Bengaluru Rains : ಬೆಂಗಳೂರು ನಗರದಲ್ಲಿ ಶುಕ್ರವಾರ ತುಂತುರು ಮಳೆಯ ಸಿಂಚನ
ಬೆಂಗಳೂರು, ನವೆಂಬರ್ 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಳೆಯ ವಾತಾವರಣ ಕಂಡು ಬರುತ್ತಿದ್ದು, ಶುಕ್ರವಾರ ನಗರದ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಆಗಿದೆ. ಈ ವಾತಾವರಣ ಮುಂದಿನ ನಾಲ್ಕು ದಿನ ಮುಂದುವರಿಯಲಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ (ಕೆಎಸ್ಎನ್ಡಿಎಂಸಿ) ಕೇಂದ್ರದ ಮಳೆ ಮುನ್ಸೂಚನೆ ಪ್ರಕಾರ, ನವೆಂಬರ್ 15ರವೆರೆಗೆ ಮುಂದಿನ ನಾಲ್ಕು ದಿನ ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ತುಂತರು ಇಲ್ಲವೆ ಹಗುರದಿಂದ ಮಳೆ ಯಾಗಲಿದೆ. ಒಂದೆರಡು ಕಡೆ ಗುಡುಗು ಸಹಿ ಜೋರು ಮಳೆ ಬರಬಹುದು ಎಂದು ಅಂದಾಜಿಸಲಾಗಿದೆ.
ಶುಕ್ರವಾರ ಬೆಳಗ್ಗೆಯಿಂದಲೂ ನಗರದೆಲ್ಲಡೆ ಮೋಡ ಕವಿದ, ಚಳಿಯ ವಾತಾವರಣ ಸೃಷ್ಟಿಯಾಗಿದೆ. ಹೂಡಿ, ಆಡುಗೋಡಿ, ವರ್ತೂರು, ಮೆಜಸ್ಟಿಕ್ ಸುತ್ತಮುತ್ತಲಿನ ಪ್ರದೇಶ, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ ಸೇರಿದಂತೆ ವಿವಿಧೆಡೆ ಹಗುರವಾಗಿ ಮಳೆಯಾಗಿದೆ. ಎಲ್ಲೆಡೆ ತೇವಾಂಶದಿಂದ ಕೂಡಿದ ಗಾಳಿ ಬೀಸುವಿಕೆ ಪ್ರಮಾಣ ಹೆಚ್ಚಾಗಿ ಕಂಡು ಬಂತು. ಇಂದು ಸಂಜೆ ಸಹ ನಗರದ ಕೆಲವು ಬಡಾವಣೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬೀಳುವ ಸಾಧ್ಯತೆ ಇದೆ.

ಕಳೆದ ಒಂದು ವಾರದಿಂದ ನಗರದಲ್ಲಿ ಗರಿಷ್ಠ ತಾಪಮಾನ 24ರಿಂದ 25ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ನವೆಂಬರ್ 15ರ ನಂತರ ಗರಿಷ್ಠ ತಾಪಮಾನ 27-28ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕನಿಷ್ಠ 19ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಮಳೆಯಲ್ಲೇ ಮೋದಿ ಕಂಡ ಅಭಿಮಾನಿಗಳು
ಬೆಂಗಳೂರಿಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲವು ಕಾರ್ಯಕ್ರಮದಲ್ಲಿ ಭಾಗವಹಿದರು. ಅದಕ್ಕು ಮುನ್ನ ವಿಧಾನಸೌಧ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಸಮಾರಂಭಗಳಲ್ಲಿ ನರೇಂದ್ರ ಮೋದಿ ಪಾಲ್ಗೊಂಡರು. ಈ ವೇಳೆ ಪ್ರಧಾನಿಯನ್ನು ಕಾಣಲು ದೂರದ ಊರಿನಿಂದ ಬಂದ ಅಭಿಮಾನಿಗಳು, ಕಾರ್ಯಕರ್ತರು ಬೆಳಗ್ಗೆಯಿಂದ ಇದ್ದ ಮಬ್ಬು ವಾತಾವರಣ, ತುಂತುರು ಮಳೆಯಲ್ಲೇ ಕಾದರು. ನಂತರ ಹೆಬ್ಬಾಳದ ತೆರಳುತ್ತಿದ್ದ ಪ್ರಧಾನಿಯನ್ನು ಅಭಿಮಾನಿಗಳು ಕಣ್ತುಂಬಿಕೊಂಡರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ











Click it and Unblock the Notifications