ಹಿರಿಯ ಪತ್ರಕರ್ತ ಕೆ ಸತ್ಯನಾರಾಯಣಗೆ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ
ಬೆಂಗಳೂರು, ಆಗಸ್ಟ್ 10: ಹಿರಿಯ ಪತ್ರಕರ್ತರಾದ ಕೆ.ಸತ್ಯನಾರಾಯಣ ಅವರಿಗೆ ಕನ್ನಡ ಪತ್ರಿಕೋದ್ಯಮದ ಜನಕ ಎಂದೇ ಜನಜನಿತರಾಗಿರುವ ಹರ್ಮನ್ ಮೊಗ್ಲಿಂಗ್ ಜೀವಮಾನದ ಸಾಧನೆ ಪ್ರಶಸ್ತಿ ಸಂದಿದೆ.
ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆರಂಭಿಸಿರುವ ಈ ಪ್ರಶಸ್ತಿಯು ಒಂದು ಲಕ್ಷ ರುಪಾಯಿ ನಗದನ್ನು ಒಳಗೊಂಡಿದೆ.
ಪತ್ರಕರ್ತರಿಗಾಗಿ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ಥಾಪನೆ
ಕನ್ನಡಪ್ರಭಕ್ಕೆ ಸುದೀರ್ಘ ಸೇವೆ ಸಲ್ಲಿಸಿರುವ ಕೆ.ಸತ್ಯನಾರಾಯಣ ಅವರಿಗೆ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿಯನ್ನು ಸಚಿವ ಕೆ.ಜೆ.ಜಾರ್ಜ್ ಘೋಷಿಸಿದ್ದಾರೆ. ಈ ಪ್ರಶಸ್ತಿಯನ್ನು ಆಗಸ್ಟ್ ಹನ್ನೆರಡರ ಶನಿವಾರದಂದು ಬೆಂಗಳೂರಿನಲ್ಲಿರುವ ರಾಡಿಸನ್ ಬ್ಲೂ ಏಟ್ರಿಯಾ ಹೋಟೆಲಿನಲ್ಲಿ ಪ್ರಶಸ್ತಿ ವಿತರಿಸಲಾಗುತ್ತದೆ.
ಕಾರವಾರದ ಪತ್ರಕರ್ತರಿಗೆ ಟ್ಯಾಗೋರ್ ಪತ್ರಿಕಾ ಪ್ರಶಸ್ತಿ
ಪತ್ರಿಕೋದ್ಯಮದಲ್ಲಿ ಅಮೋಘ ಸೇವೆ ಸಲ್ಲಿಸಿದ, ಆ ಮೂಲಕ ಸಮಾಜಕ್ಕೆ ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡಿದವರಿಗೆ ಪ್ರಶಸ್ತಿ ಮೀಸಲಾಗಿದೆ. ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ಸಂಘವು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಒಕ್ಕೂಟದಲ್ಲಿ ನೋಂದಣಿ ಆಗಿದೆ. ಸಂಘಕ್ಕೆ ಎಂಬತ್ತೈದು ವರ್ಷಗಳ ಇತಿಹಾಸವಿದ್ದು, 1932ರಲ್ಲಿ ಸಾಹಿತಿ ಡಿ.ವಿ.ಗುಂಡಪ್ಪ ಅವರಿಂದ ಆರಂಭವಾಗಿದೆ.
ಹರ್ಮನ್ (1811-1881) ಅವರು ತಮ್ಮಿಡೀ ವೃತ್ತಿ ಜೀವನವನ್ನು ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಕಳೆದಿರುವುದು ವಿಶೇಷ. ಕನ್ನಡದ ಮೊಟ್ಟಮೊದಲ ಪತ್ರಿಕೆ 'ಮಂಗಳೂರು ಸಮಾಚಾರ'ವನ್ನು ಕನ್ನಡದಲ್ಲಿ ತಂದ ಹೆಗ್ಗಳಿಕೆ ಹರ್ಮನ್ ಮೊಗ್ಲಿಂಗ್ ಅವರದು.