ಹಿರಿಯ ಪತ್ರಕರ್ತ ಕೆ ಸತ್ಯನಾರಾಯಣಗೆ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ
ಬೆಂಗಳೂರು, ಆಗಸ್ಟ್ 10: ಹಿರಿಯ ಪತ್ರಕರ್ತರಾದ ಕೆ.ಸತ್ಯನಾರಾಯಣ ಅವರಿಗೆ ಕನ್ನಡ ಪತ್ರಿಕೋದ್ಯಮದ ಜನಕ ಎಂದೇ ಜನಜನಿತರಾಗಿರುವ ಹರ್ಮನ್ ಮೊಗ್ಲಿಂಗ್ ಜೀವಮಾನದ ಸಾಧನೆ ಪ್ರಶಸ್ತಿ ಸಂದಿದೆ.
ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆರಂಭಿಸಿರುವ ಈ ಪ್ರಶಸ್ತಿಯು ಒಂದು ಲಕ್ಷ ರುಪಾಯಿ ನಗದನ್ನು ಒಳಗೊಂಡಿದೆ.
ಕನ್ನಡಪ್ರಭಕ್ಕೆ ಸುದೀರ್ಘ ಸೇವೆ ಸಲ್ಲಿಸಿರುವ ಕೆ.ಸತ್ಯನಾರಾಯಣ ಅವರಿಗೆ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿಯನ್ನು ಸಚಿವ ಕೆ.ಜೆ.ಜಾರ್ಜ್ ಘೋಷಿಸಿದ್ದಾರೆ. ಈ ಪ್ರಶಸ್ತಿಯನ್ನು ಆಗಸ್ಟ್ ಹನ್ನೆರಡರ ಶನಿವಾರದಂದು ಬೆಂಗಳೂರಿನಲ್ಲಿರುವ ರಾಡಿಸನ್ ಬ್ಲೂ ಏಟ್ರಿಯಾ ಹೋಟೆಲಿನಲ್ಲಿ ಪ್ರಶಸ್ತಿ ವಿತರಿಸಲಾಗುತ್ತದೆ.

ಪತ್ರಿಕೋದ್ಯಮದಲ್ಲಿ ಅಮೋಘ ಸೇವೆ ಸಲ್ಲಿಸಿದ, ಆ ಮೂಲಕ ಸಮಾಜಕ್ಕೆ ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡಿದವರಿಗೆ ಪ್ರಶಸ್ತಿ ಮೀಸಲಾಗಿದೆ. ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ಸಂಘವು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಒಕ್ಕೂಟದಲ್ಲಿ ನೋಂದಣಿ ಆಗಿದೆ. ಸಂಘಕ್ಕೆ ಎಂಬತ್ತೈದು ವರ್ಷಗಳ ಇತಿಹಾಸವಿದ್ದು, 1932ರಲ್ಲಿ ಸಾಹಿತಿ ಡಿ.ವಿ.ಗುಂಡಪ್ಪ ಅವರಿಂದ ಆರಂಭವಾಗಿದೆ.
ಹರ್ಮನ್ (1811-1881) ಅವರು ತಮ್ಮಿಡೀ ವೃತ್ತಿ ಜೀವನವನ್ನು ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಕಳೆದಿರುವುದು ವಿಶೇಷ. ಕನ್ನಡದ ಮೊಟ್ಟಮೊದಲ ಪತ್ರಿಕೆ 'ಮಂಗಳೂರು ಸಮಾಚಾರ'ವನ್ನು ಕನ್ನಡದಲ್ಲಿ ತಂದ ಹೆಗ್ಗಳಿಕೆ ಹರ್ಮನ್ ಮೊಗ್ಲಿಂಗ್ ಅವರದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications