ಸಮವಸ್ತ್ರ ವಿಚಾರವಾಗಿ ಸರ್ಕಾರ ಏಕಾಏಕಿ ಹೊಸ ಮಾರ್ಗಸೂಚಿ ನೀಡಿದ್ದೇಕೆ?; ಡಿಕೆಶಿ
ಬೆಂಗಳೂರು, ಫೆಬ್ರವರಿ 18: "ದೇಶದ ಸಂವಿಧಾನದಲ್ಲಿ ಮಕ್ಕಳ ಶಿಕ್ಷಣಕ್ಕೆ ವಿಶೇಷ ಹಕ್ಕು ನೀಡಲಾಗಿದೆ. ಶಾಲೆ, ಕಾಲೇಜು ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಪಡೆಯಲು ಅವರಿಗೆ ಈ ಹಕ್ಕಿನ ಮೂಲಕ ಅವಕಾಶ ನೀಡಲಾಗಿದೆ. ಅವರವರ ಧರ್ಮ ಹಾಗೂ ಭಾವನೆ ರಕ್ಷಣೆಯಲ್ಲೂ ಅವರಿಗೆ ಹಕ್ಕಿದೆ," ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.
ಶುಕ್ರವಾರ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, "ಸಮವಸ್ತ್ರದ ವಿಚಾರದಲ್ಲಿ ಇದುವರೆಗೂ ಯಾರಿಗೂ ನಿರ್ಬಂಧವಿರಲಿಲ್ಲ. ಸರ್ಕಾರ ಫೆ.5ರವರೆಗೂ ಈ ವಿಚಾರದಲ್ಲಿ ಯಾವುದೇ ಮಾರ್ಗಸೂಚಿ ನೀಡಿರಲಿಲ್ಲ. ಆದರೆ ಸರ್ಕಾರ ಈಗ ಏಕಾಏಕಿ ಈ ಹೊಸ ಮಾರ್ಗಸೂಚಿ ನೀಡಿರುವುದೇಕೆ?," ಎಂದು ಪ್ರಶ್ನಿಸಿದರು.
"ಇದು ಕೇವಲ ಒಂದು ಶಾಲೆ ಸಮಸ್ಯೆಯಾಗಿ ಉಳಿದುಕೊಂಡಿಲ್ಲ. ಜೈನ ಧರ್ಮವಾಗಲಿ, ಸಿಖ್ ಧರ್ಮವಾಗಲಿ ಹಾಗೂ ಇತರೆ ಧರ್ಮದವರು ತಮ್ಮ ಆಚರಣೆ ಭಾಗವಾಗಿ ತಲೆಗೆ ಬಟ್ಟೆ ಕಟ್ಟಿಕೊಳ್ಳುತ್ತಾರೆ. ಇದು ಕೇವಲ ಸ್ಕಾರ್ಫ್ ಮಾತ್ರ".

"ಅಲ್ಪಸಂಖ್ಯಾತರಲ್ಲಿ ಕೆಲವರು ಇದನ್ನು ಹಾಕಿಕೊಂಡರೆ ಮತ್ತೆ ಕೆಲವರು ಹಾಕಿಕೊಳ್ಳುವುದಿಲ್ಲ. ಇದನ್ನು ಹಾಕಲೇಬೇಕು ಅಥವಾ ಹಾಕಲೇಬಾರದು ಎಂದು ಆದೇಶಿಸಲು ಸಾಧ್ಯವಿಲ್ಲ. ಈಗ ಮೂಲಭೂತ ಹಕ್ಕಿಗೇ ಧಕ್ಕೆಯಾಗಿದೆ," ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
Koo Appಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ದೇಶದ ಹಿತಾಸಕ್ತಿ ಹಾಗೂ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡುತ್ತಿದ್ದೇವೆ. ಭಾರತದ ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಗೌರವಿಸುವುದು ಮೂಲಭೂತ ಹಕ್ಕು ಎಂದು ಸಂವಿಧಾನದ ವಿಧಿ 51ಎ ಹೇಳುತ್ತದೆ. ಜನಪ್ರತಿನಿಧಿಗಳಾಗಿ, ಭಾರತೀಯರಾಗಿ ನಾವು ರಾಷ್ಟ್ರಧ್ವಜಕ್ಕೆ ಅಪಮಾನ ಎಸಗುವ ಯಾವ ತಪ್ಪನ್ನೂ ಮಾಡಿಲ್ಲ. 1/5 - D K Shivakumar (@dkshivakumar_official) 18 Feb 2022
"ಈ ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಇದರ ಹೊರತಾಗಿಯೂ ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವರು, ಕೇವಲ ಪ್ರಾಥಮಿಕ ಶಿಕ್ಷಣದಲ್ಲಿ ಮಾತ್ರ ಗೊಂದಲವಿದ್ದು, ಉನ್ನತ ಶಿಕ್ಷಣ ಕಾಲೇಜುಗಳಲ್ಲಿ ಈ ಸಮಸ್ಯೆ ಇಲ್ಲ," ಎಂದು ಹೇಳುತ್ತಿದ್ದಾರೆ.
ಸರ್ಕಾರ ಅಭಿವೃದ್ಧಿ ಸಮಿತಿ ಎಲ್ಲಿದೆ ಎಂದು ತೋರಿಸಲಿ. ಈಗ ಅವರು ಹೊಸದಾಗಿ ಈ ಸಮಿತಿ ರಚಿಸಲು ಸಾಧ್ಯವಿಲ್ಲ. ಯಾವುದೇ ಸಂಸ್ಥೆ ಪ್ರಾರಂಭವಾಗಬೇಕಾದರೆ ಆರಂಭದಲ್ಲಿ ಸರ್ಕಾರ ಮಾರ್ಗದರ್ಶನ ನೀಡಿರುತ್ತದೆ. ಆದರೆ ಈಗ ಅದನ್ನು ಮಧ್ಯದಲ್ಲಿ ಮಾಡಲು ಸಾಧ್ಯವಿಲ್ಲವೆಂದರು.
"ನಾನು ಒಬ್ಬ ಅಧಿಕಾರಿಯನ್ನೂ ಈ ವಿಚಾರದಲ್ಲಿ ದೂರಲು ಇಚ್ಛಿಸುವುದಿಲ್ಲ. ಸರ್ಕಾರದ ಒತ್ತಡ ಇಲ್ಲದೇ ಅಧಿಕಾರಿ ಇಂತಹ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ. ಪೊಲೀಸರಿಗೂ ಶಿಕ್ಷಣ ಸಂಸ್ಥೆಗಳಿಗೆಗೂ ಏನು ಸಂಬಂಧ? ಪೊಲೀಸ್ ಅಧಿಕಾರಿಗಳು ಎಲ್ಲರಿಗೂ ನೀವು ಇದೇ ರೀತಿ ಮಾಡಬೇಕು ಎಂದು ಸೂಚನೆ ನೀಡುತ್ತಿರುವುದೇಕೆ?," ಎಂದು ಪ್ರಶ್ನೆ ಮಾಡಿದರು.

ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಈ ದೇಶದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಪಡಿಸಲು ಅವರಿಗೇನು ಹಕ್ಕಿದೆ? ಈ ಸಮುದಾಯದ ಹೆಣ್ಣುಮಕ್ಕಳು ಏಕಾಏಕಿಯಾಗಿ ಹಿಜಾಬ್ ಧರಿಸುತ್ತಿಲ್ಲ. ಇಷ್ಟು ದಿನಗಳ ಕಾಲವೂ ಅವರು ಹಿಜಾಬ್ ಧರಿಸುತ್ತಿದ್ದರು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಅನೇಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲೂ ಮುಸಲ್ಮಾನ ಹೆಣ್ಣುಮಕ್ಕಳು ಹಿಜಾಬ್ ಧರಿಸಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ಹೇಳಿದರು.
ಶಿಕ್ಷಣ ಸಂಸ್ಥೆಗೆ ಸೇರುವಾಗ ಜಾತಿ, ಧರ್ಮ ನೋಡಿಕೊಂಡು ಸೇರಲು ಸಾಧ್ಯವೇ? ಒಂದೊಂದು ಧರ್ಮಕ್ಕೆ ಒಂದೊಂದು ವಿದ್ಯಾಭ್ಯಾಸ ಮಾಡಲು ಸಾಧ್ಯವೇ? ಜನ ತಮ್ಮ ಧರ್ಮಕ್ಕೆ ಅನುಸಾರವಾಗಿ ಮೂಗುತಿ, ಓಲೆ, ಜನಿವಾರ, ಸ್ಕಾರ್ಫ್ ಧರಿಸುತ್ತಾರೆ. ಅದನ್ನು ಬೇಡ ಎಂದು ಹೇಳಲು ಸಾಧ್ಯವೇ? ಹಾಗೆ ಹೇಳಲು ಆಗುತ್ತದೆಯೇ?
ಈ ಘಟನೆಯಿಂದ ದೇಶದ ಮುಂದೆ ರಾಜ್ಯಕ್ಕೆ ಕಳಂಕ ಬರುತ್ತಿದೆ. ಬಿಜೆಪಿ ಸರ್ಕಾರ ಈ ವಿಚಾರದಿಂದ ಕೇವಲ ಶಾಂತಿಯನ್ನು ಮಾತ್ರ ಕದಡುತ್ತಿಲ್ಲ. ಮುಂದೆ ಕರ್ನಾಟಕ ರಾಜ್ಯದಲ್ಲಿ ಯಾರು ಕೂಡ ಬಂಡವಾಳ ಹೂಡುವುದಿಲ್ಲ. ಇದರಿಂದ ನಿರುದ್ಯೋಗ ಸೃಷ್ಟಿಯಾಗುತ್ತದೆ. ಇದರಿಂದ ನಾಗರಿಕ ದಂಗೆ ಆಗುತ್ತವೆ. ಇದಕ್ಕೆಲ್ಲ ನೀವೇ ಅಡಿಪಾಯ ಹಾಕುತ್ತಿದ್ದೀರಿ ಎಂದು ಸರ್ಕಾರವನ್ನು ದೂಷಿಸಿದರು.
ಜಾಗತಿಕ ಬಂಡವಾಳ ಹೂಡಿಕೆ ಆರಂಭಿಸಿದ್ದು ಕಾಂಗ್ರೆಸ್
ಈ ದೇಶದಲ್ಲಿ ಜಾಗತಿಕ ಬಂಡವಾಳ ಹೂಡಿಕೆಯನ್ನು ಮೊದಲ ಬಾರಿಗೆ ಆರಂಭಿಸಿದ್ದೇ ಕರ್ನಾಟಕ ರಾಜ್ಯದಲ್ಲಿ. ಅದೂ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ. ಈಗಿನ ಬೆಳವಣಿಗೆ ಹೀಗೆ ಮುಂದುವರಿದರೆ ಮುಂದೆ ಯಾರೂ ಕೂಡ ಬಂಡವಾಳ ಹೂಡಿಕೆಗೆ ಮುಂದೆ ಬರುವುದಿಲ್ಲ. ದೇಶದ ಆರ್ಥಿಕತೆ ಮೇಲೆ ಇದು ಪರಿಣಾಮ ಬೀರಲಿದೆ. ಇದನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಹೀಗಾಗಿ ರಾಜಕೀಯ ಸ್ವಾರ್ಥ ಬದಿಗಿಟ್ಟು, ಈ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಗೆ ನಾವು ಹೋರಾಟ ಮಾಡಬೇಕಾಗಿದೆ ಎಂದರು.
ಇದುವರೆಗೂ ಹೇಗೆ ಎಲ್ಲವೂ ಸರಾಗವಾಗಿ ನಡೆದುಕೊಂಡು ಹೋಗುತ್ತಿತ್ತೋ, ಅದೇ ರೀತಿ ಮುಂದುವರಿಸಿಕೊಂಡು ಹೋಗಲು ಅವಕಾಶ ಕಲ್ಪಿಸಬೇಕು. ನ್ಯಾಯಾಲಯದ ಆದೇಶ ಪಾಲಿಸೋಣ. ಕೋರ್ಟ್ ಆದೇಶ ತಿರುಚಿ ಅಧಿಕಾರಿಗಳ ಮೂಲಕ ಕಿರುಕುಳ ನೀಡಿದರೆ, ಅವರ ಭವಿಷ್ಯ ಏನಾಗಬೇಕು? ಯಾರಾದರೂ ಧರ್ಮ ಬಿಡಲು ಸಾಧ್ಯವೇ? ನನಗೆ ಯಾರಾದರೂ ಬಂದು ಧರ್ಮ, ಹೆಸರು ಬದಲಾಯಿಸಿಕೊಳ್ಳಿ ಎಂದರೆ ನಾನು ಬದಲಾಯಿಸಿಕೊಳ್ಳುವುದಿಲ್ಲ. ಈ ದೇಶದಲ್ಲಿ ಎಲ್ಲ ಧರ್ಮಗಳ ಸಂಸ್ಕೃತಿ ಕಾಪಾಡಿಕೊಂಡು ಹೋಗುವುದೇ ನಮ್ಮ ಶಕ್ತಿ. ಇದನ್ನು ಹಾಳು ಮಾಡಲು ಹೊರಟಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸರ್ಕಾರ ಮಕ್ಕಳ ಭವಿಷ್ಯದ ಜತೆ ಆಟವಾಡುತ್ತಿದೆ. ಇಂತಹ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರ್ಕಾರದ ಜವಾಬ್ದಾರಿ ಅಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್, ಕುವೆಂಪು ಅವರೆಲ್ಲ ಏನು ಹೇಳಿದ್ದಾರೋ ಅದನ್ನೇ ಪಾಲಿಸಿ ಎಂದು ನಾವು ಹೇಳುತ್ತಿದ್ದೇವೆ.
ಇಂದು ಕೆಲವು ಕಡೆಗಳಲ್ಲಿ ಕುಂಕುಮ ತೆಗೆಸಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, 'ಕುಂಕುಮವನ್ನು ತೆಗೆಸಬಾರದು, ಸ್ಕಾರ್ಫ್ ಅನ್ನೂ ತೆಗೆಸಬಾರದು. ಇಷ್ಟು ದಿನ ಹೇಗೆ ನಡೆದುಕೊಂಡು ಬಂದಿದೆಯೋ ಅದನ್ನೇ ಮುಂದುವರಿಸಬೇಕು. ಹೊಸದಾಗಿ ಏನನ್ನೂ ಆರಂಭಿಸುವುದು ಬೇಡ,'' ಎಂದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications