ಬೆಂಗಳೂರಿನಲ್ಲಿ ಮತ್ತೆ ಸ್ಟೀಲ್ ಬ್ರಿಡ್ಜ್ ಸದ್ದು!
ಬೆಂಗಳೂರು, ಜೂನ್ 8: ಒಂದು ಕಾಲದಲ್ಲಿ ಉದ್ಯಾನ ನಗರಿ ಹಸಿರು ಪ್ರೇಮಿಗಳ ನಿದ್ದೆಗೆಡಿಸಿದ್ದ ಉಕ್ಕಿನ ಸೇತುವೆ, ಸಾರ್ವಜನಿಕರ ಒಗ್ಗಟ್ಟಿನ ಹೋರಾಟದಿಂದ ತಣ್ಣಗಾಗಿದೆ. ಆದರೆ ಮತ್ತೀಗ ಉಕ್ಕಿನ ಸೇತುವೆಯ ಬಗ್ಗೆ ಮಾತುಕತೆ ನಡೆಯುತ್ತಿದೆ. ಆದರೆ ಈ ಉಕ್ಕಿನ ಸೇತುವೆಯನ್ನು ಶಿವಾನಂದ ಸರ್ಕಲ್ ಬಳಿ ನಿರ್ಮಾಣಮಾಡುವ ಯೋಜನೆಯಿದೆ.
ಶಿವಾನಂದ ವೃತ್ತದ ಬಳಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಹರೇಕೃಷ್ಣ ರಸ್ತೆ ರೈಲ್ವೆ ಕೆಳಸೇತುವೆ ಬಳಿಯಿಂದ ರೇಸ್ ಕೋರ್ಸ್ ರಸ್ತೆವರೆಗೆ ಉಕ್ಕಿನ ಸೇತುವೆ ನಿರ್ಮಿಸುವ ಯೋಜನೆಗೆ ಜೂನ್ 7 ರಂದು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಯೋಜನೆಯ ವೆಚ್ಚ ರೂ.19.86 ಕೋಟಿ ಎಂದು ಅಂದಾಜಿಸಲಾಗಿದೆ.[ಏನಿದು ಉಕ್ಕಿನ ಮೇಲ್ಸೇತುವೆ ಯೋಜನೆ? ಏಕೆ ವಿರೋಧ?]

1 ಕಿ.ಮೀ.ಉದ್ದದ ಈ ಸೇತುವೆ ರೇಸ್ ಕೋರ್ಸ್ ರಸ್ತೆ ಮತ್ತು ಶೇಷಾಂದ್ರಿಪುರಂ ಅನ್ನು ಬೆಸೆಯಲಿದೆ. ಈ ಯೋಜನೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅನುಷ್ಠಾನಗೊಳಿಸಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಳಿ ಮತ್ತು ರೈಲ್ವೆ ಕೆಳಸೇತುವೆಯ ಬಳಿ ಉಕ್ಕಿನ ಸೇತುವೆಯ ಡೌನ್ ರ್ಯಾಂಪ್ ಇರಲಿದೆ.[ಸ್ಟೀಲ್ ಫ್ಲೈಓವರ್ ನಿರ್ಮಾಣಕ್ಕೆ ಮುನ್ನವೇ ಕುಸಿತ, 65 ಕೋಟಿ ಕಥೆ ಏನಾಯ್ತು?]
ಬಸವೇಶ್ವರ ವೃತ್ತ ಹಾಗೂ ಹೆಬ್ಬಾಳದ ನಡುವೆ 6.5 ಕಿ.ಮೀ. ಉದ್ದದ ಉಕ್ಕಿನ ಸೇತುವೆ ನಿರ್ಮಿಸುವ 1,791 ಕೋಟಿ ರೂ. ಯೋಜನೆ ಪರಿಸರ ಪ್ರೇಮಿಗಳ ಹೋರಾಟದಿಂದಾಗಿ ನಿಂತಿದ್ದನ್ನು ಇಲ್ಲಿ ಸ್ಮರಿಸಬಹುದು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications