ಒಂದೇ ದಿನ ಗಾಂಧಿ ಜಯಂತಿ-ಪಿತೃಪಕ್ಷ; ಮಾಂಸಪ್ರಿಯರಿಂದ ದೊಡ್ಡ ಡಿಮ್ಯಾಂಡ್
ಈ ವರ್ಷ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಜೊತೆಗೆ ಮಹಾಲಯ ಅಮಾವಾಸ್ಯೆ (ಪಿತೃಪಕ್ಷ) ಕೂಡ ಬಂದಿದೆ. ಇದು ಮಾಂಸಾಹಾರಿಗಳ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಗಾಂಧಿ ಜಯಂತಿ ಹಿನ್ನೆಲೆ ಪ್ರತಿ ವರ್ಷವೂ ಆ ದಿನ ಮಾಂಸಾಹಾರ ನಿಷೇಧ ಮಾಡಲಾಗುತ್ತದೆ. ಆದರೆ, ಪಿತೃಪಕ್ಷಕ್ಕೆ ಬಹುತೇಕರು ಮಾಂಸದ ಖಾದ್ಯಗಳನ್ನೇ ಮಾಡುವ ಪದ್ಧತಿಯಲ್ಲೇ ಬಂದಿದ್ದಾರೆ.
ಮನೆಯ ಹಿರಿಯರಿಗೆ ನೆಚ್ಚಿನ ಮಾಂಸಾಹಾರದ ಖಾದ್ಯಗಳನ್ನು ಸಿದ್ಧಪಡಿಸಿ, ಎಡೆಯಿಟ್ಟು ಮೂಳೆ ಕಡಿಯಬೇಕು ಅಂದುಕೊಂಡಿದ್ದವರಿಗೆ ಬಿಬಿಎಂಪಿ ರೂಲ್ಸ್ ನಿರಾಸೆ ಮೂಡಿಸುವ ಸಾಧ್ಯತೆ. ಇದಕ್ಕೆ ಮುಂಜಾಗ್ರತೆ ವಹಿಸಿರುವ ಮಾಂಸಹಾರಿಗಳು ದಯವಿಟ್ಟು ಮಹಾಲಯ ಅಮಾವಾಸ್ಯೆಯಂದು ಮಾಂಸ ಖರೀದಿಗೆ ಅನುಮತಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಕೂಡ ಅಕ್ಟೋಬರ್ 2ರಂದು ಮಹಾಲಯ ಅಮಾವಾಸ್ಯೆಯ ಪ್ರಯುಕ್ತ ಪಿತೃಪಕ್ಷ ಹಬ್ಬ ಬಂದಿದೆ. ಹಾಗಾಗಿ ಈ ಬಾರಿ ಮಾಂಸ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದೆ.
ಪಿತೃಪಕ್ಷದ ಪ್ರಯುಕ್ತ ಬಹುತೇಕರು ಮಾಂಸಾಹಾರ ಸಿದ್ಧಪಡಿಸಿ, ಮನೆಯಲ್ಲಿ ಅಗಲಿದ ಹಿರಿಯರನ್ನು ನೆನೆದು ಎಡೆ ಹಾಕುತ್ತಾರೆ. ಇದನ್ನು ಜನ ಒಂದು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಪ್ರತಿ ವರ್ಷ ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ಈ ಬಾರಿ ಅದೇ ದಿನ ಹಬ್ಬ ಬಂದಿದೆ. ಆ ನಿಯಮ ಹೇರಿದರೆ, ಪಿತೃಪಕ್ಷ ಆಚರಿಸುವವರಿಗೆ ಭಾರಿ ತೊಂದರೆಯಾಗಲಿದೆ ಎಂದು ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ.ಎನ್.ನಾಗರಾಜು ಕಳವಳ ವ್ಯಕ್ತಪಡಿಸಿದ್ದಾರೆ.
ಹಬ್ಬದ ದಿನ ಮಾಂಸ ಮಾರಾಟಕ್ಕೆ ಅನುವು ಮಾಡಿಕೊಬೇಕು. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಕೂಡ ಮಾಡಿದ್ದೇವೆ. ಆದರೆ ಅಲ್ಲಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಅಂದು ಮಾಂಸ ಮಾರಾಟಕ್ಕೆ ಅವಕಾಶ ನೀಡದಿದ್ದರೆ ಅದನ್ನು ಮೊದಲೇ ತಿಳಿಸಬೇಕು. ಹಬ್ಬ ಆಚರಿಸುವವರು ಮರುದಿನಕ್ಕೆ ಮುಂದೂಡಬಹುದು. ಆ ದಿನವೇ ಪಿತೃಪಕ್ಷವನ್ನು ಆಚರಿಸಿ ಮಾಂಸಾಹಾರದ ಎಡೆ ಇಟ್ಟು ಸಂಪ್ರದಾಯ ಪಾಲಿಸುವುದು ಒಳ್ಳೆಯ ಪರಿಹಾರ ಎಂದಿದ್ದಾರೆ.
ಮಹಾತ್ಮಾ ಗಾಂಧಿ ಅವರು ಶಾಂತಿ ಪ್ರಿಯರಾದ ಕಾರಣ ಆ ಅವರ ಹುಟ್ಟುಹಬ್ಬವನ್ನು ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ. ಹಾಗಾಗಿ ಅಕ್ಟೋಬರ್ 2ರಂದು ದೇಶದೆಲ್ಲೆಡೆ ಮಾಂಸ ಹಾಗೂ ಮದ್ಯ ಮಾರಾಟವನ್ನು ಪ್ರತಿ ವರ್ಷ ನಿಷೇಧಿಸಲಾಗುತ್ತದೆ. ಅಲ್ಲಿನ ಸ್ಥಳೀಯ ಆಡಳಿತಗಳು ಈ ಬಗ್ಗೆ ಆದೇಶ ಹೊರಡಿಸುತ್ತವೆ. ಹಾಗಾಗಿ ಅಂದು ಮಾಂಸ ಮಾರಾಟ ನಿಷಿದ್ಧ. ಈ ಬಾರಿ ಹಬ್ಬದ ಆಚರಣೆಯ ಹುರುಪಿನಲ್ಲಿದ್ದವರು, ಬಾಡೇ ನಮ್ ಗಾಡು...ಮಾಂಸವಿಲ್ಲದಿದ್ದರೆ ಹಬ್ಬವೇ ಅಪೂರ್ಣ ಎಂದು ಬೇಸರ ಹಂಚಿಕೊಳ್ಳುತ್ತಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications