ಸಿರ್ಸಿ ವೃತ್ತ ಮೇಲ್ಸೇತುವೆಯ ಇನ್ನೊಂದು ಬದಿಯ ದುರಸ್ತಿ ಕಾಮಗಾರಿ ಕೇಳೋರಿಲ್ಲ
ಬೆಂಗಳೂರು, ಅಕ್ಟೋಬರ್ 19: ಮೆಜೆಸ್ಟಿಕ್-ಕೃಷ್ಣರಾಜ ಮಾರುಕಟ್ಟೆ ಸೇರಿದಂತೆ ಕೆಲವು ಭಾಗಗಳಿಗೆ ಸಂಪರ್ಕ ಕಲ್ಪಿಸುವ ಬಾಲಗಂಗಾಧರ ನಾಥ ಸ್ವಾಮೀಜಿ ಮೇಲ್ಸೇತುವೆ ಒಂದು ಭಾಗದ ದುರಸ್ತಿ ಕಾಮಗಾರಿ ಮುಗಿದು ಅರ್ಧ ವರ್ಷವೇ ಕಳೆದರೂ ಮತ್ತೊಂದು ಬದಿಯ ಕಾಮಗಾರಿ ಇನ್ನೂ ಆರಂಭವಾಗಿಲ್ಲ.
ಇದರಿಂದ ದುರಸ್ತಿಯಾಗಿರುವ ಮಾರ್ಗದಲ್ಲಿ ರಸ್ತೆಯುದ್ದಕ್ಕೂ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗುತ್ತಿದೆ. ಆದರೂ ಬಿಬಿಎಂಪಿ ಮಾತ್ರ ಈ ರಸ್ತೆ ದುರಸ್ತಿಗೆ ಟೆಂಡರ್ ನೀಡಿರುವ ಗುತ್ತಿಗೆದಾರರಿಂದ ಏಳೆಂಟು ತಿಂಗಳು ಕಳೆದರೂ ಇನ್ನೊಂದು ಬದಿ ರಸ್ತೆಯ ದುರಸ್ತಿ ಕಾಮಗಾರಿ ಆರಂಭಿಸಲು ಮುಂದಾಗಿಲ್ಲ.

ಸಿರ್ಸಿ ಸರ್ಕಲ್ ಮೇಲ್ಸೇತುವೆ ದುರಸ್ತಿಗೆ 4.30 ಕೋಟಿ ರೂ ಟೆಂಡರ್
ಸಿರ್ಸಿ ಸರ್ಕಲ್ ಮೇಲ್ಸೇತುವೆ ದುರಸ್ತಿಗೆ 4.30 ಕೋಟಿ ರೂ ಟೆಂಡರ್ ನೀಡಿದ್ದ ಬಿಬಿಎಂಪಿ , 2018ರ ಡಿಸೆಂಬರ್ನಲ್ಲಿ ಪುರಭವನದ ಮುಂಭಾಗದಿಂದ ಮೈಸೂರು ರಸ್ತೆ ಕಡೆಗೆ ಹೋಗುವ ಒಂದು ಮಾರ್ಗದ ದುರಸ್ತಿ ಕಾರ್ಯ ಆರಂಭಿಸಿ ಮಾರ್ಚ್ ವೇಳೆಗೆ ಮುಗಿಸಲಾಗಿತ್ತು. ಆ ನಂತರ 45 ದಿನಗಳಲ್ಲಿ ಮೈಸೂರು ರಸ್ತೆಯಿಂದ ಕೆಆರ್ ಮಾರುಕಟ್ಟೆ , ಪುರಭವನ ಕಡೆ ಬರುವ ಮಾರ್ಗದ ದುರಸ್ತಿ ನಡೆಯಬೇಕಿತ್ತು. ಆದರೆ, ಆರೇಳು ತಿಂಗಳಾದರೂ ದುರಸ್ತಿ ಕಾರ್ಯ ಆರಂಭವಾಗಿಲ್ಲ. ಇದರಿಂದ ನಿತ್ಯ ನಗರವಷ್ಟೇ ಅಲ್ಲದೆ ಹೊರ ಜಿಲ್ಲೆಗಳಿಂದ ಬರುವ ಸವಾರರಿಗೂ ತೊಂದರೆಯಾಗುತ್ತಿದೆ.

ವೈಟ್ ಟಾಪಿಂಗ್ ಕಾಮಗಾರಿಗೆ ತಡೆ
ಈ ಕುರಿತು ಬಿಬಿಎಂಪಿಅಧಿಕಾರಿಗಳನ್ನು ಪ್ರಶ್ನಿಸಿದರೆ ಮೈಸೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದ ಕಾರಣಕ್ಕೆ ಮೇಲ್ಸೇತುವೆಯ ಎರಡೂ ಬದಿಯ ದುರಸ್ತಿಯನ್ನು ಒಂದೇ ಸಲ ನಡೆಸಿದರೆ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ತೀವ್ರಗೊಳ್ಳಲಿದೆ ಎಂಬ ಪೊಲೀಸರ ಸಲಹೆ ಮೇರೆಗೆ ಒಂದು ಬದಿಯ ದುರಸ್ತಿಯನ್ನು ಮಾತ್ರ ಮಾಡಲಾಗಿತ್ತು. ಮೈಸೂರು ರಸ್ತೆಯಲ್ಲಿ ಸ್ಥಗಿತಗೊಂಡಿದ್ದ ವೈಟ್ ಟಾಪಿಂಗ್ ಕಾಮಗಾರಿ ಮತ್ತೆ ಪ್ರಾರಂಭವಾಗಿದ್ದರಿಂದ ಮೇಲ್ಸೇತುವೆಯ ಮತ್ತೊಂದು ಬದಿಯ ದುರಸ್ತಿ ಆರಂಭಿಸಲು ಆಗಿರಲಿಲ್ಲ.

ಫ್ಲೈಓವರ್ ನ ಪಿಲ್ಲರ್ ಜೋಡಿಸುವ ಕೊಂಡಿಯಿಂದಲೇ ಅಪಾಯ
ಫ್ಲೈ ಓವರ್ನ ಪಿಲ್ಲರ್ಗಳನ್ನು ಒಂದಕ್ಕೊಂದು ಜೋಡಿಸುವ ಕೊಂಡಿಗಳೇ ಇಲ್ಲಿ ಪ್ರಾಣಕ್ಕೆ ಕಂಟಕವಾಗಿದೆ. ಒಂದು ಎತ್ತರವಿದ್ದರೆ , ಇನ್ನೊಂದು ತಗ್ಗು, ನಯ-ನಾಜೂಕಿಲ್ಲದ ಕೆಲಸ ಮಾಡಲಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೋಚರಿಸಲಿದೆ. ಕೆಲವು ಕೊಂಡಿಗಳಂತೂ ಕಿತ್ತೇ ಬರುತ್ತದೆ ಎನ್ನುವಷ್ಟು ಸಡಿಲವಾಗಿದೆ.

ಏಳು ತಿಂಗಳ ಹಿಂದೆ ಒಂದು ಬದಿ ಕಾಮಗಾರಿ ನಡೆದಿತ್ತು
ಸಿರ್ಸಿ ಮೇಲ್ಸೇತುವೆಯ ಕಾಮಗಾರಿ ಮುಗಿದು ಆರೇಳು ತಿಂಗಳುಗಳು ಕಳೆದಿದೆ ಆದರೂ ಮತ್ತೊಂದು ಬದಿಯ ಕಾಮಗಾರಿಯನ್ನು ಆರಮಭಿಸಲು ಬಿಬಿಎಂಪಿ ಒಲವು ತೋರಿಸುತ್ತಿಲ್ಲ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications