ಬದ್ಧತೆಯಿಲ್ಲದ ರಾಜ್ಯಪಾಲರ ಭಾಷಣ; ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು, ಫೆಬ್ರವರಿ, 6: ರಾಜ್ಯ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ವಜುಬಾಯಿ,ಆರ್.ವಾಲ ಜಂಟಿ ಅಧಿವೇಶದಲ್ಲಿ ಮಾಡಿದ ಭಾಷಣ ಅತ್ಯಂತ ಕಳಪೆ ಹಾಗೂ ದೂರದೃಷ್ಟಿಯಿಲ್ಲ ಭಾಷಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಭಾಷನ ದೂರದೃಷ್ಟಿ ಇಲ್ಲದ, ಭದ್ಧತೆ ಕೊರತೆ ಹೊಂದಿರುವ ಭಾಷಣವಾಗಿದೆ. ಇದರಲ್ಲಿ ಹೊಸ ಕಾರ್ಯಕ್ರಮವೇನೂ ಕಾಣುತ್ತಿಲ್ಲ. ಮೂರು ವರ್ಷಗಳ ಕಾಲ ಸಮಯವ್ಯಯಿಸಿದ್ದು, ಯಾವುದೇ ಕಾರ್ಯಕ್ರಮ ರೂಪಿಸಿಯೇ ಇಲ್ಲ. ರೈತರ ಬಗ್ಗೆಯಾಗಲೀ, ಹೈ-ಕ ಭಾಗದ ವಿಶೇಷ ಅನುದಾನ ಕುರಿತಾಗಲೀ ಪ್ರಸ್ತಾಪಿಸಿಲ್ಲ. ನೀರಾವರಿ ವಿಷಯದಲ್ಲಿ ಸ್ಪಷ್ಟ ನಿಲುವು ಕಂಡುಕೊಂಡಿಲ್ಲ ಎಂದು ಆರೋಪಿಸಿದರು.[2017ರಲ್ಲೇ ಕರ್ನಾಟಕದಲ್ಲಿ ಚುನಾವಣೆ -ಕುಮಾರಸ್ವಾಮಿ ಭವಿಷ್ಯ]

ಮಹದಾಯಿ, ಕಾವೇರಿ ವಿಚಾರವಾಗಿ ಸ್ಪಷ್ಟ ವಿವರಣೆ ನೀಡಿಲ್ಲ. ಹಾಗೆಯೇ ಹೈದರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನಕ್ಕಾಗಿ ನಾಲ್ಕು ಸಾವಿರ ಕೋಟಿ ರು. ಇಟ್ಟಿದೇವೆ ಎಂದು ಹೇಳಿದ್ದಾರೆಯೇ ಹೊರತು ಖರ್ಚಿನ ವಿಷಯ ಪ್ರಸ್ತಾಪಿಸಿಲ್ಲ. ಪಾರದರ್ಶಕ ಆಡಳಿತ ಮಾಡುತ್ತೇವೆ ಎಂದು ಎಸಿಬಿ ರಚನೆ ಮಾಡಿ ಭ್ರಷ್ಟಾಚಾರವನ್ನುಸಂಪೂರ್ಣ ನಿಗ್ರಹ ಮಾಡಿದ್ದಾರೆಂದು ಅಣಕವಾಡಿದರು.
ಸರಕಾರ ಮೂರು ವರ್ಷಗಳ ಕಾಲ ನಿದ್ರಾವಸ್ಥೆಯಲ್ಲಿತ್ತು ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರೇ ಹೇಳಿದ್ದಾರೆ ಎಂದ ಮೇಲೆ ನಾವು ಅವರನ್ನು ಟೀಕಿಸಲು ಏನು ಉಳಿದಿದೆ. ಸಿಎಂ ಇದಕ್ಕಾದರೂ ಎಚ್ಚರಿಕೆಯಿಂದ ಇರಬೇಡವೇ ಎಂದರು.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications