Juice Price: ಬೆಂಗಳೂರಿನಲ್ಲಿ ಜ್ಯೂಸ್ ರೇಟ್ ಕೇಳಿದ್ರೆ ಶಾಕ್; ಎಳನೀರು ಬಲು ದುಬಾರಿ
ಬೆಂಗಳೂರು, ಮೇ 01: ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಬಾರಿಯ ಬೇಸಿಗೆಯ ಬಿಸಿಲಿನ ಝಳಕ್ಕೆ ಸಿಲಿಕಾನ್ ಸಿಟಿ ಜನರು ಹೈರಾಣಿ ಹೋಗಿದ್ದು, ವರುಣನ ಕೃಪೆಗಾಗಿ ಕಾಯುತ್ತಿದ್ದಾರೆ. ಆದರೆ ಬೆಂಗಳೂರಿನ ವಾತಾವರಣ ಮಾತ್ರ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇದೆ.
ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ದಾಖಲೆಯ ತಾಪಮಾನ ದಾಖಲಾಗುತ್ತಿದ್ದು, ಬಿಸಿಲಿನ ಧಗೆ ತಡೆಯಲಾರದೇ ಜನರು ತಂಪು ಪಾನೀಯಗಳತ್ತ ಮುಖ ಮಾಡಿದ್ದಾರೆ. ಕಳೆದ ಮೂರು ತಿಂಗಳಿಂದ ಹಣ್ಣಿನ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿದ್ದು, ಹಣ್ಣಿನ ಜ್ಯೂಸ್ ದರವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಬೇಡಿಕೆ ಹೆಚ್ಚಾದಂತೆ ಬೆಲೆಯೂ ಹೆಚ್ಚಾಗಿದ್ದು, ಕಳೆದ ತಿಂಗಳಿಗೆ ಹೋಲಿಕೆ ಮಾಡಿದರೆ ಈಗ ಜ್ಯೂಸ್ಗಳ ಬೆಲೆಯಲ್ಲಿ ಎರಡಂಕಿಯ ಸಂಖ್ಯೆಯಲ್ಲಿ ದರ ಏರಿಕೆಯಾಗಿದೆ. ಪ್ರತಿ ಜ್ಯೂಸ್ ಬೆಲೆಯೂ 10 ರಿಂದ 20 ರೂಪಾಯಿ ಏರಿಕೆಯಾಗಿದೆ. ಇನ್ನು ಪ್ರತಿದಿನ ಒಂದೊಂದು ಅಂಗಡಿಗಳಲ್ಲಿಯೂ 500 ರಿಂದ 600 ಗ್ಲಾಸ್ ಜ್ಯೂಸ್ಗಳು ಮಾರಾಟ ಆಗುತ್ತಿವೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.
ಇನ್ನು ಬಿಸಿಲಿನಿಂದ ಹಣ್ಣುಗಳ ಬೆಳೆಯಲ್ಲೂ ಕುಂಠಿತವಾಗಿದ್ದು, ಮಾರುಕಟ್ಟೆಗಳಲ್ಲಿ ಹಣ್ಣಿನ ಬೆಲೆ ಏರಿಕೆಯಾಗಿದೆ. ಆದರೆ ಜ್ಯೂಸ್ಗೆ ಗ್ರಾಹಕರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಜನ ಮಧ್ಯಾಹ್ನದ ವೇಳೆ ಜ್ಯೂಸ್ ಸೆಂಟರ್ಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಜ್ಯೂಸ್ ಕುಡಿಯುತ್ತಾರೆ. ಹೀಗಾಗಿ ಅಂಗಡಿ ಮಾಲೀಕರು ಜ್ಯೂಸ್ಗಳ ದರ ಹೆಚ್ಚಿಸಿದ್ದಾರೆ.

ಇದು ಹಣ್ಣುಗಳಿಂದ ಮಾಡುವ ಜ್ಯೂಸ್ ಕಥೆಯಾದರೆ, ನೈಸರ್ಗಿಕವಾದ ಜ್ಯೂಸ್ ಎಳನೀರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ ಅನ್ನುವಂತಾಗಿದೆ. ಸರ್ವ ಕಾಲಕ್ಕೂ ಎಳನೀರಿನ ಬೆಲೆ ಒಂದು ಮಟ್ಟಿಗೆ ಹೆಚ್ಚಾಗಿಯೇ ಇರುತ್ತದೆ. ಆದರೆ ಈ ವರ್ಷದ ಬೇಸಿಗೆಗೆ ಮಾತ್ರ ಗ್ರಾಹಕರಿಗೆ ಶಾಕ್ ಆಗುವ ರೀತಿ ಎಳನೀರಿನ ಬೆಲೆ ಗಗನಕ್ಕೆ ಏರಿಕೆಯಾಗಿದೆ.
ಕಳೆದ ಎರಡು ತಿಂಗಳ ಹಿಂದೆ 35ರಿಂದ 40 ರೂಪಾಯಿ ಇದ್ದ ಏಳನೀರು ಈಗ 50 ರಿಂದ 70 ರೂಪಾಯಿ ವರೆಗೂ ಮಾರಾಟವಾಗುತ್ತಿದೆ. ಕೆಲವರು ಜ್ಯೂಸ್ ಅಂಗಡಿಗಳಲ್ಲಿ ಸಕ್ಕರೆ ಬಳಸುತ್ತಾರೆ ಎನ್ನುವ ಕಾರಣಕ್ಕೆ ಜ್ಯೂಸ್ ಕುಡಿಯದೇ ಏಳನೀರನ್ನು ಹೆಚ್ಚಾಗಿ ಕುಡಿಯುತ್ತಾರೆ. ಆರೋಗ್ಯಕ್ಕೂ ಒಳ್ಳೆಯದಾಗಿರುವ ಕಾರಣ ಎಳನೀರಿನ ಬೆಲೆ ಏರಿಕೆಯಾದರೂ ಗ್ರಾಹಕರು ಮಾತ್ರ ಕಡಿಮೆಯಾಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆಯಾಗಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications