಗರದ ಸುತ್ತಮುತ್ತ ಜಿಲ್ಲೆಯ ಜನರು ಕೂಡ ವಿಕೇಂಡ್, ರಜೆ ದಿನಗಳಲ್ಲಿ ಈ ಪಾರ್ಕ್ನ ಸ್ವಚ್ಚಂದ ವಾತಾವರಣ ಅನುಭವಕ್ಕಾಗಿ ಬರುತ್ತಾರೆ. ಆದರೆ ಸರ್ಕಾರದ ಇತ್ತೀಚಿನ ಒಂದು ನಿರ್ಧಾರ ಕಬ್ಬನ್ ಪಾರ್ಕ್ನ ನೈಜ ಸ್ವರೂಪ ಹಾಳು ಮಾಡುವ ಆತಂಕಕ್ಕೆ ಕಾರಣವಾಗಿತ್ತು. ಆದರೆ ಪರಿಸರ ಪ್ರೇಮಿಗಳ ಹೋರಾಟದಿಂದ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದಿದೆ.

ಕಬ್ಬನ್ ಪಾರ್ಕ್ನಲ್ಲಿ ಹೊಸದಾಗಿ ಹತ್ತು ಅಂತಸ್ತುಗಳ ಕಟ್ಟಡವೊಂದನ್ನು ಕಟ್ಟಲು ಮುಂದಾಗಿದ್ದ ರಾಜ್ಯ ಸರ್ಕಾರ, ಸದ್ಯ ಆ ನಿರ್ಧಾರಕ್ಕೆ ಬ್ರೇಕ್ ಹಾಕಿದೆ. ಕಬ್ಬನ್ ಪಾರ್ಕ್ನಲ್ಲಿ ಚುನಾವಣಾ ಆಯೋಗಕ್ಕೆ ಹೊಸ ಕಟ್ಟಡವೊಂದನ್ನು ನಿರ್ಮಿಸಲು ಹಾಗೂ ಕೆಲವು ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರಿಸುವ ಸಲುವಾಗಿ ಹತ್ತು ಅಂತಸ್ತುಗಳ ಬೃಹತ್ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಈ ಕಾಮಗಾರಿಗೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಈ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮರಗಳನ್ನು ಕತ್ತರಿಸದೇ ನಿರ್ಮಿಸಲು ಸಾಧ್ಯವಿಲ್ಲ. ಕಟ್ಟಡ ನಿರ್ಮಾಣಕ್ಕೆ ಬೇಕಾದ ಸಾಮಗ್ರಿಗಳನ್ನು ಸಾಗಿಸುವ ಭಾರೀ ಗಾತ್ರದ ವಾಹನಗಳು ಹಾಗೂ ಭಾರೀ ಗಾತ್ರದ ಯಂತ್ರಗಳು ಕಬ್ಬನ್ ಪಾರ್ಕ್ನಲ್ಲಿ ಕಾರ್ಯನಿರ್ವಹಿಸದರೆ, ಕಬ್ಬನ್ ಪಾರ್ಕ್ ಮಾಲಿನ್ಯವಾಗುತ್ತದೆ. ಶಾಂತಿಯಿಂದಿರುವ ಈ ಜಾಗ ಶಬ್ಧ ಮಾಲಿನ್ಯ, ವಾಯು ಮಾಲಿನ್ಯದಿಂದ ತುಂಬಿ ತುಳುಕುತ್ತದೆ ಎಂದು ಪರಿಸರ ಪ್ರೇಮಿಗಳು ಅನೇಕ ಸಂಘ- ಸಂಸ್ಧೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು.
ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಿಸುವ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಹೊಸ ಜಾಗವನ್ನು ಹುಡುಕಲಾಗುತ್ತದೆ ಎನ್ನಲಾಗಿದೆ. ಸದ್ಯ ಹತ್ತು ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಬಿಡಲಾಗಿದ್ದು, ಕರ್ನಾಟಕ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬೇರೆ ಜಾಗ ಹುಡುಕಾಟದಲ್ಲಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್












Click it and Unblock the Notifications